'ನಾನು ಮಮತಾ ಅವರ ಫ್ಯಾನ್': ಕಮಲ್ ಹಾಸನ್
ಕೋಲ್ಕತ್ತಾ, ನವೆಂಬರ್ 11: ರಾಜಕೀಯ ರಂಗಕ್ಕೆ ಪ್ರವೇಶಿಸುವ ಉತ್ಸಾಹದಲ್ಲಿರುವ ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಬಂದಿರುವ ಕಮಲ್ ಅವರು ಶುಕ್ರವಾರ ರಾತ್ರಿ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು.
ದೀದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಸುಳಿವನ್ನು ಕಮಲ್ ಬಿಟ್ಟು ಕೊಟ್ಟಿಲ್ಲ.

ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಸಮಾರಂಭದ ನಂತರ ಮಮತಾ ಬ್ಯಾನರ್ಜಿ ಹಾಗೂ ಕಮಲ್ ಹಾಸನ್ ಇಬ್ಬರೂ ಕೆಲ ಹೊತ್ತು ಮಾತುಕತೆ ನಡೆಸಿದರು. ಇದಾದ ಬಳಿಕ ಮಾತನಾಡಿದ ಕಮಲ್, 'ನನಗೆ ಈ ನಗರ ಇಷ್ಟ, ನನಗೆ ಫಿಲಂ ಫೆಸ್ಟಿವಲ್ ಇಷ್ಟ, ನಾನು ನಿಮ್ಮ ಸಿಎಂ(ಮಮತಾ) ಅವರ ಫ್ಯಾನ್' ಎಂದು ಹೇಳಿದರು.
ನಟ ಕಮಲ್ ಹಾಸನ್, ನನ್ನನ್ನು ಫಿಲ್ಮ್ ಫೆಸ್ಟಿವಲ್ಗೆ ಆಹ್ವಾನಿಸಿದ್ದಕ್ಕೆ ಧನ್ಯವಾದ ಮಮತಾಜೀ ಎಂದು ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಕೇರಳ ಸಿಎಂ ಪಿನರಾಯಿ ವಿಜಯನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಪಶ್ಚಿಮ ಬಂಗಾಳದ ಸಿಎಂ ಮಮತಾ ಅವರನ್ನು ಕಮಲ್ ಅವರು ಭೇಟಿಯಾಗಿದ್ದರು. ಈ ಮೂವರು ಸಿಎಂಗಳಿಗೂ ಮೋದಿ ಸರ್ಕಾರಕ್ಕೂ ಒಳ್ಳೆ ಸಂಬಂಧವಿಲ್ಲ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.
ಆದರೆ, ಕಮಲ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ಬಲ-ಎಡ ಪಂಥೀಯ ಎಂದು ನಾನು ಎಂದಿಗೂ ಗುರುತಿಸಿಕೊಳ್ಳುವುದಿಲ್ಲ. ಜನತೆಗೆ ಬೇಕಾದ ನೆರವು ನೀಡಲು ಯಾವುದು ಉತ್ತಮ ಮಾರ್ಗವೋ ಅದನ್ನು ಅನುಸರಿಸುತ್ತೇನೆ ಎಂದಿದ್ದರು.
ತಮ್ಮ ಹುಟ್ಟುಹಬ್ಬದ ದಿನ(ನವೆಂಬರ್ 07) ದಂದು ಹೊಸ ಪಕ್ಷದ ಬಗ್ಗೆ ಯಾವುದೇ ಸುಳಿವು ನೀಡದ ಕಮಲ್, Maiyyam Whistle ಎಂಬ ಅಪ್ಲಿಕೇಷನ್ ಲೋಕಾರ್ಪಣೆ ಮಾಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications