ಕಾವೇರಿ ನ್ಯಾಯಾಧಿಕರಣ ಅಧ್ಯಕ್ಷರಾಗಿ ನ್ಯಾ. ಮನೋಹರ್ ಸಪ್ರೆ ನೇಮಕ
ಬರೋಬ್ಬರಿ 20 ವರ್ಷಗಳ ನಂತರ ಕಾವೇರಿ ನ್ಯಾಯಾಧೀಕರಣದ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆಯವರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ನೇಮಕ ಮಾಡಿದ್ದಾರೆ.
ನವದೆಹಲಿ, ಫೆಬ್ರವರಿ 20: ಬರೋಬ್ಬರಿ 20 ವರ್ಷಗಳ ನಂತರ ಕಾವೇರಿ ನ್ಯಾಯಾಶಿಕರಣಕ್ಕೆ ಅಧ್ಯಕ್ಷರೊಬ್ಬರನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆಯವರನ್ನು ನ್ಯಾಯಾಧಿಕರಣದ ಮುಖ್ಯಸ್ಥರನ್ನಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ನೇಮಕ ಮಾಡಿದ್ದಾರೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಇಂಧನ ಮಂತ್ರಿ ಪೀಯೂಷ್ ಗೋಯಲ್ ಕಾವೇರಿ ನ್ಯಾಯಾಧಿಕರಣದಲ್ಲಿ ದೀರ್ಘ ಕಾಲದಿಂದ ಅಧ್ಯಕ್ಷರ ಹುದ್ದೆ ಖಾಲಿ ಇದೆ. ಮಾತ್ರವಲ್ಲದೆ ಇರುವ ಇಬ್ಬರೂ ಸದಸ್ಯರಿಗೆ 70 ವರ್ಷ ದಾಟಿದೆ ಎಂದು ಹೇಳಿದ್ದರು. ಇದೀಗ ಅಧ್ಯಕ್ಷರ ಹುದ್ದೆಯನ್ನು ಭರ್ತಿ ಮಾಡಲಾಗಿದೆ.[ಇಬ್ಬರು ಕನ್ನಡಿಗರೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು]

"ಯಾವುದೇ ಕಾರಣಕ್ಕೂ ಸಪ್ರೆ ನೇಮಕದ ನಂತರ ಕಾವೇರಿ ವಿಚಾರಣೆಯನ್ನು ನ್ಯಾಯಾಧಿಕರಣ ಪುನರಾರಂಭಿಸುತ್ತಿಲ್ಲ. ಬದಲಿಗೆ ಸಮಿತಿ ಈವರಗೆ ನಿರ್ವಹಿಸಿದ್ದ ಜವಾಬ್ದಾರಿಗಳನ್ನು ನ್ಯಾಯಮೂರ್ತಿ ಸಪ್ರೆ ಮುಂದುವರಿಸಲಿದ್ದಾರೆ," ಎಂದು ಪೀಯೂಷ್ ಗೋಯಲಕ್ ಸ್ಪಷ್ಟಪಡಿಸಿದ್ದರು.
ಅಭಯ್ ಮನೋಹರ್ ಸಪ್ರೆ
ಅಭಯ್ ಮನೋಹರ್ ಸಪ್ರೆ ಹಿಂದೆ ಮಧ್ಯಪ್ರದೇಶ ಹೈಕೋರ್ಟಿನ ನ್ಯಾಯಮೂರ್ತಿಯಾಗಿದ್ದರು. ಸದ್ಯ ಸುಪ್ರಿಂ ಕೋರ್ಟಿನ ನ್ಯಾಯಮೂರ್ತಿಯಾಗಿ ಸಪ್ರೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಸ್ಟ್ 19, 2019ರಲ್ಲಿ ನ್ಯಾಯಮೂರ್ತಿ ಸಪ್ರೆ ಸುಪ್ರೀಂ ಕೋರ್ಟಿನಿಂದ ನಿವೃತ್ತರಾಗಲಿದ್ದಾರೆ.['ಸಿನಿಮಾ ಭಾಗವಾಗಿ ರಾಷ್ಟ್ರಗೀತೆ ಪ್ರಸಾರವಾದರೆ ಎದ್ದು ನಿಲ್ಲಬೇಕಿಲ್ಲ']
ಸದ್ಯ ಕಾವೇರಿ ನ್ಯಾಯಾಧಿಕರಣದ ಆದೇಶವನ್ನು ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳು ಪ್ರಶ್ನಿಸಿದ್ದು, ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications