ಕರ್ನಾಟಕದ ರಾಜಕೀಯದಲ್ಲಿ ಈಗ ಹಲವು ವಾರ್ ಶುರುವಾಗಿವೆ. ಉಪಚುನಾವಣೆ ಗೆಲುವು ಅನಿವಾರ್ಯ ಎಂಬ ಪರಿಸ್ಥಿತಿಯು ಬಿಜೆಪಿ, ಕಾಂಗ್ರೆಸ್ & ಜೆಡಿಎಸ್ ನಾಯಕರಿಗೆ ಎದುರಾಗಿದೆ. ಇದೇ ಕಾರಣಕ್ಕೆ ದೊಡ್ಡ ತಿಕ್ಕಾಟವೂ ಶುರುವಾಗಿದೆ. ಇಂದು ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ದೂರದ ಜಾರ್ಖಂಡ್ ರಾಜ್ಯದ ವಿಧಾನಭೆಗೆ ಕೂಡ ಚುನಾವಣೆ ಆರಂಭವಾಗಿದೆ.
ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿ, ದೊಡ್ಡ ಮಟ್ಟಿಗೆ ಸದ್ದು ಮಾಡಿತ್ತು. ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ ನಡುವೆ, ಕಾಂಗ್ರೆಸ್ ನಾಯಕರ ಗ್ಯಾರಂಟಿ ಪ್ಲಾನ್ ವರ್ಕೌಟ್ ಆಗಿತ್ತು. ಹೀಗೆ ದೇಶದಲ್ಲಿ ಮಾಯವಾಗಿ ಹೋಗುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಮತ್ತೊಮ್ಮೆ ಉಸಿರು ನೀಡಿತ್ತು. ಕಾಂಗ್ರೆಸ್ ಪಕ್ಷ ಬಹುಮತವನ್ನು ಮೀರಿ ಭಾರಿ ಪ್ರಮಾಣದಲ್ಲಿ ಸ್ಥಾನಗಳನ್ನು ತನ್ನದಾಗಿಸಿಕೊಂಡು ಸರ್ಕಾರ ರಚನೆ ಕೂಡ ಮಾಡಿದೆ. ಆದರೆ, 2024ರ ಲೋಕಸಭೆ ಚುನಾವಣೆ ನಂತರ ಉಪಚುನಾವಣೆ ಎದುರಾಗಿದೆ.
ಉಪಚುನಾವಣೆ ನಡೆಯುತ್ತಿರುವುದು ಏಕೆ?
2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಿಂದ ಅತಿಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಒಂದೇ ಒಂದು ಗುರಿಯೊಂದಿಗೆ ಕಾಂಗ್ರೆಸ್ & ಬಿಜೆಪಿ ಫೈಟಿಂಗ್ ಆರಂಭಿಸಿದ್ದವು. ಈ ಸಮಯದಲ್ಲೇ ಜೆಡಿಎಸ್ ಕೂಡ ಬಿಜೆಪಿ ಬೆನ್ನಿಗೆ ನಿಂತು ಮೈತ್ರಿ ಮಾಡಿಕೊಂಡಿತ್ತು. ಹೀಗಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಹಾಲಿ ಶಾಸಕರು ಕೂಡ ಸ್ಪರ್ಧೆ ಮಾಡಿದ್ದರು.
ಹಿಂದೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಇದೀಗ ಮಂಡ್ಯದ ಸಂಸದರಾಗಿ & ಕೇಂದ್ರ ಸಚಿವರಾಗಿದ್ದಾರೆ. ಮತ್ತೊಂದು ಕಡೆ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲೂ ಅಲ್ಲಿನ ಶಾಸಕರು ಸಂಸದರಾಗಿ ಆಯ್ಕೆಯಾದ ಕಾರಣಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ.
ಜಾರ್ಖಂಡ್ ಅಖಾಡದಲ್ಲಿ ಯಾರ ಬಾವುಟ?
ಕರ್ನಾಟಕದ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಜೊತೆಗೆ ದೂರದ ಜಾರ್ಖಂಡ್ ರಾಜ್ಯದಲ್ಲಿ ಇದೀಗ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಜಾರ್ಖಂಡ್ ರಾಜ್ಯದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಇಂದು ಅಂದ್ರೆ ನವೆಂಬರ್ 13 ರಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನವು ನಡೆಯಲಿದೆ. ಈ ಮೂಲಕ ನವೆಂಬರ್ 20 ರಂದು 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗೆ ಒಟ್ಟಾರೆ ಜಾರ್ಖಂಡ್ ರಾಜ್ಯದ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ ಈಗ ವೋಟಿಂಗ್ ನಡೆಯಲಿದೆ.
Nov 13, 2024, 6:22 pm IST
ಸಂಡೂರು ವಿಧಾನಸಭೆ ಉಪ ಚುನಾವಣೆ ಕೊನೆಯ ಹಂತದಲ್ಲೂ ಭರ್ಜರಿ ಮತ ಚಲಾಯಿಸಿದ ಮತದಾರರು. ಸಂಜೆ 5ರ ನಂತರವೂ ಹೆಚ್ಚು ಜನ ಮತದಾರರು ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಸಂಜೆ 5 ಗಂಟೆಯ ವೇಳೆಗೆ ದಾಖಲೆಯ 71.47ರಷ್ಟು ಮತದಾನ ಇಲ್ಲಿ ಆಗಿದೆ.
Nov 13, 2024, 5:42 pm IST
ಕರ್ನಾಟಕ
ಸಂಜೆ 5.31ರ ತನಕ ಚನ್ನಪಟ್ಟಣದಲ್ಲಿ ಶೇ 84.26, ಶಿಗ್ಗಾವಿಯಲ್ಲಿ ಶೇ 75.07 ಮತ್ತು ಸಂಡೂರಿನಲ್ಲಿ ಶೇ 71.47ರಷ್ಟು ಮತದಾನವಾಗಿದೆ. ರಾಜ್ಯದ ಮೂರು ಕ್ಷೇತ್ರದಲ್ಲಿ ಒಟ್ಟು 76.9ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
Nov 13, 2024, 5:10 pm IST
ಕರ್ನಾಟಕ
ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪಠಾಣ ಯಾಸಿರ್ ಅಹ್ಮದ್ ಖಾನ್ ಶಿಗ್ಗಾವಿ ನಗರದ ಸರ್ಕಾರಿ ಶಾಲೆಯ ಬೂತ್ ನಂ.104ರಲ್ಲಿ ಮತ ಚಲಾಯಿಸಿದರು. ಮತದಾನ ಮಾಡಲು ಕೇವಲ ಒಂದು ಗಂಟೆಯ ಸಮಯ ಬಾಕಿ ಇದೆ.
Nov 13, 2024, 5:05 pm IST
ಕರ್ನಾಟಕ
ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿ ಇವಿಎಂ ಅದಲು ಬದಲಾಗಿದೆ ಮರು ಮತದಾನ ಮಾಡುವಂತೆ ಮತದಾರರು ಪ್ರತಿಭಟನೆ. ಮತಗಟ್ಟೆ ಸಂಖ್ಯೆ 76ರಲ್ಲಿ ನಡೆದ ಘಟನೆ. ಒಂದರಿಂದ ಆರಂಭವಾಗಬೇಕಿದ್ದ ಕ್ರಮಸಂಖ್ಯೆ 17ರಿಂದ ಆರಂಭವಾಗಿದೆ. ಲೋಪವಾಗಿದೆ ಎಂದು ಗಲಾಟೆ ಮಾಡಿದ್ದಾರೆ. ಪೊಲೀಸರು ಗದ್ದಲ ತಿಳಿಗೊಳಿಸುವಲ್ಲಿ ನಿರತವಾಗಿದ್ದಾರೆ.
Nov 13, 2024, 5:00 pm IST
ಜಾರ್ಖಂಡ್
ಜಾರ್ಖಂಡ್ನ 43 ವಿಧಾನಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ 59.28% ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೆರೆಲ್ಕೆಲಾ-ಖರ್ಸಾವನ್ ಜಿಲ್ಲೆಯಲ್ಲಿ 66.38% ಮತದಾನವಾಗಿದ್ದು ಅತಿ ಹೆಚ್ಚು ಮತದಾನವಾದ ಜಿಲ್ಲೆಯಾಗಿದೆ. ರಾಂಚಿ ಜಿಲ್ಲೆಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಕನಿಷ್ಠ 53.40% ಮತದಾನವಾಗಿದೆ.
Nov 13, 2024, 4:59 pm IST
ಕರ್ನಾಟಕ
ಶಿಗ್ಗಾವಿ ಉಪ ಚುನಾವಣೆಯಲ್ಲಿ ಮತದಾನ ಮಾಡದ ಚುನಾವಣೆ ರಾಯಭಾರಿ ಹನುಮಂತ!
Nov 13, 2024, 4:34 pm IST
ಜಾರ್ಖಂಡ್
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ರಾಂಚಿಯಲ್ಲಿ ಮತ ಚಲಾಯಿಸಿದ ಮಹೇಂದ್ರ ಸಿಂಗ್ ಧೋನಿ.
Nov 13, 2024, 4:10 pm IST
ಕೇರಳ
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಹೀಗಿದ್ದಾಗ ಬುಡಕಟ್ಟು ಸಮುದಾಯದ ಮತದಾರರು ಅಪಾಯಕಾರಿ ನದಿಯನ್ನ ಕೂಡ ದಾಟಿ ಬಂದು ಪ್ರಜಾಪ್ರಭುತ್ವದ ಹಬ್ಬದಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
Nov 13, 2024, 3:31 pm IST
ಜಾರ್ಖಂಡ್
ಜಾರ್ಖಂಡ್ ರಾಜ್ಯವನ್ನು ಬಿಜೆಪಿ ರಚಿಸಿದೆ. ಈಗ ವಿಕಸಿತ ಭಾರತದ ಪರಿಕಲ್ಪನೆಯ ಅಡಿಯಲ್ಲಿ ಅಭಿವೃದ್ಧಿಪಡಿಸುವ ಸಮಯ ಬಂದಿದೆ. ಜಾರ್ಖಂಡ್ನ ಅಭಿವೃದ್ಧಿಗಾಗಿ ಪಣತೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ನ ಮತದಾರರಿಗೆ ಕರೆ ನೀಡಿದ್ದಾರೆ.
Nov 13, 2024, 2:59 pm IST
ಜಾರ್ಖಂಡ್
ಜಾರ್ಖಂಡ್ನಲ್ಲಿ ಗೆಲ್ಲುವ ಭರವಸೆ ಇದೆ
ಜಾರ್ಖಂಡ್ನ 43 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಚುನಾವಣೆ ಫಲಿತಾಂಶದ ನಂತರ ನಾನು ಮತ್ತೊಮ್ಮೆ ಜಾರ್ಖಂಡ್ಗೆ ಭೇಟಿ ನೀಡುತ್ತೇನೆ. ಎನ್ಡಿಎ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ. ಜಾರ್ಖಂಡ್ನ 43 ವಿಧಾನಸಭಾ ಸ್ಥಾನಗಳಿಗೆ ಇಂದು (ನವೆಂಬರ್ 13) ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಾಜಿ ಸಿಎಂ ಚಂಪೈ ಸೊರೆನ್ ಮತ್ತು ಮಾಜಿ ಸಂಸದೆ ಗೀತಾ ಕೋಡಾ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಮೋದಿ ಅವರು ತಮ್ಮ X ಖಾತೆಯ ಮೂಲಕ ಮೊದಲ ಬಾರಿಗೆ ಮತಚಲಾಯಿಸುವವರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.
ಜಾರ್ಖಂಡ್ ವಿಧಾನಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಬುಧವಾರ ನಡೆಯುತ್ತಿದೆ. 43 ಸೀಟುಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಮಧ್ಯಾಹ್ನ 1 ಗಂಟೆಯ ತನಕ ಶೇ 46.25ರಷ್ಟು ಮತದಾನವಾಗಿದೆ. ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದ್ದು, ಯಾರಿಗೆ ಅಧಿಕಾರ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ರಾಷ್ಟ್ರಮಟ್ಟದಲ್ಲಿ ಬೊಂಬೆನಗರಿ ಎಂದೇ ಖ್ಯಾತಿಗಳಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ 1957 ರಿಂದ 2024 ರವರೆಗೂ ಹಲವು ಚುನಾವಣೆಗಳಿಗೆ ಸಾಕ್ಷಿಯಾಗಿದೆ. ಕಳೆದ 15 ವರ್ಷದಲ್ಲಿ ರಾಜಕೀಯ ಮೇಲಾಟಗಳಿಂದಾಗಿಯೇ ಮೂರು ಉಪಚುನಾವಣೆಗಳನ್ನು ಕಾಣುತ್ತಿರುವ ಅಪರೂಪದ ಕ್ಷೇತ್ರವಾಗಿ ಗುರುತಿಸಲ್ಪಡುತ್ತಿದೆ.
ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸರಿಕೆಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂಪೈ ಸೊರೆನ್ ಹೇಳಿದ್ದಾರೆ. ಜಾರ್ಖಂಡ್ನಲ್ಲಿ ಬುಧವಾರ ಮೊದಲ ಹಂತದ ಮತದಾನ ನಡೆಯುತ್ತಿದೆ. 43 ಸೀಟುಗಳಲ್ಲಿ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಜಾರ್ಖಂಡ್ ರಾಜ್ಯದ 81 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ. 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಜನ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಜೆಎಂಎಂ ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ಹೇಮಂತ್ ಸೋರೆನ್ ಮತ ಚಲಾಯಿಸಿದ್ದು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಎಲ್ಲರೂ ಮತ ಚಲಾಯಿಸಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕದ 3 ಕ್ಷೇತ್ರಗಳಲ್ಲಿ ಮಧ್ಯಾಹ್ನ 1ಗಂಟೆವರೆಗೆ ಶೇ.45.02ರಷ್ಟು ಮತದಾನ
ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿ ಪ್ರಕಾರ ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.45.02ರಷ್ಟು ಮತದಾನವಾಗಿದೆ. ಚನ್ನಪಟ್ಟಣದಲ್ಲಿ ಮಧ್ಯಾಹ್ನ 1ಗಂಟೆವರೆಗೆ ಶೇ.48.15ರಷ್ಟು ಮತದಾನವಾಗಿದ್ದರೆ, ಶಿಗ್ಗಾಂವಿಯಲ್ಲಿ ಶೇ.43.5ರಷ್ಟು ಹಾಗೂ ಸಂಡೂರಿನಲ್ಲಿ ಶೇ.43.46ರಷ್ಟು ಮತದಾನವಾಗಿದೆ
Nov 13, 2024, 1:35 pm IST
ಜಾರ್ಖಂಡ್
ಜಾರ್ಖಂಡ್ ಜನತೆ ಇಂಡಿಯಾ ಒಕ್ಕೂಟಕ್ಕೆ ಮತ ಹಾಕಲ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಧರ್ಮದ ಆಧಾರದಲ್ಲಿ ಒಡಕು ಮೂಡಿಸಲು ಪ್ರಯತ್ನ ಮಾಡಿದ್ದು, ರಾಜ್ಯದ ಜನತೆ ಅವರ ಆಲೋಚನೆಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.
Nov 13, 2024, 1:28 pm IST
ಕರ್ನಾಟಕ
ಸಂಡೂರು ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಸಂಜೆ 6 ಗಂಟೆಯ ತನಕ ಸಂಡೂರು ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶವಿದೆ.
Nov 13, 2024, 1:23 pm IST
ಕರ್ನಾಟಕ
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ 2024ರ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಶಾಸಕ ಇ. ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕಾಂಗ್ರೆಸ್ ಇ. ತುಕಾರಾಂ ಪತ್ನಿ ಇ. ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಮಾಡಿದೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ 2024ರ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಶಾಸಕ ಇ. ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕಾಂಗ್ರೆಸ್ ಇ. ತುಕಾರಾಂ ಪತ್ನಿ ಇ. ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಮಾಡಿದೆ.
ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಎನ್ಡಿಎ ನಡುವೆ ನೇರ ಹಣಾಹಣಿ ಇದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಶತಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಬಿಜೆಪಿ ಮತ್ತು ಜೆಡಿಎಸ್ ಮತದಾರರನ್ನು ಸೆಳೆಯಲು ಭಾರಿ ಕಸರತ್ತು ನಡೆಸಿವೆ. ಮೂರು ಕ್ಷೇತ್ರಗಳಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಲಕ್ಷಾಂತರ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ಉಪಚುನಾವಣೆ ಪೈಕಿ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಈ ಮೂರು ಕ್ಷೇತ್ರಗಳಲ್ಲಿ ಶೇಕಡಾವಾರು 26.3ರಷ್ಟು ಮತದಾನವಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಕ್ಷೇತ್ರವಾರು ಮತದಾನ ಮಾಹಿತಿ ಇಲ್ಲಿದೆ.
ಪ್ರಥಮ ಬಾರಿಗೆ ಚುನಾವಣಾ ರಾಜಕಾರಣಕ್ಕೆ ಎಂಟ್ರಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಇಂದು ವಯನಾಡಿಗೆ ಭೇಟಿ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರುವಾಗಿರುವ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಅವರನ್ನು ಯುಡಿಎಫ್ ಕಣಕ್ಕಿಳಿಸಲಾಗಿದೆ. ಈ ವೇಳೆ ಮಾತನಾಡಿರುವ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
#WATCH | #JharkhandElections2024 | BJP candidate from Saraikela assembly constituency & former CM, Champai Soren says, "It is everyone's right to cast votes according to their choice. We have raised the issue of infiltrators and land grabbing and I will keep raising this issue.… pic.twitter.com/6wJe17cPK1
ಜಾರ್ಖಂಡ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪ್ರಕಟಿಸಿರುವ ಮತದಾರರ ಪಟ್ಟಿಯಲ್ಲಿ ಯುವ ಮತದಾರರು ಹಾಗೂ ವಿಶೇಷ ಚೇತನ ಮತದಾರರ ಸಂಖ್ಯೆ ಕಳೆದ ಚುನಾವಣೆಗಿಂತ ಗಣನೀಯವಾಗಿ ಹೆಚ್ಚಿದೆ ಎನ್ನುವುದು ತಿಳಿದು ಬಂದಿದೆ.
Nov 13, 2024, 12:22 pm IST
ಜಾರ್ಖಂಡ್
ಜಾರ್ಖಂಡ್ನಲ್ಲಿ 81ರಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ ಈವರೆಗೆ ಜಾರ್ಖಂಡ್ನಲ್ಲಿ 29.31% ಮತದಾನವಾಗಿದೆ. ಇನ್ನು ವಯನಾಡಿನಲ್ಲಿ 27.04% ಮತದಾನವಾಗಿದೆ.
2018ರ ಶಿಗ್ಗಾವಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 83,868 ಮತ ಪಡೆದು ವಿಜಯಸಾಧಿಸಿದ್ದು, ಆಗಲು ಅವರ ವಿರುದ್ಧ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಅಲ್ಪಸಂಖ್ಯಾತ ನಾಯಕ ಸೈಯದ್ ಅಜೀಮ್ ಪೀರ ಖಾದ್ರಿ ಅವರು 74,603 ಮತ ಪಡೆದು ಪರಾಭವಗೊಂಡಿದ್ದರು.
ಜಾರ್ಖಂಡ್ನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈವರೆಗೆ ಸಿಮ್ಡೆಗಾ ಜಿಲ್ಲೆಯಲ್ಲಿ ಅತಿ ಹೆಚ್ಚು 15.09% ಮತದಾನವಾಗಿದ್ದು, ಲೋಹರ್ದಗಾ ಮತ್ತು ಕೊಡೆರ್ಮಾ ಜಿಲ್ಲೆಗಳಲ್ಲಿ ತಲಾ 14.97% ಮತ್ತು ಸೆರೈಕೆಲಾ-ಖಾರ್ಸಾವನ್ನಲ್ಲಿ 14.62% ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
READ MORE
10:50 PM, 12 Nov
ಕರ್ನಾಟಕ
ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಪೈಪೋಟಿ
ಕರ್ನಾಟಕದ ಉಪಚುನಾವಣೆ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲಬೇಕು ಎಂದು ಕಾಂಗ್ರೆಸ್ ನಾಯಕರು ಹಠಕ್ಕೆ ಬಿದ್ದಿದ್ದರೆ, ಇನ್ನೊಂದು ಕಡೆ ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ಳಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ & ಜೆಡಿಎಸ್ ನಾಯಕರ ಜೊತೆಗೆ ರಣತಂತ್ರ ಹೆಣೆದಿದ್ದಾರೆ. ಆದರೆ ಮತದಾರನ ಒಲವು ಯಾರ ಪರ? ಎಂಬ ಪ್ರಶ್ನೆಗೆ ಇಂದು ಉತ್ತರ ಮತ ಪೆಟ್ಟಿಗೆಯಲ್ಲಿ ಭದ್ರವಾಗಲಿದೆ. ಹಾಗೂ ಸಂಡೂರು & ಶಿಗ್ಗಾಂವಿ ಕ್ಷೇತ್ರದಲ್ಲೂ ಇದೇ ಕುತೂಹಲ ಮೂಡಿದೆ.
10:51 PM, 12 Nov
ಜಾರ್ಖಂಡ್
ಜಾರ್ಖಂಡ್ ಅಸೆಂಬ್ಲಿಯಲ್ಲಿ ಕಮಲ ಅರಳುತ್ತಾ?
ಕಾಂಗ್ರೆಸ್ & ಮಿತ್ರ ಪಕ್ಷಗಳ ಭದ್ರಕೋಟೆ ಅಂತಾನೇ ಕರೆಸಿಕೊಳ್ಳುವ ಜಾರ್ಖಂಡ್ ವಿಧಾನಸಭೆಗೆ ಇಂದು ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಇದಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಜಾರ್ಖಂಡ್ ರಾಜ್ಯದಲ್ಲಿ ವೋಟಿಂಗ್ ನಡೆಯುವ ಪ್ರದೇಶಗಳಲ್ಲಿ ಹೈ ಸೆಕ್ಯೂರಿಟಿ ಏರ್ಪಡಿಸಲಾಗಿದೆ.
10:52 PM, 12 Nov
ಕರ್ನಾಟಕ
ಗ್ಯಾರಂಟಿ ಯುದ್ಧ ಬಲು ಜೋರು!
ಕರ್ನಾಟಕದ ಉಪಚುನಾವಣೆ & ಜಾರ್ಖಂಡ್ ಅಸೆಂಬ್ಲಿ ಚುನಾವಣೆ ಸೇರಿದಂತೆ ಈ ರಾಜಕೀಯ ಹೋರಾಟವು ಗ್ಯಾರಂಟಿ ಯುದ್ಧವಾಗಿ ಬದಲಾಗಿದೆ. ಯಾಕಂದ್ರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನ ಶೀಘ್ರದಲ್ಲೇ ನಿಲ್ಲಿಸಲಿದೆ ಅಂತಾ ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ಮಾತ್ರ ಈ ಮಾತು ಸುಳ್ಳು ಅಂತಿದ್ದಾರೆ. ಹೀಗಾಗಿ ಉಪಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಹಾಗೇ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಜಾರ್ಖಂಡ್ ಅಸೆಂಬ್ಲಿ ಚುನಾವಣೆಯಲ್ಲೂ ಕಮಾಲ್ ಮಾಡುತ್ತವಾ? ಕಾದು ನೋಡಬೇಕಿದೆ.
5:51 AM, 13 Nov
ಕರ್ನಾಟಕ
ಉಪಚುನಾವಣೆ ಕದನ ಗೆಲ್ಲುವುದು ಯಾರು?
ಕರ್ನಾಟಕದ 3 ಕ್ಷೇತ್ರಗಳಿಗೆ ಇಂದು ನಡೆಯಲಿರುವ ಉಪಚುನಾವಣೆ ಭಾರಿ ಕುತೂಹಲವನ್ನ ಕೆರಳಿಸಿದೆ. ಒಂದು ಕಡೆ ಕಾಂಗ್ರೆಸ್ ಸರ್ಕಾರಕ್ಕೆ ಇದು ಪ್ರತಿಷ್ಠೆಯ ವಿಷಯವಾಗಿದ್ದರೆ, ಇದೇ ವೇಳೆ ವಿರೋಧ ಪಕ್ಷಗಳಾದ ಜೆಡಿಎಸ್ & ಬಿಜೆಪಿಗೆ ಅನಿವಾರ್ಯ ಹೋರಾಟವಾಗಿದೆ. ಹೀಗೆ, ಗೆಲುವಿಗಾಗಿ ಇಬ್ಬರ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ. ಇನ್ನೇನು ಕೆಲವೇ ಸಮಯದಲ್ಲಿ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಲಿದೆ.
6:19 AM, 13 Nov
ಜಾರ್ಖಂಡ್
ಹೇಗಿದೆ ಜಾರ್ಖಂಡ್ ಚುನಾವಣಾ ಅಖಾಡ?
ಜಾರ್ಖಂಡ್ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಮೈತ್ರಿ ಪಕ್ಷಗಳೂ & ಬಿಜೆಪಿ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿ ಜೋರಾಗಿದೆ. ಮೊದಲಿಗೆ ಬಿಹಾರ ರಾಜ್ಯದ ಭಾಗವಾಗಿದ್ದ ಜಾರ್ಖಂಡ್, ಪ್ರತ್ಯೇಕ ರಾಜ್ಯವಾಗಿದ್ದು 2000ನೇ ಇಸವಿಯ ನವೆಂಬರ್ 15 ರಂದು. ಹೀಗೆ ಜಾರ್ಖಂಡ್ ಪ್ರತ್ಯೇಕ ರಾಜ್ಯವಾಗಿ ರೂಪುಗೊಂಡರೂ ಅಲ್ಲಿನ ಬಡತನವು ಇನ್ನೂ ಸರಿದಾರಿಗೆ ಬಂದಿಲ್ಲ. ಈಗಲೂ ಸಾಕಷ್ಟು ಪ್ರಮಾಣದಲ್ಲಿ ಪ್ರಜೆಗಳು ಬಡತನದಲ್ಲೇ ಜೀವನ ಕಳೆಯುತ್ತಿದ್ದಾರೆ. ಇಂದು ಜಾರ್ಖಂಡ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯಲಿದೆ.
6:34 AM, 13 Nov
ಕರ್ನಾಟಕ
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರದಲ್ಲಿ ಈಗ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಬಸವರಾಜ್ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆ ಆಗಿದ್ದಾರೆ. ಹೀಗಾಗಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಳಿಸಿಕೊಳ್ಳುವ ಜೊತೆ ಬಿಜೆಪಿ ನಾಯಕರಿಗೆ ಇಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಅನಿವಾರ್ಯ ವಾತಾವರಣ ನಿರ್ಮಾಣ ಆಗಿದೆ.
6:49 AM, 13 Nov
ಕರ್ನಾಟಕ
ಕರ್ನಾಟಕ ಉಪಚುನಾವಣೆ: ಮೂರು ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಮತದಾನ
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು (ನವೆಂಬರ್ 13) ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆದಿದೆ. ರಾಜ್ಯದ ಈ ಮೂರು ಕ್ಷೇತ್ರಗಳಲ್ಲಿಂದು ಮತದಾರರು ಮತಚಲಾಯಿಸಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಈಗಾಗಲೇ ಮತದಾನಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮತಗಟ್ಟೆಗಳನ್ನು ತೆರೆಯಲಾಗಿದೆ. ಸುಮಾರು 770 ಮತಗಟ್ಟೆಗಳಲ್ಲಿ ಏಳು ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ.
6:50 AM, 13 Nov
ಕರ್ನಾಟಕ
ನಿಖಿಲ್ ಕುಮಾರಸ್ವಾಮಿ ನಿರೀಕ್ಷೆ ನಿಜವಾಗುತ್ತಾ?
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮಗ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಉಪಚುನಾವಣೆಯ ಅಖಾಡ ಮಾಡು ಇಲ್ಲವೆ ಮಡಿ ಹೋರಾಟವಾಗಿದೆ. ಯಾಕಂದ್ರೆ ನಿಖಿಲ್ ಕುಮಾರಸ್ವಾಮಿಗೆ ಸಾಲು ಸಾಲು ಸೋಲುಗಳು ಎದುರಾಗಿದ್ದವು. 2019ರ ಲೋಕಸಭಾ ಚುನಾವಣೆ ಅಖಾಡದಲ್ಲಿ ಸುಮಲತಾ ಅಂಬರೀಶ್ ಅವರ ಎದುರು ಸೋತಿದ್ದ ನಿಖಿಲ್ ಅವರು, ನಂತರ ರಾಮನಗರ ವಿಧಾನಸಭೆ ಚುನಾವಣೆ 2023 ರಲ್ಲಿ ಕೂಡ ಸೋತಿದ್ದರು. ಹೀಗಿದ್ದಾಗ ಚನ್ನಪಟ್ಟಣ ಕ್ಷೇತ್ರ ಇದೀಗ ನಿಖಿಲ್ ಅವರ ಭವಿಷ್ಯ ನಿರ್ಧಾರ ಮಾಡಲಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ನವೆಂಬರ್ 13 ರಂದು ಅಂದರೆ ಇಂದು ಈ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಸ್ಥಾನಗಳಿಂದ ಗೆದ್ದ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತೆರವುಗೊಂಡರು. ಇದರಿಂದಾಗಿ ಈ ಸ್ಥಾನಗಳು ಖಾಲಿಯಾಗಿದ್ದವು. ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ-ಜೆಡಿಎಸ್ ದಕ್ಷಿಣ ರಾಜ್ಯದಲ್ಲಿ ಸ್ಥಾನಗಳನ್ನು ಪಡೆದುಕೊಳ್ಳುವ ಮತ್ತು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಭರವಸೆಯಲ್ಲಿವೆ.
ಕರ್ನಾಟಕ ರಾಜಕೀಯದಲ್ಲಿ ಒಂದು ಕಾಲದ ಕೇಂದ್ರವಾಗಿದ್ದ ಬಳ್ಳಾರಿಗೆ ಈಗ ಮತ್ತೊಮ್ಮೆ ಜೀವ ಬಂದಂತೆ ಕಾಣುತ್ತಿದೆ. ಜನಾರ್ಧನ ರೆಡ್ಡಿ ಅವರು ಬಿಜೆಪಿಗೆ ಮರು ಸೇರ್ಪಡೆ ಆದ ನಂತರ, ವಿಧಾನಸಭೆ ಉಪಚುನಾವಣೆ ಎದುರಾಗಿದೆ. ಹೀಗಾಗಿ ಕಾಂಗ್ರೆಸ್ ಭದ್ರಕೋಟೆ ಅಂತಾ ಹೈಪ್ ಆಗಿರುವ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಗೆಲ್ಲಬೇಕು ಎಂಬುದು ಜನಾರ್ಧನ ರೆಡ್ಡಿ ಅವರ ಗುರಿ. ಆದರೆ ಕಾಂಗ್ರೆಸ್ ನಾಯಕರಿಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು (ನವೆಂಬರ್ 13) ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ರಾಜ್ಯದ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಸಮಗ್ರ ವ್ಯವಸ್ಥೆ ಮಾಡಿರುವುದಾಗಿ ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತ ಬೂತ್ಗಳಿಗೆ ತೆರಳಿ ಮತದಾನ ಮಾಡುವ ಮತದಾರರಲ್ಲೂ ಹೊಸ ಉತ್ಸಾಹ ಕಂಡು ಬರುತ್ತಿದೆ.
ಇದೀಗ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ, ಮತದಾನವು ಆರಂಭ ಆಗಿದೆ. ಜಾರ್ಖಂಡ್ ರಾಜ್ಯದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಇಂದು ಅಂದ್ರೆ ನವೆಂಬರ್ 13 ರಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನವು ಆರಂಭ ಆಗಿದೆ. ನವೆಂಬರ್ 20 ರಂದು 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗೆ ಒಟ್ಟಾರೆ ಜಾರ್ಖಂಡ್ ರಾಜ್ಯದ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ ಈಗ ವೋಟಿಂಗ್ ನಡೆಯಲಿದೆ.
7:38 AM, 13 Nov
ಕರ್ನಾಟಕ
ಒಕ್ಕಲಿಗ ಸಮುದಾಯದ ಮತದಾರರೇ ಹೆಚ್ಚು
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಈಗ ಆರಂಭ ಆಗಿದೆ. ಒಟ್ಟು 2.2 ಲಕ್ಷಕ್ಕೂ ಹೆಚ್ಚು ಮತದಾರರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಇದ್ದಾರೆ. ಚನ್ನಪಟ್ಟಣ ಕ್ಷೇತ್ರದ ಮತದಾರರ ಪೈಕಿ ಒಕ್ಕಲಿಗ ಸಮುದಾಯ ಪ್ರಬಲವಾಗಿದ್ದು, ಈ ಕ್ಷೇತ್ರದಲ್ಲಿ ಬರೋಬ್ಬರಿ 1.05 ಲಕ್ಷ ಒಕ್ಕಲಿಗ ಮತದಾರರು ಇದ್ದಾರೆ. ಮತ್ತೊಂದು ಕಡೆ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಹಾಗೇ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆ.
7:53 AM, 13 Nov
ಕರ್ನಾಟಕ
ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಉಪ ಚುನಾವಣೆಯ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ಕ್ಷೇತ್ರದಲ್ಲಿ ಒಟ್ಟು 2,36,402 ಮತದಾರರಿದ್ದಾರೆ. 1,17,935 ಪುರುಷ ಮತದಾರರು, 1,18,438 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು. ಮತದಾನಕ್ಕಾಗಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
8:04 AM, 13 Nov
ಕೇರಳ
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯಲಿದೆ. ರಾಹುಲ್ ಗಾಂಧಿ ಈ ಸ್ಥಾನವನ್ನು ತೊರೆದಿದ್ದರು. ರಾಹುಲ್ ವಯನಾಡ್ ಜೊತೆಗೆ ರಾಯ್ ಬರೇಲಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದಾದ ನಂತರ ರಾಯ್ ಬರೇಲಿ ಸೀಟನ್ನು ತಮ್ಮ ಬಳಿಯೇ ಉಳಿಸಿಕೊಳ್ಳಲು ನಿರ್ಧರಿಸಿದ್ದರು. ಇದೀಗ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಸ್ಥಾನದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
8:10 AM, 13 Nov
ಕರ್ನಾಟಕ
ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಚುರುಕುಗೊಂಡ ಮತದಾನ. ಚನ್ನಪಟ್ಟಣದಲ್ಲಿ 80ರ ವಯೋಮಾನದ ವೃದ್ಧರು ಬಂದು ಮತ ಚಲಾಯಿಸಿದ್ದಾರೆ. ವ್ಹೀಲ್ ಚೇರ್ನಲ್ಲಿ ಮತಗಟ್ಟೆಗೆ ಬಂದು ಮತ ಚಾಯಿಸಿದ ಲಿಂಗಮ್ಮ. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವ ಜನರು.
8:22 AM, 13 Nov
ಕರ್ನಾಟಕ
ಸಂಡೂರು ವಿಧಾನಸಭಾ ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ 68 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 185 ಮತಗಟ್ಟೆಗಳಿವೆ. ಸಂಡೂರು 17, ತೋರಣಗಲ್ಲು 27 ಮತ್ತು ಚೋರನೂರು 16 ಮತಗಟ್ಟೆ ಸೇರಿ ಒಟ್ಟು 60 ಮತಗಟ್ಟೆ ಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಮತದಾನ ಆರಂಭವಾಗಿದೆ.
8:33 AM, 13 Nov
ಕರ್ನಾಟಕ
ರಾಜ್ಯದಲ್ಲಿ ತೆರವಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದ ಉಪಚುನಾವಣೆ ಇಂದು (ನವೆಂಬರ್ 13) ನಡೆಯುತ್ತಿದ್ದು, ಮೂರು ಕ್ಷೇತ್ರದ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಚನ್ನಪಟ್ಟಣ ಕ್ಷೇತ್ರದ ಒಟ್ಟು 276 ಮತಗಟ್ಟೆಗಳ ಚುನಾವಣಾ ಕಾರ್ಯಕ್ಕೆ 1252 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 16 ಎಸ್ ಎಸ್ ಟಿ ತಂಡ, 9 ಎಫ್ಎಸ್ ಟಿ ತಂಡ ಹಾಗೂ 119 ಮೈಕ್ರೋ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ.
8:44 AM, 13 Nov
ಕರ್ನಾಟಕ
ಉಪಚುನಾವಣೆ ಅಖಾಡದಲ್ಲಿ ಟೆಂಪಲ್ ರನ್!
ಕರ್ನಾಟಕದ 3 ಕ್ಷೇತ್ರಗಳಿಗೆ ಇದೀಗ ಉಪಚುನಾವಣೆ ನಡೆಯುತ್ತಿದ್ದು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬೈಎಲೆಕ್ಷನ್ ನಡೆಯುತ್ತಿದೆ. ಹೀಗೆ ಉಪಚುನಾವಣೆ ಅಖಾಡದಲ್ಲಿ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳು ಇದೀಗ ಬೆಳಗ್ಗೆ ಮತದಾನ ಆರಂಭಕ್ಕೆ ಮೊದಲು ದೇಗುಲಕ್ಕೆ ತೆರಳಿ ದೇವರ ಆಶೀರ್ವಾದ ಪಡೆದು, ಮತಗಟ್ಟೆಗಳ ಕಡೆಗೆ ತೆರಳುತ್ತಿದ್ದಾರೆ.
9:00 AM, 13 Nov
ಕರ್ನಾಟಕ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಭೈರಾಪುರ ಮತ್ತು ಸಂಕಲಗೆರೆ ಮತಗಟ್ಟೆಗಳಲ್ಲಿ ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು
9:03 AM, 13 Nov
ಕರ್ನಾಟಕ
ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗು ಸಂಸದ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
9:06 AM, 13 Nov
ಕರ್ನಾಟಕ
100% ಮತದಾನ, ಅಭಿವೃದ್ಧಿಗೆ ವರದಾನ: ವಿಜಯೇಂದ್ರ
ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸಮಸ್ತ ಮತದಾರರು ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾಕ್ಷೀಕರಿಸಲು ವಿನಂತಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.
9:11 AM, 13 Nov
ಕರ್ನಾಟಕ
ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿಗೆ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
9:12 AM, 13 Nov
ಕರ್ನಾಟಕ
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಭೈರಾಪುರ ಮತ್ತು ಸಂಕಲಗೆರೆ ಮತಗಟ್ಟೆಗಳಲ್ಲಿ ಮತದಾರರು ಉತ್ಸಾಹದಿಂದ ಮತ ಚಲಾವಣೆ ಮಾಡಲು ಸಾಲುಗಟ್ಟಿ ನಿಂತಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
9:22 AM, 13 Nov
ಕರ್ನಾಟಕ
ಶಿಗ್ಗಾವಿ ಕ್ಷೇತ್ರದಲ್ಲಿ 20 ದಿನ ಮಗುವಿನ ಜೊತೆಗೆ ಬಂದು ಮತದಾನ ಮಾಡಿದ ತಾಯಿ. ಪತಿಯೊಂದಿಗೆ ಮಗು ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿ ಮತದಾನದ ಮಹತ್ವದ ಮೆರೆದರು. ಶಿಗ್ಗಾವಿ ಪಟ್ಟಣದಲ್ಲಿ ಕಾಲೇಜಿನಲ್ಲಿ ಮತಗಟ್ಟೆ ಕ್ಷೇತ್ರ ಸ್ಥಾಪಿಸಲಾಗಿದ್ದು, ಅದಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
9:27 AM, 13 Nov
ಕರ್ನಾಟಕ
ಸಂಡೂರು ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕುಡತಿನಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮಹಿಳೆಯರು ಸಾಲಾಗಿ ನಿಂತು ಮತದಾನದಲ್ಲಿ ಪಾಲ್ಗೊಂಡರು.
9:35 AM, 13 Nov
ಕರ್ನಾಟಕ
ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಸಿಬ್ಬಂದಿಯ ಸಹಾಯದೊಂದಿಗೆ ಶಿಗ್ಗಾಂವಿಯ ಮತಗಟ್ಟೆಯೊಂದಕ್ಕೆ ಮತದಾನ ಮಾಡಲು ಆಗಮಿಸಿದ ವಯೋವೃದ್ದೆ.
9:38 AM, 13 Nov
ಕರ್ನಾಟಕ
ಚನ್ನಪಟ್ಟಣ ಉಪಚುನಾವಣೆ ಭದ್ರತೆಗಾಗಿ 8 ಪ್ಯಾರಾ ಮಿಲಿಟರಿ ಪೋರ್ಸ್ ಬಳಕೆ ಮಾಡಲಾಗಿದ್ದು, 650ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 197 ಪ್ಯಾರಾಮಿಲಿಟರಿ ಪಡೆ ಕಣ್ಗಾವಲಿದ್ದು, 54 ಕ್ಲಸ್ಟರ್ ಮತಗಟ್ಟೆಗಳಲ್ಲಿ ಎಎಸ್ಐ ರ್ಯಾಂಕ್ ಅಧಿಕಾರಿಗಳು ಭದ್ರತೆಗೆ ನಿಯೋಜಿಸಲಾಗಿದೆ.
9:40 AM, 13 Nov
ಕರ್ನಾಟಕ
ಬೆಳಗ್ಗೆ 7 ರಿಂದ 9 ಗಂಟೆಯ ತನಕ ಚನ್ನಪಟ್ಟಣದಲ್ಲಿ ಶೇ 10.34, ಶಿಗ್ಗಾವಿಯಲ್ಲಿ ಶೇ 10.08 ಮತ್ತು ಸಂಡೂರು ಕ್ಷೇತ್ರದಲ್ಲಿ ಶೇ 9.99ರಷ್ಟು ಮತದಾನವಾಗಿತ್ತು. ಒಟ್ಟಾರೆ 10.14ರಷ್ಟು ಮತದಾನವಾಗಿದೆ.
ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ದ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಬಿಜೆಪಿ ಚುನಾವಣಾ ಏಜೆಂಟ್ ಆಗಿರುವ ಎಸ್ ಕೆ ಅಕ್ಕಿ ಇ - ಮೇಲ್ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.