26/11 ಉಗ್ರ ದಾಳಿ ವೇಳೆ ಎನ್ಎಸ್ಜಿ ಮುಖ್ಯಸ್ಥರಾಗಿದ್ದ ಜೆಕೆ ದತ್ ಕೊರೊನಾದಿಂದ ನಿಧನ
ನವದೆಹಲಿ, ಮೇ 19: ಮುಂಬೈನಲ್ಲಿ 2008ರಲ್ಲಿ ನಡೆದ ಉಗ್ರ ದಾಳಿ ಸಂದರ್ಭದಲ್ಲಿ ಕಮಾಂಡೋ ಪಡೆಗೆ ಮುಖ್ಯಸ್ಥರಾಗಿದ್ದ ರಾಷ್ಟ್ರೀಯ ಭದ್ರತಾ ಪಡೆ ಸಿಬ್ಬಂದಿ ಮಾಜಿ ಮಹಾನಿರ್ದೇಶಕ ಜೆಕೆ ದತ್(72) ಬುಧವಾರ ಕೊರೊನಾ ಸೋಂಕಿನಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರು ಇಂದು ಮಧ್ಯಾಹ್ನ 3: 30 ಕ್ಕೆ ಹೃದಯ ಸ್ತಂಭನದಿಂದ ನಿಧನರಾದರು" ಎಂದು ಕುಟುಂಬ ಸದಸ್ಯರೊಬ್ಬರು ಹೇಳಿದರು.ದತ್ ಅವರ ಪತ್ನಿ, ಮಗ, ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದಾರೆ ಪುತ್ರಿ ಯುಕೆನಲ್ಲಿ ನೆಲೆಸಿದ್ದಾರೆ.
ನಿವೃತ್ತ ಐಪಿಎಸ್ ಅಧಿಕಾರಿಯನ್ನು ಏಪ್ರಿಲ್ 14 ರಂದು ಗುರುಗ್ರಾಮದ ಮೆದಂತಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆಮ್ಲಜನಕದ ಮಟ್ಟ ಕ್ಷೀಣಿಸಲು ಪ್ರಾರಂಭಿಸಿದ್ದವೆಂದು ಕುಟುಂಬ ಮೂಲಗಳು ಪಿಟಿಐಗೆ ತಿಳಿಸಿವೆ.

ಪಾಕ್ ಮೂಲದ ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಮುಂಬಯಿನ ಹಲವು ಕಡೆ ಸರಣಿ ದಾಳಿ ನಡೆಸಿ 166 ಜನರ ಮಾರಣಹೋಮ ನಡೆಸಿದ್ದರು.
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.
ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ 174 ಅಮಾಯಕ ಜನರನ್ನು ಬಲಿಪಡೆದುಕೊಂಡಿದ್ದರು.
ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications