Assembly Election 2024: 83,700 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
Jharkhand Assembly Election 2024: ಜಾರ್ಖಂಡ್ ಚುನಾವಣೆಗೆ ವಿಧಾನಸಭೆ ಚುನಾವಣೆಗೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಮಾತ್ರ ಅಬ್ಬರ ಪ್ರಚಾರ ಆರಂಭಿಸಿದ್ದಾರೆ. ಇನ್ನು ಇಂದು (ಅಕ್ಟೋಬರ್ 2) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರ್ಖಂಡ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಇತ್ತೀಚೆಗಷ್ಟೇ ಜಾರ್ಖಂಡ್ನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡಿದ್ದರು. ಇದೀಗ ಜಾರ್ಖಂಡ್ನಲ್ಲಿ 83,700 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಅಕ್ಟೋಬರ್ 02) ಚಾಲನೆ ನೀಡಿದರು. ಇದೀಗ ಜಾರ್ಖಂಡ್ನ ಹಜಾರಿಬಾಗ್ನಲ್ಲಿ 78,150 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನಕ್ಕೆ ಪ್ರಧಾನಿ ಚಾಲನೆ ನೀಡಿದರು.

ಈ ಮೂಲಕ ದೇಶಾದ್ಯಂತ ಬುಡಕಟ್ಟು ಜನಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯಿಂದ 30 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 549 ಜಿಲ್ಲೆಗಳ 5 ಕೋಟಿಗೂ ಹೆಚ್ಚು ಬುಡಕಟ್ಟು ಜನಾಂಗದವರಿಗೆ ಪ್ರಯೋಜನ ಸಿಗಲಿದೆ. 1,360 ಕೋಟಿ ರೂಪಾಯಿ ಮೌಲ್ಯದ ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನಕ್ಕೂ ಪ್ರಧಾನಿ ಮೋದಿ ಚಾಲನೆ ನೀಡಿದರು.
ಇದು 1,380 ಕಿಲೋ ಮೀಟರ್ ರಸ್ತೆ, 120 ಅಂಗನವಾಡಿ ಕೇಂದ್ರಗಳು, 250 ಬಹು ಉದ್ದೇಶದ ಕೇಂದ್ರಗಳು ಮತ್ತು 10 ಶಾಲಾ ಹಾಸ್ಟೇಲ್ಗಳನ್ನು ಒಳಗೊಂಡಿದೆ.
ಪರಿವರ್ತಾನಾ ಯಾತ್ರೆ: ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 20ರಿಂದ ಬಿಜೆಪಿ ಪರಿವರ್ತನ ಯಾತ್ರೆಗೆ ಚಾಲನೆ ನೀಡಿದ್ದು, ಇದು ಅಕ್ಟೋಬರ್ 2ರಂದು ಮುಕ್ತಾಯಗೊಳಿಸಲಾಗಿತ್ತು. ಇನ್ನು 24 ಜಿಲ್ಲೆಗಳ 81 ವಿಧಾನಸಭಾ ಕ್ಷೇತ್ರಗಳಲ್ಲಿ 5,400 ಕಿಲೋ ಮೀಟರ್ ಯಾತ್ರೆ ಸಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು.
2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಜಾರ್ಖಂಡ್ ವಿಧಾನಸಭೆಯ ಚುನಾವಣೆಯು ಜನವರಿ 5, 2025ರಂದು ಕೊನೆಗೊಳ್ಳಲಿದೆ ಎಂದು ಹೇಳಾಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 2.59 ಕೋಟಿ ಮತದಾರರಿದ್ದಾರೆ. ಇವರಲ್ಲಿ 1.31 ಕೋಟಿ ಪುರುಷರು ಮತ್ತು 1.28 ಕೋಟಿ ಮಹಿಳೆಯರಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ 11.5 ಲಕ್ಷಕ್ಕೂ ಹೆಚ್ಚು ಮಂದಿ ಮತದಾನ ಮಾಡಲಿದ್ದಾರೆ. 1.5 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 3.64 ಲಕ್ಷ ಅಂಗವಿಕಲ ಮತದಾರರಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಜಾರ್ಖಂಡ್ ವಿಧಾನಸಭೆ ಚುನಾವಣೆ ನವೆಂಬರ್ 2ನೇ ವಾರ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications