ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು, 60 ಜನರಿಗೆ ಗಾಯ
ಲಕ್ನೋ, ಆಗಸ್ಟ್ 23: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಅಜಂಗಢದಿಂದ ದೆಹಲಿಗೆ ತೆರಳುತ್ತಿದ್ದ ಕೈಫಿಯತ್ ಎಕ್ಸ್ ಪ್ರೆಸ್ ರೈಲು ದುರಂತಕ್ಕೀಡಾಗಿದೆ.
ಬುಧವಾರ ಮುಂಜಾನೆ 2.40ರ ಸುಮಾರಿಗೆ ಔರಾಲಿಯಾ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಕೈಫಿಯತ್ ಎಕ್ಸ್ ಪ್ರೆಸ್ ನ 10 ಬೋಗಿಗಳು ಹಳಿ ತಪ್ಪಿವೆ.

ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದ್ದರಿಂದ 60ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
Helpline numbers:
FD: 05278-222603,
SHG: 9794839010,
LKO:9794830975, KO:0522-2237677
ಇತ್ತೀಚೆಗೆ ಕಳಿಂಗ- ಉತ್ಕಲ್ ಎಕ್ಸ್ ಪ್ರೆಸ್ ಹಳಿ ತಪ್ಪಿ 22 ಜನರ ಸಾವಿಗೆ ಕಾರಣವಾಗಿತ್ತು. ಇದಾದ ಕೆಲ ದಿನಗಳ ಬಳಿಕ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಅಚ್ಚಾಲ್ಡಾ ನಾಗರಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಎಕ್ಸ್ ಪ್ರೆಸ್ ರೈಲಿನ ಇಂಜಿನ್ ಭಾಗ ಸೇರಿದಂತೆ ಬೋಗಿಗಳು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.












Click it and Unblock the Notifications