ಶಾಸಕನ ವಿರುದ್ಧ ದನಿ ಎತ್ತಿದ ಪತ್ರಕರ್ತನ ಸುಟ್ಟು ಕೊಂದರೇ?
ಷಹಜಹಾನ್ಪುರ, ಜೂ.9: ಉತ್ತರಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದ ಶಾಸಕ ರಾಮಮೂರ್ತಿ ಅವರ ವಿರುದ್ಧ ಲೇಖನವೊಂದನ್ನು ಪ್ರಕಟಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿದ ತಪ್ಪಿಗೆ ಜಗೇಂದ್ರ ಸಿಂಗ್ ಎಂಬ ಪತ್ರಕರ್ತನನ್ನು ಸಜೀವ ದಹನ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಪತ್ರಕರ್ತ ಜಗೇಂದ್ರಸಿಂಗ್ ಅವರನ್ನು ಶಾಸಕನ ಕಡೆಯ ಕೆಲವು ದುಷ್ಕರ್ಮಿಗಳು ಬೆಂಕಿಹಚ್ಚಿ ಸುಟ್ಟು ಹಾಕಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಇದನ್ನು ಕಂಡ ಕೆಲವರು ಬೆಂಕಿಯಲ್ಲಿ ಬೇಯುತ್ತಿದ್ದ ಸಿಂಗ್ ಆವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯೆಯಲ್ಲೇ ಜಗೇಂದ್ರ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ದುರಂತವೆಂದರೆ, ಜಗೇಂದ್ರ ಸಿಂಗ್ ಅವರಿಗೆ ಬೆಂಕಿ ಹಚ್ಚಿದವರ ಪೈಕಿ ಪೊಲೀಸ್ ಅಧಿಕಾರಿಯೂ ಇದ್ದರು. ಇದು ಶಾಸಕ ರಾಮಮೂರ್ತಿ ಅವರದ್ದೇ ಕೃತ್ಯ್ತ ಎಂದು ಸಿಂಗ್ ಅವರ ಕುಟುಂಬ ಆರೋಪಿಸಿದೆ.

ಶಾಸಕ ರಾಮಮೂರ್ತಿ ಅಕ್ರಮ ಗಣಿಗಾರಿಕೆ, ಭೂ ಕಬಳಿಕೆಗಳ ಮುಂತಾದ ಭ್ರಷ್ಟಾಚಾರ ಕೃತ್ಯಗಳನ್ನು ನಡೆಸಿದ ಆರೋಪವಿದೆ. ಈ ಬಗ್ಗೆ ಪತ್ರಿಕೆಗಳಿಗೆ ಜಗೇಂದ್ರ ಸಿಂಗ್ ವರದಿ ಮಾಡಿದ್ದರು. ಅದರೆ, ಸಿಂಗ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿಕೊಂಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ. ನಂತರ ಸಜೀವ ದಹನವಾಗಿದೆ.
ಇದೊಂದು ಆತ್ಮಹತ್ಯೆ ಪ್ರಕರಣ, ಜಗೇಂದ್ರ ಸಿಂಗ್ ರನ್ನು ಬಂಧಿಸಲು ಯತ್ನಿಸಲಾಯಿತು. ಅದರೆ, ಅಷ್ಟರಲ್ಲಿ ಸಿಂಗ್ ಆತ್ಮಹತ್ಯೆ ಶರಣಾದರು ಎಂಬುದು ಷಹಜಹಾನ್ಪುರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications