ದೀರ್ಘಕಾಲೀನ ಅನಾರೋಗ್ಯ: ಬಿಜೆಪಿ ಶಾಸಕ ಕಲ್ಯಾಣ್ ಸಿಂಗ್ ನಿಧನ
ಉದಯಪುರ, ಫೆಬ್ರವರಿ 21: ರಾಜಸ್ಥಾನದ ನತದ್ವಾರದ ಬಿಜೆಪಿ ಶಾಸಕ ಕಲ್ಯಾಣ್ ಸಿಂಗ್ ಚೌಹಾಣ್(58) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉದಯಪುರದ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.21) ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

2013 ರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ನತದ್ವಾರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಗೆಲುವು ಸಾಧಿಸಿದ್ದರು.











Click it and Unblock the Notifications