ಬಿಜೆಪಿ ಲೋಕಸಭಾ ಟಿಕೆಟ್ ನಿರಾಕರಿಸಿದ ಶಾಸಕಿ
ರಾಂಚಿ, ಮಾರ್ಚ್ 13: ಲೋಕಸಭಾ ಚುನಾವಣೆ 2024ಯ ಟಿಕೆಟ್ಗಾಗಿ ನಾನು, ತಾಮುಂದೆ ಎನ್ನುವ ಹೊತ್ತಿನಲ್ಲಿ ಇಲ್ಲೊಬ್ಬ ಶಾಸಕರು ಬಿಜೆಪಿಯ ಟಿಕೆಟ್ ಆಫರ್ ಅನ್ನು ನಿರಾಕರಿಸಿದ್ದಾರೆ. ತಮಗೆ ಬಿಜೆಪಿ ಟಿಕೆಟ್ ಕೊಡುವುದಾಗಿ ತಿಳಿಸಿದರೂ ಸಹಿತ ಯಾವ ಕಾರಣಕ್ಕೆ ನಾನು ತಿರಸ್ಕರಿಸಿದೆ ಎಂಬುದನ್ನು ಸ್ವತಃ ಅವರೇ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಾರ್ಖಂಡ್ ರಾಜ್ಯದ ಬಾರ್ಕಗಾಂವ್ (Barkagaon) ವಿಧಾನಸಭಾ ಕ್ಷೇತ್ರದ ಶಾಸಕಿ ಅಂಬಾ ಪ್ರಸಾದ್ (Amba Prasad) ಅವರು ಬಿಜೆಪಿಯ ಟಿಕೆಟ್ ಅನ್ನು ಕಡೆಗಣಿಸಿದ್ದಾರೆ. ಬಿಜೆಪಿ ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಗೆ ಶಾಸಕಿಗೆ ಆಫರ್ ನೀಡಿತ್ತು.

ಜಾರ್ಖಂಡ್ ಕಾಂಗ್ರೆಸ್ ಶಾಸಕ ಅಂಬಾ ಪ್ರಸಾದ್ ಅವರು ಮೇಲೆ ಜಾರಿ ನಿರ್ದೇಶನಾಲಯವು (ED) ದಾಳಿ ನಡೆಸಿತ್ತು.
ದಾಳಿ ವೇಳೆ ಅವರ ಮನೆಯನ್ನು ತಡಕಾಡಿದ್ದ ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ವಿಚಾರಣೆ ವೇಳೆ ಬೆಳಗ್ಗೆಯಿಂದ ಸಂಜೆವರೆಗೆ ಕಾಯಿಸಿದ್ದಾರೆ. ಇಡೀ ದಿನ ಚಿತ್ರಹಿಂಸೆ ಕೊಟ್ಟಿದ್ದಲ್ಲದೇ, ನನ್ನನ್ನು ಗಂಟೆಗಟ್ಟಲೇ ನಿಲ್ಲುವಂತೆ ಮಾಡಿದ್ದರು ಎಂಬುದನ್ನು ಸ್ಮರಿಸಿದ್ದಾರೆ.
ಟಿಕೆಟ್ ಪಡೆಯುವಂತೆ ಒತ್ತಡ
ಈ ಕಾರಣದಿಂದ ಶಾಸಕಿ ಬಿಜೆಪಿ ಟಿಕೆಟ್ ಕಡೆಗಣಿಸಿದ್ದಾರೆ ಎನ್ನಲಾಗಿದೆ. ನನಗೆ ಬಿಜೆಪಿಯಿಂದ ಹಜಾರಿಬಾಗ್ ಲೋಕಸಭಾ ಟಿಕೆಟ್ ನೀಡಲಾಯಿತು, ಆ ಬಗ್ಗೆ ನಾನು ತಲೆಕೆಡಿಕೊಳ್ಳಲಿಲ್ಲ. ಈ ಸಂಬಂಧ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಪ್ರಸಾದ್ ಅವರು ಮಂಗಳವಾರ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಗೆಲ್ಲುವ ಅಭ್ಯರ್ಥಿ ಮೇಲೆ ಒತ್ತಡ ಸಹಜ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದಿಂದ ಬಂದವರು ಬಿಜೆಪಿಯ ಟಿಕೆಟ್ ಪಡೆದು ಕ್ಷೇತ್ರದಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಹೇರಿದ್ದರು. ನಾನು ಅದಕ್ಕೆ ಕಿವಿಗೊಡಲಿಲ್ಲ. ಒತ್ತಡಕ್ಕೆ ಮಣಿಯಲಿಲ್ಲ. ಬಿಜೆಪಿ ನನ್ನನ್ನು ಹಜಾರಿಬಾಗ್ನಲ್ಲಿ ಪ್ರಬಲ ಅಭ್ಯರ್ಥಿ ತಿಳಿದುಕೊಂಡಿದ್ದಾರೆ. ಕಾರಣ ನಾವು (ಕಾಂಗ್ರೆಸ್) ನಿರಂತರವಾಗಿ ಬಾರ್ಕಗಾಂವ್ (Barkagaon) ಸ್ಥಾನಗಳನ್ನು ಗೆಲ್ಲುತ್ತೇವೆ. ನಾವು ಕಾಂಗ್ರೆಸ್ನಿಂದ ಬಂದವರು, ಬಿಜೆಪಿಯಿಂದಲ್ಲ. ಹೀಗಾಗಿ ಅವರ ಕೆಂಗಣ್ಣಿಗೆ ನಾನು ಗುರಿಯಾಗುವುದು ಸುಲಭ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ, ಭೂ ಮತ್ತು ವರ್ಗಾವಣೆ-ಪೋಸ್ಟಿಂಗ್ ಹಗರಣಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ ನಡೆದಿದೆ. ಅಂಬಾ ಪ್ರಸಾದ್ ಅವರ ರಾಂಚಿಯಲ್ಲಿರುವ ಮನೆ ಹಾಗೂ ಹಜಾರಿಬಾಗ್ನಲ್ಲಿರುವ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದರು.
ದಿನಪೂರ್ತಿ ಶಾಸಕಿ ಮನೆ ಶೋಧ
ಎಎನ್ಐ ವರದಿಗಳ ಪ್ರಕಾರ, ಶಾಸಕಿ ಮನೆಗಳು ಮತ್ತು ಆಸ್ತಿ ಮೇಲೆ ನಡೆದ ದಾಳಿ ಬೆಳಗ್ಗೆಯಿಂದ ಆರಂಭವಾಗಿ ತಡರಾತ್ರಿವರೆಗೆ ನಡೆಯಿತು.
2023 ರಲ್ಲಿ ಆಕೆಯ ವಿರುದ್ಧ ಕೇಂದ್ರ ಸಂಸ್ಥೆಯ ರಾಂಚಿ ವಲಯ ಕಚೇರಿಯಲ್ಲಿ ಹಣ ವರ್ಗಾವಣೆಯ ದೂರಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ದಾಳಿಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕಿ ಮೇಲೆ ಇಡಿ ದಾಳಿ ನಡೆಯುವುದು ಗೊತ್ತಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ನಾಯಕರು, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ದುರುದ್ದೇಶದಿಂದ ಹೀಗೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications