ಕಾಳಿ ದೇವಿ ಸಿಗರೇಟು ಸೇದುವ ಪೋಸ್ಟರ್: ನಿರ್ದೇಶಕಿ ವಿರುದ್ಧ ದೂರು
ನವದೆಹಲಿ, ಜು. 4: ತಾವು ಇತ್ತೀಚೆಗೆ ನಿರ್ದೇಶಿಸಲಿರುವ ಮುಂದಿನ ಚಿತ್ರದ ಭಾಗವಾಗಿ ಕಾಳಿ ದೇವಿ ಸಿಗರೇಟು ಸೇದುತ್ತಿದ್ದ ಪೋಸ್ಟರ್ ಅನ್ನು ಟ್ವೀಟ್ ಮಾಡಿದ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೂರು ದಾಖಲಾಗಿದೆ.
ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಕಾಳಿ ಶೀರ್ಷಿಕೆಯ ಚಿತ್ರದ ಪೋಸ್ಟರ್ ಹಿಂದೂ ದೇವತೆ ಕಾಳಿಯ ವೇಷದಲ್ಲಿ ಮಹಿಳೆಯೊಬ್ಬರು ಸಿಗರೇಟ್ ಸೇದುತ್ತಿರುವುದನ್ನು ತೋರಿಸುತ್ತದೆ.
ನಿರ್ದೇಶಕಿ ಹಿಂದೂ ದೇವತೆಯನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸೋಮವಾರ, ದೆಹಲಿ ಮೂಲದ ವಕೀಲರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
Super thrilled to share the launch of my recent film - today at @AgaKhanMuseum as part of its “Rhythms of Canada”
— Leena Manimekalai (@LeenaManimekali) July 2, 2022
Link: https://t.co/RAQimMt7Ln
I made this performance doc as a cohort of https://t.co/D5ywx1Y7Wu@YorkuAMPD @TorontoMet @YorkUFGS
Feeling pumped with my CREW❤️ pic.twitter.com/L8LDDnctC9
ಸುದ್ದಿ ಸಂಸ್ಥೆ ಐಎಎನ್ಎಸ್ನಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿದ ವಕೀಲರು, ನಿರ್ದೇಶಕರು ಕಾಳಿ ದೇವಿಯು ಧೂಮಪಾನ ಮಾಡುವುವನ್ನು ತೋರಿಸುವ ಮೂಲಕ ನನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದು ಹೆಚ್ಚು ಆಕ್ಷೇಪಾರ್ಹ ಮತ್ತು ಯಾವುದೇ ರೀತಿಯಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
ನಿರ್ದೇಶಕಿಯ ಪೋಸ್ಟರ್ ಅನ್ನು ಖೇದನೀಯ ಎಂದು ಕರೆದ ಅವರು, ಚಲನಚಿತ್ರವನ್ನು ಪ್ರಚಾರ ಮಾಡಲು ಅದನ್ನುಇಂತಹ ದೃಶ್ಯ ಬಳಸುವುದು ಅತ್ಯಂತ ಅತಿರೇಕವಾದುದು. ಇದು ಹಿಂದೂ ಸಮುದಾಯದ ಭಾವನೆಗಳು ಮತ್ತು ನಂಬಿಕೆಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ದೆಹಲಿಯ ಸೈಬರ್ ಸೆಲ್ಗೆ ನೀಡಿದ ದೂರಿನಲ್ಲಿ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ನಿರ್ದೇಶಕಿಯು ತನ್ನ ಟ್ವಿಟರ್ ಖಾತೆಯಿಂದ ಆಕ್ಷೇಪಾರ್ಹ ಫೋಟೋ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶವನ್ನು ಹೊಂದಿದ್ದು, ಇದು ಸಾಮಾಜಿಕ ಮಾಧ್ಯಮ ಮತ್ತು ಎಲ್ಲಾ ಸಾರ್ವಜನಿಕ ವೇದಿಕೆಗಳಲ್ಲಿ ಚೆನ್ನಾಗಿ ಪ್ರಸಾರವಾಗಿದೆ. ಇದು ಕಲಂ 295A,298, 505, 67 I.T Act ಮತ್ತು 34 ಐಪಿಸಿ ಅಡಿಯಲ್ಲಿ ಅಪರಾಧವಾಗಿದೆ. ಆದ್ದರಿಂದ ಆರೋಪಿಗಳ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ.
ಶನಿವಾರದಂದು ಲೀನಾ ಮಣಿಮೇಕಲೈ ಟ್ವಿಟರ್ನಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಕೆನಡಾದಲ್ಲಿ ತಮ್ಮ ಚಿತ್ರವನ್ನು ಪ್ರಾರಂಭಿಸಿ ಅವರ ಟ್ವಿಟ್ಟರ್ ಪೋಸ್ಟ್ನಲ್ಲಿನ ಶೀರ್ಷಿಕೆಯು, ಇಂದು ಅಗಖಾನ್ ಮ್ಯೂಸಿಯಂನಲ್ಲಿ ಅದರ "ರಿದಮ್ಸ್ ಆಫ್ ಕೆನಡಾ" ಭಾಗವಾಗಿ ನನ್ನ ಇತ್ತೀಚಿನ ಚಲನಚಿತ್ರದ ಬಿಡುಗಡೆಯನ್ನು ಹಂಚಿಕೊಳ್ಳಲು ಹೆಚ್ಚು ಉತ್ಸುಹಕನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ತಮಿಳು ಸುದ್ದಿ ಪೋರ್ಟಲ್ ಪ್ರಕಾರ, ಮಣಿಮೇಕಲೈ ಸಾಕ್ಷ್ಯಚಿತ್ರವು ಒಂದು ಸಂಜೆ ಕಾಳಿ ದೇವಿಯು ಕಾಣಿಸಿಕೊಂಡಾಗ ಮತ್ತು ಟೊರೊಂಟೊದ ಬೀದಿಗಳಲ್ಲಿ ಓಡಾಡಿದಾಗ ನಡೆಯುವ ಘಟನೆಗಳ ಸುತ್ತ ಇರುತ್ತದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ವಕೀಲರು ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಪೋಸ್ಟರ್ ಅನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗಳನ್ನು 'ಕ್ರೋಧ'ಗೊಳಿಸುವ 'ಮಾನಹಾನಿಕಾರಕ' ಕೃತ್ಯ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications