ಕೊಲ್ಕತ್ತಾ ಹೈಕೋರ್ಟ್ ನ್ಯಾ. ಸಿ ಎಸ್ ಕರ್ಣನ್ ಬಂಧನ
ಕೋಯಮತ್ತೂರು, ಜೂನ್ 20 : ನ್ಯಾಯಾಂಗ ನಿಂದನೆ ಆರೋಪದಡಿ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿ ನಾಪತ್ತೆಯಾಗಿದ್ದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸಿ ಎಸ್ ಕರ್ಣನ್ ಅವರನ್ನು ಮಂಗಳವಾರ ತಮಿಳುನಾಡಿನ ಕೋಯಮತ್ತೂರಿನಲ್ಲಿ ಬಂಧಿಸಲಾಗಿದೆ.
ಜೈಲು ಶಿಕ್ಷೆಗೆ ಗುರಿಯಾಗಿ ಮೇ 9ರಿಂದ ನಾಪತ್ತೆಯಾಗಿದ್ದ ನ್ಯಾ, ಕರ್ಣನ್ ಅವರನ್ನು ಪಶ್ಚಿಮ ಬಂಗಾದ ಸಿಐಡಿ ಅಧಿಕಾರಿಗಳು ಕೋಯಮತ್ತೂರಿನಲ್ಲಿ ಬಂಧಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೊಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ ಅವರಿಗೆ ಸುಪ್ರೀಂ ಕೋರ್ಟ್ 6 ತಿಂಗಳ ಸಜೆ ವಿಧಿಸಿತ್ತು. ಬಳಿಕ ಕರ್ಣನ್ ನಾಪತ್ತೆಯಾಗಿದ್ದರು.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ವಿವಾದ ಎಬ್ಬಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ನ್ಯಾಯಾಂಗ ವ್ಯವಸ್ಥೆಯ ವಿರುದ್ಧವೇ ಬಂಡೆದಿದ್ದಿ ಕರ್ಣನ್
ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ವಿರುದ್ಧವೇ ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ಸಿ.ಎಸ್. ಕರ್ಣನ್ ಬಂಡೆದಿದ್ದಿದ್ದರು.

ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ನ್ಯಾಯಾಂಗ ನಿಂದನೆ
ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಚ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿತ್ತು.

ನ್ಯಾ. ಕರ್ಣನ್ ಗೆ 6 ತಿಂಗಳ ಸಜೆ
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ (59)ಅವರಿಗೆ ಸುಪ್ರೀಂ ಕೋರ್ಟ್ 6 ತಿಂಗಳ ಸಜೆ ವಿಧಿಸಿತ್ತು.ಇದೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನದಲ್ಲಿರುವವರಿಗೆ ಜೈಲು ಶಿಕ್ಷೆಯಾಗಿದೆ. ತಕ್ಷಣವೇ ನ್ಯಾ.ಸಿ.ಎಸ್.ಕರ್ಣನ್ ಅವರನ್ನು ಬಂಧಿಸುವಂತೆ ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

ಮೇ 9ರಿಂದ ನಾಪತ್ತೆಯಾಗಿದ್ದ ನ್ಯಾ. ಕರ್ಣನ್
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೊಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ ಅವರಿಗೆ ಸುಪ್ರೀಂ ಕೋರ್ಟ್ 6 ತಿಂಗಳ ಶಿಕ್ಷೆ ವಿಧಿಸುತ್ತಿದ್ದಂತಯೇ ಮೇ 9ರಿಂದ ಪೊಲೀಸರಿಗೆ ಸಿಗದೆ ನಾಪತ್ತೆಯಾಗಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications