ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಕಮಲ್ ಹಾಸನ್
ಬೆಂಗಳೂರು, ಜೂನ್ 20: ನಟ ಕಂ ರಾಜಕಾರಣಿ ಕಮಲ್ ಹಾಸನ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದರು.
ತಮ್ಮ ಪಕ್ಷದ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಬಂದಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಕಮಲ್ ಹಾಸನ್, ಚುನಾವಣಾ ಆಯೋಗದಿಂದ ಬಂದು ರಾಹುಲ್ ನಿವಾಸಕ್ಕೆ ತೆರಳಿದರು.
ನಂತರ ಮಾತನಾಡಿದ ಕಮಲ್, "ಇದೊಂದು ಉಭಯ ಕುಶಲೋಪರಿ ಭೇಟಿ. ನಾವು ತಮಿಳುನಾಡು ರಾಜಕೀಯದ ಬಗ್ಗೆ ಮಾತನಾಡಿದೆವು," ಎಂದು ಹೇಳಿದರು.

ಭೇಟಿ ನಂತರ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದು, "ದೆಹಲಿಯಲ್ಲಿ ಕಮಲ್ ಹಾಸನ್ ರನ್ನು ಭೇಟಿಯಾಗಿ ಖುಷಿ ಪಟ್ಟೆ. ನಾವು ನಮ್ಮ ಎರಡು ಪಕ್ಷಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದೆವು. ಇದರಲ್ಲಿ ತಮಿಳುನಾಡು ರಾಜಕೀಯ ಪರಿಸ್ಥಿತಿಯೂ ಸೇರಿತ್ತು," ಎಂದು ತಿಳಿಸಿದರು.
Enjoyed meeting @ikamalhaasan in Delhi today. We discussed a wide range of issues concerning our two parties, including the political situation in Tamil Nadu. pic.twitter.com/cPWQd8w7YY
— Rahul Gandhi (@RahulGandhi) June 20, 2018
ಇದಕ್ಕೆ ಕಮಲ್ ಟ್ಟಿಟ್ಟರ್ ನಲ್ಲೇ ಪ್ರತಿಕ್ರಿಯೆ ನೀಡಿದ್ದು, "ನಿಮ್ಮ ಮಾಹಿತಿ ಮತ್ತು ಸಮಯಕ್ಕಾಗಿ ಧನ್ಯವಾದಗಳು ರಾಹುಲ್ ಗಾಂಧಿ ಜೀ. ನಮ್ಮ ಸಂಭಾಷಣೆ ನಿಮಗೂ ಉಪಯುಕ್ತವಾಗಿದೆ ಎಂದುಕೊಳ್ಳುತ್ತೇನೆ," ಎಂದರು.
ನೋಂದಣಿಗಾಗಿ ಭೇಟಿ
ಕಮಲ್ ಹಾಸನ್ ತಮ್ಮ ನೂತನ ಪಕ್ಷವನ್ನು ನೋಂದಣಿ ಮಾಡುವ ಸಂಬಂಧ ಇಂದು ದೆಹಲಿಗೆ ಭೇಟಿ ನೀಡಿದ್ದರು. ನಿರ್ವಚನ್ ಭವನದಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾದ ನಂತರ ಪ್ರತಿಕ್ರಿಯೆ ನೀಡಿದ ಅವರು, ಫೆಬ್ರವರಿಯಲ್ಲಿ ಚಾಲನೆ ಪಡೆದುಕೊಂಡಿರುವ ನಮ್ಮ ಪಕ್ಷ ಸದ್ಯದಲ್ಲೇ ನೋಂದಣಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಔಪಚಾರಿಕ ಭೇಟಿಗಾಗಿ ನಾನು ಇಲ್ಲಿಗೆ ಬಂದಿದ್ದೆ. ಅವರು (ಚುನಾವಣಾ ಆಯೋಗ) ಕೆಲವು ಪ್ರಶ್ನೆಗಳನ್ನು ಕೇಳಿದರು. ಅವರ ಬಳಿ ಯಾವುದೇ ಪ್ರಮುಖ ತಕರಾರುಗಳಿರಲಿಲ್ಲ ಎಂದವರು ಮಾಹಿತಿ ನೀಡಿದರು.
ಇನ್ನು ಪಕ್ಷದ ಗುರುತಿನ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಮೊದಲು ಪಕ್ಷದ ಒಳಗೆ ಚರ್ಚಿಸಿ ನಂತರ ಚುನಾವಣಾ ಆಯೋಗಕ್ಕೆ ತೆರಳುತ್ತೇವೆ ಎಂದವರು ವಿವರಿಸಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications