ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಕಮಲ್ ಹಾಸನ್
ಬೆಂಗಳೂರು, ಜೂನ್ 20: ನಟ ಕಂ ರಾಜಕಾರಣಿ ಕಮಲ್ ಹಾಸನ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದರು.
ತಮ್ಮ ಪಕ್ಷದ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಬಂದಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಕಮಲ್ ಹಾಸನ್, ಚುನಾವಣಾ ಆಯೋಗದಿಂದ ಬಂದು ರಾಹುಲ್ ನಿವಾಸಕ್ಕೆ ತೆರಳಿದರು.
ನಂತರ ಮಾತನಾಡಿದ ಕಮಲ್, "ಇದೊಂದು ಉಭಯ ಕುಶಲೋಪರಿ ಭೇಟಿ. ನಾವು ತಮಿಳುನಾಡು ರಾಜಕೀಯದ ಬಗ್ಗೆ ಮಾತನಾಡಿದೆವು," ಎಂದು ಹೇಳಿದರು.

ಭೇಟಿ ನಂತರ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದು, "ದೆಹಲಿಯಲ್ಲಿ ಕಮಲ್ ಹಾಸನ್ ರನ್ನು ಭೇಟಿಯಾಗಿ ಖುಷಿ ಪಟ್ಟೆ. ನಾವು ನಮ್ಮ ಎರಡು ಪಕ್ಷಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದೆವು. ಇದರಲ್ಲಿ ತಮಿಳುನಾಡು ರಾಜಕೀಯ ಪರಿಸ್ಥಿತಿಯೂ ಸೇರಿತ್ತು," ಎಂದು ತಿಳಿಸಿದರು.
Enjoyed meeting @ikamalhaasan in Delhi today. We discussed a wide range of issues concerning our two parties, including the political situation in Tamil Nadu. pic.twitter.com/cPWQd8w7YY
— Rahul Gandhi (@RahulGandhi) June 20, 2018
ಇದಕ್ಕೆ ಕಮಲ್ ಟ್ಟಿಟ್ಟರ್ ನಲ್ಲೇ ಪ್ರತಿಕ್ರಿಯೆ ನೀಡಿದ್ದು, "ನಿಮ್ಮ ಮಾಹಿತಿ ಮತ್ತು ಸಮಯಕ್ಕಾಗಿ ಧನ್ಯವಾದಗಳು ರಾಹುಲ್ ಗಾಂಧಿ ಜೀ. ನಮ್ಮ ಸಂಭಾಷಣೆ ನಿಮಗೂ ಉಪಯುಕ್ತವಾಗಿದೆ ಎಂದುಕೊಳ್ಳುತ್ತೇನೆ," ಎಂದರು.
ನೋಂದಣಿಗಾಗಿ ಭೇಟಿ
ಕಮಲ್ ಹಾಸನ್ ತಮ್ಮ ನೂತನ ಪಕ್ಷವನ್ನು ನೋಂದಣಿ ಮಾಡುವ ಸಂಬಂಧ ಇಂದು ದೆಹಲಿಗೆ ಭೇಟಿ ನೀಡಿದ್ದರು. ನಿರ್ವಚನ್ ಭವನದಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾದ ನಂತರ ಪ್ರತಿಕ್ರಿಯೆ ನೀಡಿದ ಅವರು, ಫೆಬ್ರವರಿಯಲ್ಲಿ ಚಾಲನೆ ಪಡೆದುಕೊಂಡಿರುವ ನಮ್ಮ ಪಕ್ಷ ಸದ್ಯದಲ್ಲೇ ನೋಂದಣಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಔಪಚಾರಿಕ ಭೇಟಿಗಾಗಿ ನಾನು ಇಲ್ಲಿಗೆ ಬಂದಿದ್ದೆ. ಅವರು (ಚುನಾವಣಾ ಆಯೋಗ) ಕೆಲವು ಪ್ರಶ್ನೆಗಳನ್ನು ಕೇಳಿದರು. ಅವರ ಬಳಿ ಯಾವುದೇ ಪ್ರಮುಖ ತಕರಾರುಗಳಿರಲಿಲ್ಲ ಎಂದವರು ಮಾಹಿತಿ ನೀಡಿದರು.
ಇನ್ನು ಪಕ್ಷದ ಗುರುತಿನ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಮೊದಲು ಪಕ್ಷದ ಒಳಗೆ ಚರ್ಚಿಸಿ ನಂತರ ಚುನಾವಣಾ ಆಯೋಗಕ್ಕೆ ತೆರಳುತ್ತೇವೆ ಎಂದವರು ವಿವರಿಸಿದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications