ಕಮಲ್ ಹಾಸನ್ಗೆ ಗುಂಡಿಕ್ಕಿ ಕೊಲೆ ಮಾಡಬೇಕು: ಹಿಂದೂ ಮಹಾಸಭಾ
ಮೀರತ್, ನವೆಂಬರ್ 5: ಖ್ಯಾತ ನಟ ಕಮಲ್ ಹಾಸನ್ 'ಹಿಂದೂ ಭಯೋತ್ಪಾದನೆ' ಕುರಿತು ಹೇಳಿಕೆ ನೀಡಿರುವ ಬೆನ್ನಿಗೆ ಅವ ರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕು ಅಥವಾ ಗಲ್ಲಿಗೇರಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ.
"ತಮ್ಮ ಧಾರ್ಮಿಕ ನಿಲುವುಗಳನ್ನು ಪ್ರಚುರಪಡಿಸಲು ಬಲಪಂಥೀಯ ಗುಂಪುಗಳು ಹಿಂದೂ ಭಯೋತ್ಪಾದನೆಯಲ್ಲಿ ತೊಡಗಿವೆ ಎಂದು ಹೇಳಿಕೆ ನೀಡಿರುವ ನಟ ಕಮಲಹಾಸನ್ ಹಾಗೂ ಅಂತವರನ್ನು ಗುಂಡಿಕ್ಕಿ ಕೊಲ್ಲಬೇಕು. ಆಗ ಅವರು ಪಾಠ ಕಲಿಯುತ್ತಾರೆ," ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಪಂಡಿತ್ ಅಶೋಕ್ ಶರ್ಮಾ ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಸೇರಿದವರ ವಿರುದ್ಧ ಅವಾಚ್ಯ ಭಾಷೆ ಬಳಸುವವರಿಗೆ ಈ ಪವಿತ್ರ ನೆಲದಲ್ಲಿ ಜೀವಿಸುವ ಹಕ್ಕಿಲ್ಲ. ಅವರ ಹೇಳಿಕೆಗೆ ಪ್ರತಿಯಾಗಿ ಅವರು ಸಾಯಬೇಕು ಎಂದು ಶರ್ಮಾ ಪ್ರತಿಪಾದಿಸಿದ್ದಾರೆ.
ಕಮಲಹಾಸನ್ ಚಲನಚಿತ್ರಗಳನ್ನು ಬಹಿಷ್ಕರಿಸಲು ನಾವು ನಿರ್ಧರಿಸಿದ್ದೇವೆ. ಹಿಂದೂಗಳನ್ನು ಮತ್ತು ಅವರ ಧರ್ಮವನ್ನು ಅವಮಾನಿಸುವವರ ಚಿತ್ರಗಳನ್ನು ಈ ರೀತಿ ಬಹಿಷ್ಕರಿಸುವ ತೀರ್ಮಾನವನ್ನು ಎಲ್ಲಾ ಭಾರತೀಯರು ತೆಗೆದುಕೊಳ್ಳಬೇಕು ಎಂದು ಮೀರತ್ ಹಿಂದೂ ಮಹಾಸಭಾ ಅಧ್ಯಕ್ಷ
ಅಭಿಷೇಕ್ ಅಗರವಾಲ್ ಹೇಳಿದ್ದಾರೆ.
ಹಿಂದೂ ಮಹಾ ಸಭಾ ಹೇಳಿಕೆಗೆ ಆಕ್ರೋಶ
ಹಿಂದೂ ಮಹಾಸಭಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, 'ಕಮಲ್ ಹಾಸನ್ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿ ಕೊಲೆ ಮಾಡುವಂತೆ ಬೆದರಿಸುವ ಹಿಂದೂ ಮಹಾಸಭಾ ಹೇಳಿಕೆಯನ್ನು ಖಂಡಿಸುವುದಾಗಿ' ಕೇಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕಮಲ್ ಹಾಸನ್ ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುವವರನ್ನು ಬಂಧಿಸಬೇಕು ಎಂದು ಪಿಣರಾಯಿ ವಿಜಯನ್ ಹಾಗೂ ಶಶಿ ತರೂರ್ ಆಗ್ರಹಿಸಿದ್ದಾರೆ.
This is being politica. I join @vijayanpinarayi in demanding areest& prosecution of those inciting violence against KamalHaasan. #StopHate pic.twitter.com/98btnVUveX
— Shashi Tharoor (@ShashiTharoor) November 5, 2017
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications