'ಪ್ರಣಯ್ಗೆ ನ್ಯಾಯ ದೊರಕಿಸಿ': ಫೇಸ್ಬುಕ್ನಲ್ಲಿ ಬೃಹತ್ ಅಭಿಯಾನ
ಮಿರ್ಯಾಲಗುಡ, ಸೆಪ್ಟೆಂಬರ್ 18: ಮೇಲ್ವರ್ಗದ ಯುವತಿಯನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಜೀವ ಕಳೆದುಕೊಂಡ ತೆಲಂಗಾಣದ ಮಿರ್ಯಾಲಗುಡದ ಕ್ರೈಸ್ತ ದಲಿತ ಪ್ರಣಯ್ಗೆ ನ್ಯಾಯ ದೊರಕಿಸಿಕೊಡುವ ಹೋರಾಟಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರೂ ಕೈಜೋಡಿಸಿದ್ದಾರೆ.
'ಜಸ್ಟೀಸ್ ಫಾರ್ ಪ್ರಣಯ್' ಎಂಬ ಫೇಸ್ಬುಕ್ ಪುಟವನ್ನು ತೆರೆಯಲಾಗಿದ್ದು, ಎರಡು ದಿನದಲ್ಲಿಯೇ 80 ಸಾವಿರಕ್ಕೂ ಹೆಚ್ಚು ಮಂದಿ ಪುಟವನ್ನು ಮೆಚ್ಚಿಕೊಂಡಿದ್ದಾರೆ.
ಜಾತಿಯ ಕಾರಣಕ್ಕೆ ತನ್ನ ಪತಿಯನ್ನು ಸಾಯಿಸಿದ ಘಟನೆಯ ವಿರುದ್ಧ ಹೋರಾಟ ನಡೆಸಲು ಅಮೃತಾ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡಿದ್ದಾರೆ. ಅವರ ವೈಯಕ್ತಿಕ ಖಾತೆ ಜತೆ ಸಂಪರ್ಕಹೊಂದಿರುವ ಪುಟಕ್ಕೆ ಬೆಂಬಲ ನೀಡಲು ದೇಶದ ಮೂಲೆ ಮೂಲೆಯ ಜನರು ಮುಂದಾಗುತ್ತಿದ್ದಾರೆ.

ತಮಗೆ ಸಂತಾಪಗಳನ್ನು ತಿಳಿಸುವ ಮತ್ತು ಸ್ಥೈರ್ಯ ತುಂಬುವ ಲೆಕ್ಕವಿಲ್ಲದಷ್ಟು ಸಂದೇಶಗಳು ಫೇಸ್ಬುಕ್ನಲ್ಲಿ ಬರುತ್ತಿರುವುದಾಗಿ ಅಮೃತಾ ತಿಳಿಸಿದ್ದಾರೆ. ಪ್ರಣಯ್ ಜಾತಿಪದ್ಧತಿಯನ್ನು ಯಾವಾಗಲೂ ವಿರೋಧಿಸುತ್ತಿದ್ದರು. ಈ ಆಂದೋಲನದ ಮೂಲಕ ಅದಕ್ಕೆ ಅಂತ್ಯ ಕಾಣಿಸಲು ಬಯಸಿರುವುದಾಗಿ ಹೇಳಿದ್ದಾರೆ.
ಪ್ರಣಯ್ ಅವರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯದಾದ್ಯಂತ ನಡೆದ ಪ್ರತಿಭಟನೆಗಳ ಫೋಟೊಗಳನ್ನು ಈ ಪುಟದಲ್ಲಿ ಪ್ರಕಟಿಸಲಾಗಿದೆ. ಇದಲ್ಲದೆ 'ಜಸ್ಟೀಸ್ ಫಾರ್ ಪ್ರಣಯ್' ಎಂಬ ಶೀರ್ಷಿಕೆಯ ಇನ್ನೂ ಎರಡು ಪುಟಗಳು ಸೃಷ್ಟಿಯಾಗಿವೆ.

ಪುಟವನ್ನು ಇಷ್ಟಪಡುವ ಬಳಕೆದಾರರು ಪ್ರಣಯ್ ಅವರ ಹತ್ಯೆ ಮಾಡಿಸಿದ ಆರೋಪ ಎದುರಿಸುತ್ತಿರುವ ಅಮೃತಾ ಅವರ ತಂದೆ ಮಾರುತಿ ರಾವ್ಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications