Bye-Election Result: ಮುಖ್ಯಮಂತ್ರಿ ಪತ್ನಿಗೆ ಭರ್ಜರಿ ಗೆಲುವು; ಬಿಜೆಪಿ ಅಭ್ಯರ್ಥಿಗೆ ನಿರಾಸೆ
ಹಿಮಾಚಲ ಪ್ರದೇಶ (Himachal Pradesh)ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಡೆಹ್ರಾ (Dehra) ವಿಧಾನಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಗೆಲುವಿನೊಂದಿಗೆ ರಾಜಕೀಯ ರಂಗಕ್ಕೆ ಭರ್ಜರಿ ಎಂಟ್ರಿ ನೀಡಿದ್ದಾರೆ.
ಕಮಲೇಶ್ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಹೋಶ್ಯಾರ್ ಸಿಂಗ್ ಅವರನ್ನು 9,399 ಮತಗಳ ಅಂತರದಿಂದ ಜಯ ಸಾಧಿಸಿತು. ಕಮಲೇಶ್ ಅವರು 32,737 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 23,338 ಮತಗಳನ್ನು ಪಡೆದರು. ಈ ಕ್ಷೇತ್ರದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ತಲಾ 200 ಮತಗಳನ್ನು ಗಳಿಸಲು ಸಾಧ್ಯವಾಗಲಿಲ್ಲ.

ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹಗಲಿರುಳು ಶ್ರಮಿಸಿದ ಫಲವೇ ಗೆಲುವು ಸಾಧ್ಯವಾಗಿದೆ. ಈ ಜಯವನ್ನು ನನಗಾಗಿ ದುಡಿದವರಿಗೆ ಅರ್ಪಿಸುತ್ತೇನೆ ಎಂದು ಉಪಚುನಾವಣೆಯಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಅವರು ತಿಳಿಸಿದ್ದಾರೆ.
ಡೆಹ್ರಾ ಅಸೆಂಬ್ಲಿ ಕ್ಷೇತ್ರವನ್ನು 2012 ರಲ್ಲಿ ಬಿಜೆಪಿ ನಾಯಕ ಮಾಜಿ ಸಚಿವ ರವಿ ಇಂದರ್ ಸಿಂಗ್ ಜಯ ಸಾಧಿಸಿದ್ದರು. ಹೋಶಿಯಾರ್ ಸಿಂಗ್ 2017 ಮತ್ತು 2022 ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದರು.
ಕಮಲೇಶ್ ಠಾಕೂರು ಯಾರಯ?
ಏಪ್ರಿಲ್ 2, 1970 ರಂದು ನಲ್ಸುಹಾ ಪಂಚಾಯತ್ನ ಚಾಮನಾಳ್ ಗ್ರಾಮದಲ್ಲಿ ಜನಿಸಿದರು. ಪ್ರಥಾಮಿಕ ಶಿಕ್ಷಣವನ್ನು ಡೆಹ್ರಾದಲ್ಲಿ ಪೂರ್ಣಗೊಳಿಸಿದ ಅವರು, ಉನ್ನತ ಶಿಕ್ಷಣವನ್ನು ಚಂಡೀಗಢ್ದ ಸರ್ಕಾರಿ ಕಾಲೇಜಿನಲ್ಲಿ ಮುಗಿಸಿದ್ದಾರೆ. ಕಂಪ್ಯೂಟರ್ ಅಪ್ಲಿಕೇಷನ್ನಲ್ಲಿ ಇವರು ಪಿಜಿ ಡಿಪ್ಲೋ ಪದವಿಯನ್ನು ಸಹ ಪಡೆದಿದ್ದಾರೆ. ಠಾಕೂರ್ ಅವರು ಸುಖು ಅವರನ್ನು ಜೂನ್ 11, 1988ರಲ್ಲಿ ಮದುವೆ ಆದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ವರದಿಗಳ ಪ್ರಕಾರ ಕಮಲೇಶ್ ಠಾಕೂರ್ ಅವರು ಹಿಮಾಚಲ್ ಪ್ರದೇಶ ಕಾಂಗ್ರೆಸ್ ಕಮಿಟ್ಯಲ್ಲಿ ಕಳೆದ ಎರಡು ದಶಕಗಳಿಂದ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಈ ಗೆಲುವು ಈ ಕ್ಷೇತ್ರದಲ್ಲಿ ಮತ್ತಷ್ಟು ಬಲ ಪಡಿಸಿಕೊಳ್ಳಲು ಸಹಾಯಕವಾಗುತ್ತದೆ. 85,263 ಮತದಾರರೊಂದಿಗೆ, ಡೆಹ್ರಾ ಹಮೀರ್ಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಇದು ಸಂಸದ ಅನುರಾಗ್ ಠಾಕೂರ್ ಪ್ರತಿನಿಧಿಸುವ ದೀರ್ಘಕಾಲದ ಬಿಜೆಪಿ ಭದ್ರಕೋಟೆಯಾಗಿದೆ.
ಕಳೆದ ತಿಂಗಳು, ಸುಖವಿಂದರ್ ಸಿಂಗ್ ಸುಖು ಅವರು ತಮ್ಮ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಪಕ್ಷದ ಹೈಕಮಾಂಡ್ ಆಕೆಯನ್ನು ಒತ್ತಾಯಿಸಿತು ಮತ್ತು ಡೆಹ್ರಾ ವಿಧಾನಸಭಾ ಸ್ಥಾನದ ಉಪಚುನಾವಣೆಗೆ ಕಣಕ್ಕೆ ಇಳಿಸಿತು.
ಶೇಕಡಾವಾರು ಮತ
ಕಮಲೇಶ್ ಠಾಕೂರ್ ಶೇಕಡಾ 57.94 ಮತ್ತು ಹೋಶಿಯಾರ್ ಸಿಂಗ್ ಶೇಕಡಾ 41.30 ಮತಗಳನ್ನು ಪಡೆದರು. ಇವಿಎಂಗಳಿಂದ ಪಡೆದ ಒಟ್ಟು ಮತಗಳು 55,408 ಮತಗಳಾಗಿವೆ. ಡೆಹ್ರಾ ಉಪಚುನಾವಣೆಯಲ್ಲಿ ಒಟ್ಟು 1098 ಅಂಚೆ ಮತಗಳು ಚಲಾವಣೆಯಾಗಿವೆ. ಈ ಪೈಕಿ ಕಮಲೇಶ್ ಠಾಕೂರ್ 612, ಹೊಶಿಯಾರ್ ಸಿಂಗ್ 478, ಅರುಣ್-ಅಂಕೇಶ್ ಸಿಯಾಲ್ ತಲಾ 2, ಸುಲೇಖಾ ಚೌಧರಿ 4 ಹಾಗೂ ನೋಟಾ 2 ಮತಗಳನ್ನು ಪಡೆದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications