Jharkhand Election Results:: ಜೆಜೆಎಂ & ಬಿಜೆಪಿಯಿಂದ ಯಾರೆಲ್ಲಾ ಮುನ್ನಡೆ ಸಾಧಿಸಿದ್ದಾರೆ?
Jharkhand Election results 2024: ಜಾರ್ಖಂಡ್ನ 81 ವಿಧಾನಸಭೆ ಸ್ಥಾನಸಗಳಿಗೆ ನವೆಂಬರ್ 13 ಹಾಗೂ 20ರಂದು ಮತದಾನ ನಡೆದಿತ್ತು. ಇಂದು (ನವೆಂಬರ್ 23) ಮತ ಎಣಿಕೆ ನಡೆಯುತ್ತಿದೆ. ಚುನಾವಣೆ ಆಯೋಗದ ವೆಬ್ಸೈಟ್ನ ಪ್ರಕಾರ, ರಾಜ್ಯದಲ್ಲಿ ಯಾವೆಲ್ಲ ಪಕ್ಷಗಳು ಮುನ್ನಡೆಯಲ್ಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಚುನಾವಣೆ ಆಯೋಗದ ವೆಬ್ಸೈಟ್ನ ಪ್ರಕಾರ, ರಾಜ್ಯದಲ್ಲಿ ಜೆಎಂಎಂ ನೇತೃತ್ವದ INDIA ಬ್ಲಾಕ್ 50 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಎನ್ಡಿಎ 30 ಸ್ಥಾನಗಳಲ್ಲಿ ಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಇನ್ನು ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ ಇಲ್ಲಿವರೆಗೆ, ಇಂಡಿಯಾ ಮೈತ್ರಿಕೂಟ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಎಂಎಂ 30, ಕಾಂಗ್ರೆಸ್ 14 ಮತ್ತು ಪಕ್ಷೇತರ 6 ಸ್ಥಾನಗಳನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಬರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಯವಾಗಿದೆ. ಮುಖ್ಯಮಂತ್ರಿ ಹಾಗೂ ಜೆಜೆಎಂದ ಅಭ್ಯರ್ಥಿ ಹೇಮಂತ್ ಸೊರೆನ್ ಅವರು ಬಿಜೆಪಿಯ ಗಮ್ಲಿಯೆಲ್, ಹೆಂಬ್ರೋಮ್ ಅವರಿಗಿಂಯ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ತಮ್ಮ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುವ ಭರವಸೆಯಲ್ಲಿದ್ದಾರೆ.
ಇನ್ನು ಜೆಎಂಎಂ ಶಾಸಕಿ ಮತ್ತು ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಅವರು ಗಂಡೇ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರು ನಾಲ್ಕನೇ ಸುತ್ತಿನ ಮತ ಎಣಿಕೆ ನಂತರ ಬಿಜೆಪಿಯ ಮುನಿಯಾ ದೇವಿ ವಿರುದ್ಧ ಹಿನ್ನಡೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಎರಡನೇ ಸುತ್ತಿನ ಮತ ಎಣಿಕೆ ಮುಗಿದ ಬಳಿಕ ಬಿಜೆಪಿ ಅಭ್ಯರ್ಥಿ ಬಾಬುಲಾಲ್ ಮರಾಂಡಿ ಅವರು ಸಿಪಿಐಎಂಎಲ್ನ ರಾಜ್ಕುಮಾರ್ ಯಾದವ್ ಅವರಿಗಿಂತ ಮುನ್ನಡೆಯಲ್ಲಿದ್ದಾರೆ. ಸೆರೈಕೆಲಾದಲ್ಲಿ ಮಾಜಿ ಸಿಎಂ ಮತ್ತು ಬಿಜೆಪಿ ಅಭ್ಯರ್ಥಿ ಚಂಪೈ ಸೊರೇನ್ ಮೂರನೇ ಸುತ್ತಿನ ನಂತರ ಜೆಎಂಎಂನ ಗಣೇಶ್ ಮಹಲಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಘಟ್ಸಿಲಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಚಂಪೈ ಸೊರೆನ್ ಅವರ ಪುತ್ರ ಹಾಗೂ ಬಿಜೆಪಿ ಅಭ್ಯರ್ಥಿ ಬಾಬುಲಾಲ್ ಸೊರೇನ್ ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ರಘುಬರ್ ದಾಸ್ ಅವರ ಸೊಸೆ ಪೂರ್ಣಿಮಾ ಸಾಹು ಅವರು ಜೆಮ್ಶೆಡ್ಪುರ ಪೂರ್ವದಿಂದ 8,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನ ಅಜೋಯ್ ಕುಮಾರ್ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಒಟ್ಟು 1,211 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದಿನ ಫಲಿತಾಂಶದ ಮೂಲಕ ಹೊರಬೀಳಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications