ಕಾಂಗ್ರೆಸ್ಗೆ ಮರಳುವ ಸುಳಿವು ನೀಡಿದರೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ
ನವದೆಹಲಿ, ನವೆಂಬರ್ 25: ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿಯ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಜ್ಯೋತಿರಾದಿತ್ಯ ಸಿಂಧ್ಯಾ ಕೋರಿದ ಸ್ವಾಗತದ ವೈಖರಿಯು ಅವರು ಮತ್ತೊಮ್ಮೆ ಕಾಂಗ್ರೆಸ್ ಕಡೆಗೆ ಮರಳುತ್ತಿರುವುದರ ಸೂಚನೆ ಆಗಿರಬಹುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರರು ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯು ಬುಧವಾರ ಬೆಳಿಗ್ಗೆ ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋಡಾರ್ಲಿ ಗ್ರಾಮಕ್ಕೆ ಪ್ರವೇಶಿಸಿತು. ನವೆಂಬರ್ 23ರಂದು ನಡೆದ ಮೆರವಣಿಗೆಯನ್ನು ಉಲ್ಲೇಖಿಸಿ "ಮಧ್ಯಪ್ರದೇಶದಲ್ಲಿ ಎಲ್ಲರಿಗೂ ಸ್ವಾಗತವಿದೆ" ಎಂದು ಬಿಜೆಪಿ ನಾಯಕ ಜ್ಯೋತಿರಾಡಿತ್ಯ ಸಿಂಧ್ಯಾ ಹೇಳಿದ್ದರು. ಕಾಂಗ್ರೆಸ್ಸಿನ ಮಾಜಿ ಸದಸ್ಯರಾಗಿದ್ದ ಜ್ಯೋತಿರಾದಿತ್ಯ ಸಿಂಧ್ಯಾ 2020ರ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು.
ಇದೀಗ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಬಗ್ಗೆ ಉತ್ತಮ ರೀತಿಯಲ್ಲಿ ಸ್ವಾಗತ ಕೋರಿದ ಜ್ಯೋತಿರಾದಿತ್ಯ ಸಿಂಧ್ಯಾ ವೈಖರಿಯು 'ಘರ್ ವಾಪ್ಸಿ' ಯ ಸೂಚನೆಯಾಗಿರಬಹುದು" ಎಂದು ಹಿಮಾಚಲ ಪ್ರದೇಶದ ಮಾಜಿ ಪ್ರದೇಶ ಕಾಂಗ್ರೆಸ್ ಸಮಿತಿ (ಎಚ್ಪಿಸಿಸಿ) ಅಧ್ಯಕ್ಷರು ಹಾಗೂ ಕಾಂಗ್ರೆಸ್ ವಕ್ತಾರ ಆಗಿರುವ ಕುಲ್ದೀಪ್ ಸಿಂಗ್ ರಾಥೋರ್ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ:
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜನರು ಬದಲಾವಣೆಯ ಕಡೆಗೆ ಚಿತ್ತ ಹರಿಸಿದ್ದಾರೆ. ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಜನರು ಅಸಮಾಧಾನವನ್ನು ಹೊಂದಿದ್ದು, ಬದಲಾವಣೆಯ ಸ್ಪಷ್ಟ ಸೂಚನೆಯನ್ನು ಕೊಟ್ಟಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸ್ಪಷ್ಟ ಬಹುಮತದೊಂದಿಗೆ ರಚಿಸುತ್ತದೆ ಎಂದು ಕುಲ್ದೀಪ್ ಸಿಂಗ್ ರಾಥೋರ್ ಹೇಳಿದರು.
ಕಳೆದ ವರ್ಷ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಒಂದು ಲೋಕಸಭಾ ಉಪಚುನಾವಣೆಯನ್ನು ಕಳೆದುಕೊಂಡಾಗ ಬಿಜೆಪಿಯ ಸೋಲಿನ ಸುಳಿವನ್ನು ಕಂಡುಕೊಂಡಿದೆ. ಕಾಂಗ್ರೆಸ್ ಮತದಾನದಲ್ಲಿ ಪ್ರಾಬಲ್ಯ ಸಾಧಿಸಿದ ಪ್ರಮುಖ ವಿಷಯಗಳಾಗಿ ಬೆಲೆ ಏರಿಕೆ, ಹಣದುಬ್ಬರ ಮತ್ತು ಆಡಳಿತದ ಏರಿಳಿತವನ್ನು ಎತ್ತಿ ತೋರಿಸಿದೆ ಎಂದು ರಾಥೋರ್ ಹೇಳಿದರು.
ಕುದುರೆ ವ್ಯಾಪಾರದ ಬಗ್ಗೆ ಕುಲ್ದೀಪ್ ಸಿಂಗ್ ರಾಥೋರ್ ಉಲ್ಲೇಖ:
ಹಿಮಾಚಲ ಪ್ರದೇಶದಲ್ಲಿ ಹೊಸ ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ಪಕ್ಷದ ಶಾಸಕರು ಮತ್ತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ರಾಜ್ಯದ ಚುನಾವಣಾ ಫಲಿತಾಂಶದ ನಂತರದಲ್ಲಿ ಕುದುರೆ ವ್ಯಾಪಾರದ ಸಾಧ್ಯತೆಗಳು ಹೆಚ್ಚಾಗಿರುವುದನ್ನು ತಳ್ಳಿ ಹಾಕುವಂತಿಲ್ಲ. ಆದರೆ ಈ ಬಾರಿ ನಾವು ಸಮಗ್ರತೆಯ ಬಗ್ಗೆ ಸಂಪೂರ್ಣ ವಿಶ್ವಾಸವನ್ನು ಹೊಂದಿದ್ದೇವೆ. ಪಕ್ಷದ ಮುಖಂಡರು ಶಿಸ್ತುಬದ್ಧವಾಗಿ ಉಳಿಯುವಂತೆ ಕರೆ ನೀಡಿದ್ದಾರೆ. ಏಕೆಂದರೆ ಇಲ್ಲಿಂದ ಮುಂದೆ ಇನ್ನೂ ಅನೇಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಕುಲ್ದೀಪ್ ಸಿಂಗ್ ರಾಥೋರ್ ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications