ತಬ್ರೇಜ್ ಸಾವಿನ ಪ್ರಕರಣದ ದಿಕ್ಕನ್ನೇ ಬದಲಿಸಿದ ಅಟಾಪ್ಸಿ ವರದಿ
ರಾಂಚಿ, ಸೆಪ್ಟೆಂಬರ್ 10: ಕಳೆದ ಜೂನ್ ತಿಂಗಳಿನಲ್ಲಿ ತಬ್ರೇಜ್ ಅನ್ಸಾರಿ ಎಂಬುವವರನ್ನು ಮೋಟರ್ ಸೈಕಲ್ ಕದ್ದಿದ್ದಾನೆಂದು ಆರೋಪಿಸಿ ಜನರ ಗುಂಪೊಂದು ಹೊಡೆದು ಕೊಂದ ಬರ್ಬರ ಘಟನೆ ವಿಚಿತ್ರ ತಿರುವು ಪಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ಮೇಲೆ ಹೇರಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಪೊಲೀಸರು ಕೈಬಿಟ್ಟಿದ್ದಾರೆ! ಅದಕ್ಕೆ ಕಾರಣ ಅಟಾಪ್ಸಿ ವರದಿ! ತಬ್ರೇಜ್ ಹೃದಯಾಘಾತದಿಂದ ಮರಣ ಹೊಂದಿದ್ದಾನೆಂದು ಅಟಾಪ್ಸಿ ವರದಿ ಹೇಳಿರುವುದರಿಂದ ಆತನನ್ನು ಹೊಡೆದು ಕೊಲ್ಲಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರಕರಣವನ್ನು ಕೈಬಿಡಲಾಗಿದೆ.
ಕಳೆದ ಜೂನ್ ತಿಂಗಳಿನಲ್ಲಿ 24 ವರ್ಷದ ಯುವಕ ತಬ್ರೇಜ್ ಜಮ್ಷೆಡ್ಪುರದಿಂದ ಸರೈಕೆಲಾ ಖರ್ಸವಾನ್ ಜಿಲ್ಲೆಯ ಕರ್ಸೋವಾದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಲವು ಜನರಿದ್ದ ಗುಂಪೊಂದು ಅವರ ಮೇಲೆ ದಾಳಿ ಮಾಡಿತ್ತು. ದ್ವಿಚಕ್ರ ವಾಹನ ಕದ್ದಿದ್ದಾನೆ ಎಂದು ಆರೋಪಿಸಿ ಆತನನ್ನು ಕಂಬಕ್ಕೆ ಕಟ್ಟಿ ಹಿಂಸಿಸಲಾಗಿತ್ತು. ಕೆಲವು ಮೂಲಗಳ ಪ್ರಕಾರ ಆತನ ಬಳಿ 'ಜೈ ಶ್ರೀರಾಮ್' ಘೋಷಣೆ ಕೂಗುವಂತೆಯೂ ಒತ್ತಾಯಿಸಲಾಗಿತ್ತು.

ಹೊಡೆತ ಸಹಿಸಲಾಗದೆ ಪ್ರಜ್ಞೆ ಕಳೆದುಕೊಂಡಿದ್ದ ತಬ್ರೇಜ್ ನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು. ಆತನನ್ನು ನಾಲ್ಕು ದಿನದ ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ವಿಳಂಬವಾಗಿದ್ದರಿಂದ ಆತ ಮೃತಪಟ್ಟಿದ್ದ.
ಪೊಲೀಸರ ಬಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆತ ಹಲವು ಬಾರಿ ಬೇಡಿಕೊಂಡಿದ್ದರೂ ಪೊಲೀಸರು ಸ್ಪಂದಿಸಿರಲಿಲ್ಲ. ಮದುವೆಯಾಗಿ ಒಂದೂವರೆ ತಿಂಗಳ ನಂತರ ನಡೆದ ಈ ಘಟನೆಯಲ್ಲಿ ತಬ್ರೇಜ್ ಮರಣಹೊಂದಿದ್ದ.
ಆತನ ಮೇಲೆ ನಡೆದ ಹಲ್ಲೆಯಿಂದಾಗಿ ಆತ ಸಾವಿಗೀಡಾಗಿದ್ದಾನೆಂದು ಕುಟುಂಬ ಆರೋಪಿಸಿ, ಪ್ರಕರಣ ದಾಖಲಿಸಿದ್ದರಿಂದ ಹಲ್ಲೆ ನಡೆಸಿದ್ದ 11 ಜನರನ್ನು ಪೊಲೀಸರು ಬಂಧಿಸಿದ್ದರು. ಆದರೆ ಮರಣೋತ್ತರ ವರದಿಯಲ್ಲಿ ಆತ ಸತ್ತಿದ್ದು ಹೃದಯಾಘಾತದಿಂದ ಎಂದು ಉಲ್ಲೇಖವಾಗಿರುವುದರಿಂದ ಪ್ರಕರಣವನ್ನೇ ಕೈಬಿಡಲಾಗಿದೆ.
ಹಿಂಸೆಯಿಂದ ಮತ್ತು ಭಯದಿಂದ ಹೆದರಿ ತಬ್ರೇಜ್ ಸಾವಿಗೀಡಾಗಿರಬಹುದು. ಅಂದಮೇಲೆ ಆತನ ಸಾವಿಗೆ ಆರೋಪಿಗಳೇ ಕಾರಣವಲ್ಲವೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications