Jharkhand Election 2024: ಹೇಮಂತ್ ಸೊರೇನ್ ಒಬ್ಬ ಭ್ರಷ್ಟ ಸಿಎಂ: ರಾಜನಾಥ್ ಸಿಂಗ್ ಏಕವಚನದಲ್ಲಿ ವಾಗ್ದಾಳಿ
Jharkhand Election 2024: ಈಗಾಗಲೇ ಲೋಕಸಭೆ ಚುನಾವಣೆ ಮುಗಿದಿದ್ದು, ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಈ ರಾಜ್ಯದ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ರಾಜಕೀಯ ಕೆಸರೆರಚಾಟಗಳು ಆರಂಭವಾಗಿವೆ. ಹಾಗೆಯೇ ಇದೀಗ ಜಾರ್ಖಂಡ್ ಸಿಎಂ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯೊಂದಿಗೆ ಆಟವಾಡಿದ ಅತ್ಯಂತ ಭ್ರಷ್ಟ ಸಿಎಂ ಆಗಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಹೀಗೆ ಜಾರ್ಖಂಡ್ನ ಇತ್ಪೋರಿಯಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹೇಮಂತ್ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಮಯ ಬಂದಿದೆ.

ಹೇಮಂತ್ ಸೊರೇನ್ ಅತ್ಯಂತ ಭ್ರಷ್ಟ ಸಿಎಂ. ಅವರು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯೊಂದಿಗೆ ಆಟವಾಡಿದ್ದಾರೆ & ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಯಾವುದೇ ಕಳಂಕಿತ ವ್ಯಕ್ತಿಗಳನ್ನು ದೇಶ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಮೆರಿಕ ಪ್ರವಾಸದ ವೇಳೆ ದೇಶವು ಸಿಖ್ ಸಮುದಾಯದವರಿಗೆ ಸುರಕ್ಷಿತ ಅಲ್ಲ ಎಂದು ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪ್ರಚೋದನೆ ನೀಡುವಂತಹ ಪ್ರಯತ್ನವನ್ನು ಮಾಡಲಾಗಿದೆ. ಅಲ್ಲದೆ, ಹೊರ ದೇಶಗಳಲ್ಲಿ ಭಾರತದ ಘನತೆ ಮತ್ತು ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ವರ್ಷಾಂತ್ಯದಲ್ಲಿ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸೆಪ್ಟೆಂಬರ್ 20ರಿಂದ ಯಾತ್ರೆ ಆರಂಭ: 1855ರಲ್ಲಿ ಸಂತಾಲ್ ದಂಗೆಯ ನೇತೃತ್ವ ವಹಿಸಿದ್ದ ವೀರ್ ಶಹೀದ್ ಸಿಧು ಕನ್ಹು ಅವರ ಜನ್ಮಸ್ಥಳವಾದ ಭೋಗ್ನಾಡಿಯಲ್ಲಿ ನಿನ್ನೆ (ಸೆಪ್ಟೆಂಬರ್ 20) ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಪರಿವರ್ತನ ಯಾತ್ರೆಗೆ ಚಾಲನೆ ನೀಡಿದ್ದರು. ಈ ಪರಿವರ್ತನಾ ಯಾತ್ರೆ ಅಕ್ಟೋಬರ್ 2ರ ವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪರಿವರ್ತನಾ ಯಾತ್ರೆಯು ಸೆಪ್ಟೆಂಬರ್ 20ರಿಂದ ಎರಡು ಭಾಗಗಳಲ್ಲಿ ಪ್ರಾರಂಭವಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಸಾಹಿಬ್ಗಂಜ್ನ ಪೊಲೀಸ್ ಲೈನ್ ಮೈದಾನದಿಂದ ಸಂತಾಲ್ ಪರಗಣ ವಿಭಾಗದ ಪರಿವರ್ತನ ಯಾತ್ರೆಯನ್ನು ಉದ್ಘಾಟಿಸಲಿದ್ದರು. ಇದಕ್ಕೂ ಮುನ್ನ ಭೋಗ್ನದಿಹ್ನಲ್ಲಿರುವ ವೀರ್ ಸಿಧು ಕನ್ಹು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದರು.
ಧನ್ಬಾದ್ ವಿಭಾಗದ ಪರಿವರ್ತನಾ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಿರಿದಿಹ್ ಜಿಲ್ಲೆಯ ಜಮುವಾ ಜಾರ್ಖಂಡಿ ಧಾಮ್ ಮೈದಾನದಿಂದ ಚಾಲನೆ ನೀಡಿದ್ದರು. ಇದಕ್ಕೂ ಮುನ್ನ ಅವರು ಜಾರ್ಖಂಡ್ ಧಾಮ್ನಲ್ಲಿರುವ ಶಿವ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications