Jharkhand Election 2024: ಜಾರ್ಖಂಡ್ ಚುನಾವಣೆ ಬಗ್ಗೆ ಮಹತ್ವದ ಬಗ್ಗೆ ಮಹತ್ವದ ಅಪ್ಡೇಟ್ ಇಲ್ಲಿದೆ
Jharkhand Election 2024: ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ 2 ಹಂತದ ಮತದಾನ ನಡೆದಿದ್ದು, ಮೂರನೇ ಹಂತ ಬಾಕಿಯಿದೆ. ಹರಿಯಾಣದಲ್ಲಿ ಅಕ್ಟೋಬರ್ 5ರಂದು 1 ಹಂತದಲ್ಲಿ ಮತದಾನ ನಡೆಯಲಿದೆ. ಮತ್ತೊಂದೆಡೆ ಮಹರಾಷ್ಟ್ರ & ಜಾರ್ಖಂಡ್ ವಿ ಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಾಕಿಯಿದೆ. ಹಾಗಾದರೆ ಯಾವಾಗ ನಿಗದಿಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನವೆಂಬರ್ ಎರಡನೇ ವಾರದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ. ಇನ್ನೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಯಾವಾಗ ನಡೆಯಲಿದೆ ಎನ್ನುವ ಗೊಂದಲಗಳು ಉಂಟಾಗಿದ್ದವು. ಇದಕ್ಕೆ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್ ಕುಮಾರ್ ಅವರು ಸ್ಪಷ್ಟನೆಯೊಂದನ್ನು ನೀಡಿದ್ದರು.

ಇತ್ತೀಚೆಗಷ್ಟೇ ಚುನಾವಣಾ ಆಯೋಗ ತಂಡ ಜಾರ್ಖಂಡ್ ಪ್ರವಾಸ ಬೆಳೆಸಿತ್ತು. ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿಗದಿತ ಸಮಯಕ್ಕೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದರು. ಇನ್ನು ಈ ವರ್ಷದ ಕೊನೆಯಲ್ಲಿ ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳಿ ಮಾಹಿತಿ ನೀಡಿದ್ದರು.
2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ 2024 ವರ್ಷದ ಕೊನೆಯಲ್ಲಿ ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 25ರಂದು ಕೊನೆಗೊಳ್ಳಲಿದೆ. ಆದ್ದರಿಂದ ಇಲ್ಲಿ ನವೆಂಬರ್ 2ನೇ ವಾರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿ ಎಂದು ಹೇಳಲಾಗುತ್ತಿದೆ. ಅಲ್ಲದೆ, ಜೊತೆಗೆ ಇದೇ ವೇಳೆ ಜಾರ್ಖಂಡ್ನಲ್ಲೂ ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ: ಉಧಮ್ಪುರದಲ್ಲಿ ಇಂದು (ಸೆಪ್ಟೆಂಬರ್ 26) ಜಮ್ಮು ಮತ್ತು ಕಾಶ್ಮೀರದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಹಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, "ರಾಹುಲ್ ಗಾಂಧಿ 370ನೇ ವಿಧಿಯನ್ನು ವಾಪಸ್ ತರುತ್ತೇವೆ ಎಂದು ಹೇಳುತ್ತಾರೆ. ನಾನು ಈ ಹಂತದಿಂದ ಹೇಳಲು ಬಯಸುತ್ತೇನೆ, ರಾಹುಲ್ ಬಾಬಾ ಅವರೇ, ನಿಮ್ಮ ಮೂರು ತಲೆಮಾರುಗಳು ಬಂದರೂ ಸಹ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಹಿಂತಿರುಗಿಸುವಷ್ಟು ಶಕ್ತಿ ಇಲ್ಲ," ಎಂದು ಟಾಂಗ್ ಕೊಟ್ಟರು.
"ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ತರುತ್ತೇವೆ ಎಂದು ಒಮರ್ ಅಬ್ದುಲ್ಲಾ ಮತ್ತು ರಾಹುಲ್ ಬಾಬಾ ಹೇಳುತ್ತಿದ್ದಾರೆ. ಈ ಕುಟುಂಬಗಳು 70 ವರ್ಷಗಳ ಕಾಲ ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿವೆ. ಈ ಹಿಂದೆ ಇಲ್ಲಿ ಚುನಾವಣೆ ನಡೆದಿದೆಯೇ? ನಮ್ಮ ನಾಯಕ ನರೇಂದ್ರ ಮೋದಿ ಈ ಕೆಲಸ ಮಾಡಿದ್ದಾರೆ. ಇಂತಹವರು ತಮ್ಮವರಿಗೇ ಟಿಕೆಟ್ ಕೊಟ್ಟು ನಾಯಕರನ್ನಾಗಿ ಮಾಡಿದ್ದಾರೆ," ಎಂದು ಆಕ್ರೊಶ ಹೊರಹಾಕಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications