'ಕೇಳದೆ ಇದ್ದರೂ' ಜಿಗ್ನೇಶ್ ಮೇವಾನಿಗೆ ಪೊಲೀಸ್ ಭದ್ರತೆ
ಅಹಮದಾಬಾದ್, ನವೆಂಬರ್ 6: ಕೇಳದೇ ಇದ್ದರೂ ದಲಿತರ ಹಕ್ಕುಗಳ ಹೋರಾಟಗಾರ ಜಿಗ್ನೇಶ್ ಮೇವಾನಿಗೆ ರಕ್ಷಣೆಗಾಗಿ ಇಬ್ಬರು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದರ ವಿರುದ್ಧ ಕಿಡಿಕಾರಿರುವ ಜಿಗ್ನೇಶ್ ಮೆವಾನಿ 'ಇದು ನನ್ನ ಚಟುವಟಿಕೆಗಳ ಮೇಲೆ ಕಣ್ಣಿಡಲು ಸರಕಾರ ಹೂಡಿರುವ ತಂತ್ರ' ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಗೆ ಪರೋಕ್ಷ ಬೆಂಬಲ ನೀಡಿರುವ ಜಿಗ್ನೇಶ್ ಮೆವಾನಿ ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಇದಾದ ಬೆನ್ನಿಗೆ ಅವರಿಗೆ 'ಜೀವ ಬೆದರಿಕೆ ಇದೆ' ಎಂಬ ಕಾರಣ ಮುಂದಿಟ್ಟ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.
ಈ ಸಂಬಂಧ ಭಾನುವಾರ ಸಮಾವೇಶವೊಂದರಲ್ಲಿ ಮಾತನಾಡಿರುವ ಜಿಗ್ನೇಶ್, "ನಾನು ಕೇಳದೆಯೇ ಮಷಿನ್ ಗನ್ ಇರುವ ಕಮಾಂಡೊ ಭದ್ರತೆ ನೀಡಿದ್ದಾರೆ. ಇದು ಕಣ್ಗಾವಲಿಗಾ ಎಂದು ಕೇಳಿದ್ದಕ್ಕೆ ಪೊಲೀಸರು ಹೌದು ಎಂದಿದ್ದಾರೆ. ರಾಜ್ಯದ ಸದ್ಯದ ಸ್ಥತಿಯನ್ನು ಇದು ಹೇಳುತ್ತದೆ," ಎಂದಿದ್ದಾರೆ.
'ದೈತ್ಯ ಬಿಜೆಪಿಯನ್ನು ಸೋಲಿಸಲು ಪಾಟೀದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್, ಹಿಂದುಳಿದ ವರ್ಗಗಳ ಹೋರಾಟಗಾರ ಅಲ್ಪೇಶ್ ಠಾಕೋರ್ ಜತೆಗೆ ಕೈಜೋಡಿಸಲು ಸಿದ್ಧ,' ಎಂದು ಜಿಗ್ನೇಶ್ ಮೆವಾನಿ ಅಬ್ಬರಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications