ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಸವಾಲೆಸೆದ 15ರ ಬಾಲಕಿ
ನವದೆಹಲಿ, ಜುಲೈ, 23: ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ಗೆ ಸವಾಲು ಎಸೆದಿದ್ದ ಬಾಲಕಿ ಇದೀಗ ಸ್ವಾತಂತ್ರ್ಯ ದಿನಾಚರಣೆಯಂದು ಶ್ರೀನಗರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತೇನೆ ಎಂದು ಹೇಳಿದ್ದಾಳೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವಾಗ ಪ್ರಜ್ಞೆ ಇರಲಿ. ಅವರು ಜನರು ಆಯ್ಕೆ ಮಾಡಿರುವ ಪ್ರತಿನಿಧಿ. ಅವರ ವಿರುದ್ಧ ಮಾತನಾಡುವುದಕ್ಕೂ ಮುಂಚೆ ಎರಡು ಬಾರಿ ಯೋಚನೆ ಮಾಡಿ. ಮೋದಿ ಅವರನ್ನು ನಿಂದಿಸುವುದು ಸರಿಯಲ್ಲ. ಅವರ ಕುರಿತು ಕೆಟ್ಟಭಾಷೆ ಬಳಸುವುದು ಒಳ್ಳೆಯದಲ್ಲ ಎಂದು ಪಂಜಾಬ್ ರಾಜ್ಯದ ಲುಧಿಯಾನ ಝಾನ್ವಿ ಎಚ್ಚರಿಸಿದ್ದರು.[ಕನ್ಹಯ್ಯನಿಗೆ ಸವಾಲೆಸೆದ ಬಾಲಕಿಯನ್ನು ಮೆಚ್ಚಲೇಬೇಕು]

ಕಾಶ್ಮೀರದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದೇಶವನ್ನು ಅವಮಾನಿಸಿದ್ದಾರೆ. ಪಾಕ್ ಧ್ವಜ ಹಾರಿಸಲಾಗಿದೆ. ನಮ್ಮ ದೇಶದ ಹಿರಿಮೆ ಸಾರಲು ಹಿಂಸಾಚಾರದಲ್ಲಿ ನಲುಗಿರುವ ಶ್ರೀನಗರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇನೆ. ಯಾರು ಬಂದು ತಡೆಯುತ್ತಾರೆ ನೋಡೋಣ ಎಂದು ಹೇಳಿದ್ದಾಳೆ.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಶ್ಲಾಘಿಸಿರುವ ಝಾನ್ವಿ ಬೆಹಾಲ್, ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಭಂಗ ತರುವವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾಳೆ.[ಕಾಶ್ಮೀರದಲ್ಲಿ ಹಿಂಸಾಚಾರ ಹುಟ್ಟಿಕೊಂಡಿದ್ದು ಹೇಗೆ?]
"I Will Hoist Tricolour At Lal Chowk in #Srinagar on Aug 15, Koi Rok Sake To Rok Le" -Ludhiana Student Jhanvi Behal pic.twitter.com/k2zuwz1zln
— Sir Ravindra Jadeja (@SirJadejaaaa) July 23, 2016
ಸಾಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲತೆ, ವಯಸ್ಕರ ಚಿತ್ರಗಳನ್ನು ನಿಷೇಧಿಸಬೇಕು ಎಂದು ಹರ್ಯಾಣ ಹೈಕೋರ್ಟಿನಲ್ಲಿ ರಿಟ್ ಪಿಟೀಷನ್ ಹಾಕಿ ಝಾನ್ವಿಸುದ್ದಿ ಮಾಡಿದ್ದರು. ಸದ್ಯ ರಕ್ಷಾ ಜ್ಯೋತಿ ಫೌಂಡೇಷನ್ ಎಂಬ ಸರ್ಕಾರೇತರ ಸಂಸ್ಥೆಯ ಸಕ್ರಿಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications