ಮೋದಿ ವಿರುದ್ದ ಜಿಗ್ನೇಶ್ ಮೆವಾನಿ ರ್ಯಾಲಿಯಲ್ಲಿ ಖಾಲಿ ಕುರ್ಚಿಗಳದ್ದೇ ಕಾರುಬಾರು
Recommended Video

ದೆಹಲಿಯ ಪಾರ್ಲಿಮೆಂಟ್ ರಸ್ತೆಯಲ್ಲಿ ಕೇಂದ್ರ ಸರಕಾರದ ವಿರುದ್ದ ಗುಜರಾತ್ ವಡ್ಗಾಂ ಕ್ಷೇತ್ರದ ನೂತನ ಶಾಸಕ ಮತ್ತು ದಲಿತ ಮುಖಂಡ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ನಡೆದ ' ಯುವ ಹೂಂಕಾರ್ ರ್ಯಾಲಿ' ವಿಫಲಗೊಂಡಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಬಹುದೆಂದು ದೆಹಲಿಯ ಪೊಲೀಸರು ಭಾರೀ ಭದ್ರತೆ ಒದಗಿಸಿದ್ದರು. ರ್ಯಾಲಿಯಲ್ಲಿ ಬೆರಳಣಿಕೆಯ ಸುಮಾರು ಮುನ್ನೂರು ಜನ ಮಾತ್ರ ಭಾಗವಹಿಸಿದ್ದರು. ಆ ಮೂಲಕ, ರಾಜಧಾನಿಯಲ್ಲಿ ಮೊದಲ ರ್ಯಾಲಿಯ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಭರ್ಜರಿ ಎಂಟ್ರಿ ಕೊಡಬಹುದು ಎನ್ನುವ ಮೆವಾನಿ ಲೆಕ್ಕಾಚಾರ ಉಲ್ಟಾ ಹೊಡೆದಿದೆ.
ಮಂಗಳವಾರ (ಜ 9) ದೆಹಲಿ ಪೊಲೀಸರ ಅನುಮತಿ ನಿರಾಕರಣೆಯ ಹೊರತಾಗಿಯೂ ರ್ಯಾಲಿ ನಡೆಸಿ ಮಾತನಾಡಿದ ಜಿಗ್ನೇಶ್, ಒಬ್ಬ ಚುನಾಯಿತ ಪ್ರತಿನಿಧಿಗೆ ಮಾತನಾಡಲು ಅವಕಾಶ ನೀಡದ ಮೋದಿ ಸರಕಾರ, ಗುಜರಾತ್ ಮಾದರಿ ಅಲ್ಲದೇ ಮತ್ತಿನ್ನೇನು ಎಂದು ಹೂಂಕರಿಸಿದ್ದಾರೆ.
ನನ್ನ ಮೇಲೆ ಎಷ್ಟೇ ದಾಳಿ ನಡೆದರೂ, ನಾನು ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಳ್ಳುವುದಿಲ್ಲ ಎಂದ ಜಿಗ್ನೇಶ್, ಭ್ರಷ್ಟಾಚಾರ, ನಿರುದ್ಯೋಗ, ಬಡತನದಂತಹ ಪ್ರಮುಖ ವಿಷಯಗಳಿಗೆ ಬೆಲೆಯಿಲ್ಲದೇ, ಲವ್ ಜಿಹಾದ್, ಘರ್ ವಾಪ್ಸಿ, ಗೋಹತ್ಯೆ ಮುಂತಾದ ವಿಚಾರಗಳು ಮುನ್ನಲೆಗೆ ಬಂದಿರುವುದು ವಿಷಾದನೀಯ ಎಂದು ಜಿಗ್ನೇಶ್ ಮೆವಾನಿ ಹೇಳಿದ್ದಾರೆ.
ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರನ್ನು ಬಿಡುಗಡೆಗೊಳಿಸಬೇಕು, ಉದ್ಯೋಗ, ಶಿಕ್ಷಣ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ಯುವ ಹೂಂಕಾರ್ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಬಹುದು ಎಂದು ಪೊಲೀಸರು ನಿರೀಕ್ಷಿಸಿದ್ದರು. ಮುಂದೆ ಓದಿ..

ಭಾರತದ ಸಂವಿಧಾನ ಮತ್ತು ಪ್ರಾಚೀನ ಹಿಂದೂ ಕಾನೂನು ಪಠ್ಯ
ಭಾಷಣದುದ್ದಕ್ಕೂ ಪ್ರಧಾನಿ ಮೋದಿ ವಿರುದ್ದ ಅಕ್ಷರಸ: ಹರಿಹಾಯ್ದ ಜಿಗ್ನೇಶ್ ಮೆವಾನಿ, ಭಾರತದ ಸಂವಿಧಾನ ಮತ್ತು ಪ್ರಾಚೀನ ಹಿಂದೂ ಕಾನೂನು ಪಠ್ಯವನ್ನು ನೀಡಿದರೆ ನೀವು ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತೀರಾ ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಜೆಎನ್ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್, ಶೆಹಲಾ ರಾಶಿದ್, ಉಮರ್ ಖಾಲಿದ್ ಮೊದಲಾದವರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಜನರಿಗಿಂತ ರ್ಯಾಲಿಯಲ್ಲಿ ಪೊಲೀಸರೇ ಜಾಸ್ತಿ
ಸುಮಾರು 1,500ಕ್ಕೂ ಹೆಚ್ಚು ಪೊಲೀಸರನ್ನು ರ್ಯಾಲಿಯ ಬಂದೋಬಸ್ತಿಗೆ ನಿಯೋಜಿಸಲಾಗಿತ್ತು. ಆದರೆ, ರ್ಯಾಲಿಯಲ್ಲಿ ಖಾಲಿ ಕುರ್ಚಿಗಳೇ ಜಾಸ್ತಿ ಇದ್ದುದ್ದರಿಂದ, 1,200ಕ್ಕೂ ಹೆಚ್ಚು ಪೊಲೀಸರನ್ನು ವಾಪಸ್ ಕರೆಸಿಕೊಳ್ಳಲಾಯಿತು. ಯುವ ಹೂಂಕಾರ್ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು.

ಟ್ವಿಟ್ಟರ್ ನಲ್ಲಿ ಭಾರೀ ಅಣಕ
ಜಿಗ್ನೇಶ್ ಮೆವಾನಿ ರ್ಯಾಲಿ ವಿಫಲಗೊಂಡಿದ್ದಕ್ಕೆ ಟ್ವಿಟ್ಟರ್ ನಲ್ಲಿ ಅಣಕವಾಡಲಾಗುತ್ತಿದೆ. ಮೆವಾನಿ ರ್ಯಾಲಿಯಲ್ಲಿ ಇನ್ನೂರು ಜನ ಇದ್ದರು, ಅದರಲ್ಲಿ 187 ಪೊಲೀಸರು ಮಿಕ್ಕವರು ಕೆಲಸ ಇಲ್ಲದವರು. ಇದು ರಾಹುಲ್ ಗಾಂಧಿಗೆ ಜನ ನೀಡಿದ ಸಂದೇಶ ಎನ್ನುವ ಟ್ವೀಟ್.

ಪ್ರತಿಯೊಬ್ಬರಿಗೂ ನೀಲಿ ಬಾವುಟ ಮತ್ತು ಐನೂರು ರೂಪಾಯಿ
ರ್ಯಾಲಿ ಮಧ್ಯಾಹ್ನ ಹನ್ನೆರಡು ಗಂಟೆಗೆ ಶುರುವಾಗಬೇಕಿತ್ತು, ಆದರೆ ಜನನೇ ಇಲ್ಲ. ರ್ಯಾಲಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ನೀಲಿ ಬಾವುಟ ಮತ್ತು ಐನೂರು ರೂಪಾಯಿ ನೀಡುವುದಾಗಿ ಆಮಿಷವೊಡ್ಡಲಾಗಿತ್ತು. ಎಲ್ಲಾ ವಿದೇಶಿ ಎನ್ಜಿಓಗಳ ದುಡ್ಡು ಎನ್ನುವ ಟ್ವೀಟ್.

ನಾವು ಹೇಳುತ್ತೆ ಭಾರತ್ ಮಾತಾಕೀ ಜೈ
ಅವರು ಹೇಳುತ್ತಾರೆ ಭಾರತ್ ತೇರಿ ತರ್ಕೇ ಹೋಂಗೆ ಇನ್ಸಾ ಅಲ್ಲಾ...ನಾವು ಹೇಳುತ್ತೆ ಭಾರತ್ ಮಾತಾಕೀ ಜೈ. ಮೆವಾನಿಕಿ ಶಾದಿ ಮೆ ಅಬ್ದುಲ್ಲಾ ದೀವಾನಾ.. ಎನ್ನುವ ಕಾಲೆಳೆಯುವ ಟ್ವೀಟ್.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications