51,000 ಪಡೆದಿದ್ದು ನಿಜ, ತಾಕತ್ತಿದ್ದರೆ ಪಿಎಫ್ಐ ನಿಷೇಧಿಸಿ: ಜಿಗ್ನೇಶ್
ಅಹಮದಾಬಾದ್, ಡಿಸೆಂಬರ್ 20: ಪಿಎಫ್ಐ ಸಂಘಟನೆಯಿಂದ ತಾವು ಗುಜರಾತ್ ಚುನಾವಣೆ ಸಂದರ್ಭದಲ್ಲಿ 51,000 ರೂಪಾಯಿ ಪಡೆದಿದ್ದು ನಿಜ ಎಂದು ವಡ್ಗಾಮ್ ನೂತನ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.
ಮಾತ್ರವಲ್ಲ ಕೇಂದ್ರ ಸರಕಾರ ಸಂಘಟನೆಯನ್ನು ನಿಷೇಧಿಸಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಎಸ್.ಡಿ.ಪಿ.ಐ ಎಂಬುದು ಪಿಎಫ್ಐನ ರಾಜಕೀಯ ಸಂಘಟನೆಯಾಗಿದ್ದು ನೋಂದಾಯಿತ ರಾಜಕೀಯ ಪಕ್ಷವಾಗಿದೆ. "ಒಂದೊಮ್ಮೆ ಪಿಎಫ್ಐ ಸಂಶಯಾಸ್ಪದ ಸಂಘಟನೆಯಾಗಿದ್ದಲ್ಲಿ, 56 ಇಂಚಿನ ಎದೆಯ ಮನುಷ್ಯ ಏನು ಮಾಡುತ್ತಿದ್ದಾರೆ? ಅವರ ಯಾವುದೇ ಕ್ರಮ ಜರುಗಿಸುತ್ತಿಲ್ಲ ಯಾಕೆ?," ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಅವರು ಟ್ವಿಟ್ಟರಿನಲ್ಲಿ, ಗುಜರಾತ್ ನಲ್ಲಿ ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. 2019ರಲ್ಲಿ ದೇಶ ಬದಲಾವಣೆಗೆ ಸಿದ್ದವಾಗಿದೆ ಎಂದಿದ್ದಾರೆ.
ಮಾತ್ರವಲ್ಲ ಖಾಸಗಿ ಚಾನಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ನಿವೃತ್ತಿ ತೆಗೆದುಕೊಂಡು ಹಿಮಾಲಯಕ್ಕೆ ಹೋಗಬೇಕು ಎಂದು ಸಲಹೆ ನೀಡಿದ್ದಾರೆ.
ತಮ್ಮ 70ರ ವಯಸ್ಸಲ್ಲೂ ಮೋದಿ ತಾವು ಇನ್ನೂ ಯುವಕ ಎನ್ನುತ್ತಿದ್ದಾರೆ. ಅವರು ಸನ್ಯಾಸತ್ವ ತೆಗೆದುಕೊಳ್ಳಬೇಕು ಎಂದು ಜಿಗ್ನೇಶ್ ಹೇಳಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ವರ್ಷಕ್ಕೆ ಎರಡು ಕೋಟಿ ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಇದೀಗ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗಿವೆ. ಇಷ್ಟೊತ್ತಿಗೆ 8 ಕೋಟಿ ಜನರಿಗೆ ಉದ್ಯೋಗ ಸಿಗಬೇಕಿತ್ತು. ಈಗ ಪ್ರಧಾನಿ ಯುವ ಜನಾಂಗ ಎಂ ಶಬ್ದವನ್ನೇ ಪ್ರಸ್ತಾಪಿಸುತ್ತಿಲ್ಲ," ಎಂದು ಅವರು ಟೀಕಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications