ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ 2022ಕ್ಕೆ ಮುಂದೂಡಿಕೆ
ನವದೆಹಲಿ, ಜುಲೈ 23: ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನವನ್ನು 2022ಕ್ಕೆ ಮುಂದೂಡಲಾಗಿದೆ.
2021ರ ಡಿಸೆಂಬರ್ನಲ್ಲಿ ಗಗನಯಾನಕ್ಕೆ ಚಾಲನೆ ದೊರೆಯಬೇಕಿತ್ತು, ಆದರೆ 2022ರ ಜೂನ್ ಒಳಗೆ ಗಗನಯಾನ ಆರಂಭಗೊಳ್ಳಲಿದೆ ಎಂದು ಇಸ್ರೋ ಚೇರ್ಮೆನ್ ಕೆ ಶಿವನ್ ತಿಳಿಸಿದ್ದಾರೆ.
ಈ ಯೋಜನೆಗೆ 2020ರ ಡಿಸೆಂಬರ್ ನಲ್ಲೇ ಚಾಲನೆ ನೀಡಬೇಕಿತ್ತು. ಆದರೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಈ ಯೋಜನೆ ಒಂದು ವರ್ಷ ಮುಂದೂಡಲಾಗಿತ್ತು, ಇದೀಗ ಅದೇ ಕಾರಣ ನೀಡಿ ಡಿಸೆಂಬರ್ನಲ್ಲಿ ನಡೆಯಬೇಕಿದ್ದ ಗಗನಯಾನವನ್ನು ಮುಂದೂಡಲಾಗಿದೆ.

ಗಗನಯಾನ ಯೋಜನೆಗೆ 10,000 ಕೋಟಿ ರೂಗಳನ್ನು ಮೀಸಲಿಡಲಾಗಿದ್ದು, 2022ರ ವೇಳೆಗೆ ಭಾರತದ ಮೂರು ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಅಧ್ಯಯನ ನಡೆಸಲಾಗುತ್ತದೆ .
ಇನ್ನು 2022ಕ್ಕೆ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿದ್ದು, ಈ ಮಹತ್ವದ ವರ್ಷದಲ್ಲೇ ಭಾರತದ ಮಹತ್ವಾಕಾಂಕ್ಷಿ ಗಗನಯಾನ ಕೂಡ ಆರಂಭವಾಗಲಿದೆ.
ಈಗಾಗಲೇ ಇದೇ ವಿಚಾರವಾಗಿ ಇಸ್ರೋ ಕೂಡ ಕಾರ್ಯನಿರತವಾಗಿದ್ದು, ಮೊದಲು ಮಾನವ ರಹಿತ ಗಗನಯಾನ ಯೋಜನೆಯನ್ನು 2020ರ ಡಿಸೆಂಬರ್ ನಲ್ಲಿ ಚಾಲನೆ ಮಾಡಲು ಉದ್ದೇಶಿಸಲಾಗಿತ್ತು.
ಎರಡನೇ ಮಾನವ ರಹಿತ ಯೋಜನೆಯನ್ನು 2021ರ ಜೂನ್ ನಲ್ಲಿ ಯೋಜಿಸಲು ಉದ್ದೇಶಿಸಲಾಗಿತ್ತು. ಯೋಜನೆಯ ಪ್ರಮುಖ ಮತ್ತು ನಿರ್ಣಾಯಕ ಮಾನವ ಸಹಿತ ಗಗನಯಾನ ಯೋಜನೆಯನ್ನು ಆರು ತಿಂಗಳ ಬಳಿಕ ಅಂದರೆ 2021ರ ಡಿಸೆಂಬರ್ ನಲ್ಲಿ ಚಾಲನೆ ನೀಡಲು ಯೋಜಿಸಲಾಗಿತ್ತು. ಇದೀಗ ಈ ಯೋಜನೆಯ ಡೆಡ್ ಲೈನ್ 2022ಕ್ಕೆ ಮುಂದೂಡಿದೆ.
ಕೇವಲ ಗಗನಯಾನ ಮಾತ್ರವಲ್ಲದೇ ಚಂದ್ರಯಾನ-3 ಸೇರಿದಂತೆ ಇಸ್ರೋದ ಬಹಳಷ್ಟು ಯೋಜನೆಗಳೂ ಕೂಡ ಕೊರೋನಾ ಸಾಂಕ್ರಾಮಿಕದಿಂದಾಗಿ ಮುಂದೂಡಲ್ಪಟ್ಟಿವೆ.
ಆಸ್ಟ್ರೋನಾಟ್ಗಳು ಎದುರಿಸುವ ದೈಹಿಕ- ಆರೋಗ್ಯ ಸವಾಲುಗಳು ಹಲವು. ಗಗನನೌಕೆ ಭೂಮಿ ಬಿಡುವ ಹಾಗೂ ಮರಳಿ ಭೂಮಿ ಸೇರುವ ಸಂದರ್ಭದಲ್ಲಿ ಯಾತ್ರಿಗಳ ದೇಹದ ಮೇಲೆ ತೂಕದ ನಾನಾ ವ್ಯತ್ಯಾಸಗಳಾಗುತ್ತವೆ. ಭೂಮಿಯ ಮೇಲೆ ಅವರು ಅನುಭವಿಸುವ ಗುರುತ್ವಾಕರ್ಷಣ ಬಲ, ಯಾತ್ರೆಯ ವೇಳೆಯಲ್ಲಿ ಹೆಚ್ಚಾಗುತ್ತದೆ.
ಶೂನ್ಯ ಗುರುತ್ವಬಲದ ಪ್ರದೇಶವನ್ನು ಮುಟ್ಟಿದಾಗ ಯಾತ್ರಿಗಳ ದೇಹದಲ್ಲಿ ತೀವ್ರ ಪಲ್ಲಟಗಳಾಗುತ್ತವೆ. ರಕ್ತದ ಪರಿಚಲನೆಯಲ್ಲೇ ವ್ಯತ್ಯಾಸವಾಗುತ್ತದೆ. ಇದನ್ನು ನಿಭಾಯಿಸುವ ಸರಿಯಾದ ತರಬೇತಿ ಹೊಂದಿಲ್ಲದಿದ್ದರೆ ಗಗನ್ನಾಟ್ಗಳು ಅಲ್ಲೇ ಕೋಮಾಗೆ ಹೋಗಬಹುದು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications