ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲ್ಲ; ಕೇಂದ್ರ

|
Google Oneindia Kannada News

ನವದೆಹಲಿ, ಜನವರಿ 12: ಇಡೀ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧನ ಪಡಿಸಿರುವ ನಾಲ್ವರು ಘಟಾನುಘಟಿ ನ್ಯಾಯಮೂರ್ತಿಗಳ ನಡೆ ಬಗ್ಗೆ ಕೇಂದ್ರ ಸರ್ಕಾರ ತನ್ನ ಮೊದಲ ಪ್ರತಿಕ್ರಿಯೆಯನ್ನು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ ಇದೊಂದು ನ್ಯಾಯಾಂಗದ ಆಂತರಿಕ ವಿಷಯವಾಗಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ನಾವು ಪ್ರವೇಶ ಮಾಡಲು ಇಷ್ಟಪಡುವುದಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದಿದ್ದು ಏಕೆ?ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದಿದ್ದು ಏಕೆ?

ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸುಪ್ರೀಂ ಕೋರ್ಟ್ ಆಡಳಿತದ ಬಗ್ಗೆ ಅಸಮಾಧಾನವನ್ನು ಹೊರಹಾಕಿದರು.

Judges Press Meet, Central government refuses to interfere in Judicial Mutiny

ಸೋಹ್ರಾಬುದ್ದಿನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಬಿ.ಎಚ್.ಲೋಯಾ ಅನುಮಾನಾಸ್ಪದ ಸಾವಿನ ಕುರಿತಂತೆ ಹಲವು ಪ್ರೀಂ ಕೋರ್ಟ್ ಆಡಳಿತದ ಹುಳುಕುಗಳನ್ನು ತೆರೆದಿಟ್ಟರು.

ಈ ಸುದ್ದಿಗೋಷ್ಠಿ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಸುದ್ದಿಗೋಷ್ಠಿ ಕರೆದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರ ಜೊತೆ ಚರ್ಚೆ ನಡೆಸಿದರು. ಬಳಿಕ ಪ್ರತಿಕ್ರಿಯಿಸಿ ಇದೊಂದು ನ್ಯಾಯಾಂಗದ ಆಂತರಿಕ ವಿಷಯವಾಗಿದ್ದರಿಂದ ಇದರ ಮಧ್ಯೆ ಪ್ರವೇಶಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.

English summary
Central government refuses to interfere in Judicial Mutiny. The central government stated that it will not interfere in judiciary's internal matter Judges Press Conference
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X