Jharkhand Election 2024: ಎನ್ಡಿಎಯಲ್ಲಿ ಸೀಟು ಹಂಚಿಕೆ ಸೂತ್ರ ನಿರ್ಧಾರ- AJSU-JDU ಗೆ ಬಿಜೆಪಿ ಎಷ್ಟು ಸೀಟು?
ಈ ವರ್ಷಾಂತ್ಯಕ್ಕೆ ಜಾರ್ಖಂಡ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಪ್ರಬಲ ಪಕ್ಷಗಳ ಭರದ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 8ರ ನಂತರ ಯಾವುದೇ ಸಮಯದಲ್ಲಾದರೂ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ, ಜಾರ್ಖಂಡ್ನ ಎರಡು ಪ್ರಮುಖ ಮೈತ್ರಿ ಪಕ್ಷಗಳಾದ I.N.D.I.A ಮತ್ತು NDA ಸಾಧ್ಯವಾದಷ್ಟು ಬೇಗ ಸ್ಥಾನಗಳನ್ನು ವಿಭಜಿಸಲು ನಿರ್ಧರಿಸಿವೆ.
ಜೊತಗೆ ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಎಜೆಎಸ್ಯು ಮತ್ತು ಜೆಡಿಯು ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಜೆಪಿಯ ವಿಧಾನಸಭಾ ಚುನಾವಣಾ ಸಹ ಉಸ್ತುವಾರಿ ಹಿಮಂತ ಬಿಸ್ವಾ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಸೀಟು ಹಂಚಿಕೆ ಕುರಿತು ಶೇ.99ರಷ್ಟು ಮಾತುಕತೆ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ.

ಹೇಮಂತ್ ಬಿಸ್ವಾ ಶರ್ಮಾ ಅವರು, ಸೀಟು ಹಂಚಿಕೆಗೆ ಸಂಬಂಧಿಸಿದಂತೆ, 99ರಷ್ಟು ಸೀಟುಗಳ ಬಗ್ಗೆ ಮಾತುಕತೆ ಪೂರ್ಣಗೊಂಡಿದೆ. ಒಂದು ಅಥವಾ ಎರಡು ಸ್ಥಾನಗಳ ಮೇಲೆ ಚರ್ಚೆ ಉಳಿದಿದೆ. ಪಿತೃ ಪಕ್ಷ ಮುಗಿದ ತಕ್ಷಣ ಅದನ್ನು ಪ್ರಕಟಿಸಲಾಗುವುದು. ಇತ್ತೀಚೆಗಷ್ಟೇ ಎಜೆಎಸ್ಯು ಅಧ್ಯಕ್ಷ ಸುದೇಶ್ ಮಹತೋ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೀಟು ಹಂಚಿಕೆ ಕುರಿತು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವೆ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆದಿದೆ. ಮೂಲಗಳ ಪ್ರಕಾರ, ಎಜೆಎಸ್ಯುಗೆ 9 ರಿಂದ 10 ಸ್ಥಾನಗಳನ್ನು ನೀಡಲು ಬಿಜೆಪಿ ನಿರ್ಧರಿಸಿದೆ.
ರಾಜ್ಯದ 81 ಸ್ಥಾನಗಳಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದೆ ಮತ್ತು ಅದರ ಮಿತ್ರಪಕ್ಷಗಳು 9 ರಿಂದ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತವೆ ಎಂದು ಮೂಲಗಳು ಹೇಳುತ್ತವೆ. ಆದರೆ ಜೆಡಿಯು 5 ಸ್ಥಾನಗಳನ್ನು ಕೇಳುತ್ತಿದೆ, ಆದರೆ ಬಿಜೆಪಿ 2-3 ಸ್ಥಾನಗಳನ್ನು ನೀಡಲು ಯೋಜಿಸುತ್ತಿದೆ ಎಂಬುದು ತಿಳಿದು ಬಂದಿದೆ.

2014 ರ ವಿಧಾನಸಭಾ ಚುನಾವಣೆಯಲ್ಲಿ ಎಜೆಎಸ್ಯು ಬಿಜೆಪಿಯೊಂದಿಗೆ 8 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಜೆಎಸ್ಯು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಪರಿಣಾಮವಾಗಿ ಎರಡೂ ಪಕ್ಷಗಳು ನಷ್ಟ ಅನುಭವಿಸಬೇಕಾಯಿತು.
ಬಿಜೆಪಿ ಅಭ್ಯರ್ಥಿಗಳ ಪಟ್ಟು
ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ತಯಾರಿಯನ್ನು ತೀವ್ರಗೊಳಿಸಿದೆ. ಮೂಲಗಳ ಪ್ರಕಾರ, ಬಿಜೆಪಿ ತನ್ನ ಪ್ರಣಾಳಿಕೆಯೊಂದಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬಹುದು. ಮೊದಲ ಪಟ್ಟಿಯಲ್ಲಿ 40 ರಿಂದ 50 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು.
ಮೂಲಗಳನ್ನು ನಂಬುವುದಾದರೆ, ಈ ಪಟ್ಟಿಯಲ್ಲಿ ಬಿಜೆಪಿಯು ಕಳೆದ ಚುನಾವಣೆಯಲ್ಲಿ ಸೋಲನ್ನು ಎದುರಿಸಬೇಕಾದ ಸ್ಥಾನಗಳಲ್ಲಿ ಅಥವಾ ಬಿಜೆಪಿ ಅತ್ಯಂತ ಕಡಿಮೆ ಅಂತರದಿಂದ ಗೆದ್ದಂತಹ ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಜಾರ್ಖಂಡ್ ಬಿಜೆಪಿಯ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಕ್ಟೋಬರ್ 10 ರ ಮೊದಲು ಪಕ್ಷವು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ. ಅಷ್ಟೊತ್ತಿಗಾಗಲೆ ಚುನಾವಣಾ ಆಯೋಗವೂ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಬಿಜೆಪಿ ಪ್ರಣಾಳಿಕೆ
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಪಕ್ಷ ಇದಕ್ಕೆ 'ಸಂಕಲ್ಪ ಪತ್ರ' ಎಂದು ಹೆಸರಿಸಿದೆ. ಶೀಘ್ರದಲ್ಲೇ ನಮ್ಮ ಪ್ರಣಾಳಿಕೆ ಹೊರಬೀಳಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸಂಸದ ಪ್ರದೀಪ್ ವರ್ಮಾ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ನಡುವೆ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾರೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications