ಕಂದಹಾರ್ ಶೈಲಿ ಹೈಜಾಕ್ ಬೆದರಿಕೆ, ವಿ.ನಿಲ್ದಾಣಗಳಲ್ಲಿ ಕಟ್ಟೆಚ್ಚರ
ನವದೆಹಲಿ, ಜ.4: ಕಂದಹಾರ್ ಶೈಲಿ ವಿಮಾನ ಹೈಜಾಕ್ ನಡೆಸಲು ಉಗ್ರರು ಸಂಚು ರೂಪಿಸುವ ಸುದ್ದಿ ಹೊರಬಿದ್ದಿದೆ. ದೆಹಲಿಯಿಂದ ಕಾಬೂಲಿಗೆ ತೆರಳುವ ವಿಮಾನವನ್ನು ಅಪಹರಿಸುವ ಸಾಧ್ಯತೆ ಕಂಡು ಬಂದಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಿಧಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ದೆಹಲಿ-ಕಾಬೂಲ್ ನಡುವೆ ಸಂಚರಿಸುವ ಏರ್ ಇಂಡಿಯಾ ಪ್ರಯಾಣಿಕರ ವಿಮಾನವನ್ನು ಹೈಜಾಕ್ ಮಾಡಲು ಸಂಚು ರೂಪಿಸಿದ್ದಾರೆ. ಏರ್ ಇಂಡಿಯಾ ವಿಮಾನವು ಉಗ್ರರ ಹಿಟ್ಲಿಸ್ಟ್ ನಲ್ಲಿದೆ ಎಂದು ಗೃಹ ಇಲಾಖೆಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. [ಕಂದಹಾರ್ ಪ್ರಕರಣ ಅಡ್ವಾಣಿಗೆ ಮೊದಲೇ ಗೊತ್ತಿತ್ತು]
ಗುಪ್ತಚರ ಇಲಾಖೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ದೇಶದ ಇತರೆ ವಿಮಾನ ನಿಲ್ದಾಣಗಳಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. [ಭಾರತದೊಳು ನುಗ್ಗುವ ಉಗ್ರರ ಯತ್ನ ವಿಫಲ, ಬೋಟ್ ಸ್ಫೋಟ ]
ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ: ವಿಮಾನ ನಿಲ್ದಾಣಕ್ಕೆ ಬರುವ ಹಾಗೂ ಹೊರಹೋಗುವ ಪ್ರಯಾಣಿಕರು, ವಾಹನಗಳು, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಸಿಐಎಸ್ಎಫ್, ಸಿಆರ್ಪಿಎಫ್ ಸೇರಿದಂತೆ ವಿವಿಧ ಶ್ರೇಣಿಯ ಭದ್ರತಾಧಿಕಾರಿಗಳನ್ನು ಒದಗಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಗಣರಾಜ್ಯೋತ್ಸವ ವೇಳೆ ದೇಶದಲ್ಲಿ ಭಾರೀ ದುಷ್ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿರುವುದನ್ನು ಪತ್ತೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಮಹಾನಗರಗಳಲ್ಲಿ ಬಿಗಿಭದ್ರತೆ ಹೆಚ್ಚಿಸಲಾಗಿದೆ. [ಸುರಕ್ಷಿತ ಸ್ಥಳಕ್ಕಾಗಿ ಹುಡುಕುತ್ತಿದ್ದರೇ ಪಾಕ್ ದುರುಳರು?]
ಸಾಮಾನ್ಯ ಪ್ರಯಾಣಿಕರ ಸೋಗಿನಲ್ಲಿ ಉಗ್ರರು ನಿಲ್ದಾಣ ಪ್ರವೇಶಿಸುವ ಸಾಧ್ಯತೆಯಿದೆ. ಭಾರತದಲ್ಲಿರುವ ಕೆಲವು ಉಗ್ರರನ್ನು ಬಿಡುಗಡೆ ಮಾಡಿಕೊಳ್ಳುವ ಉದ್ದೇಶದಿಂದಲೇ ವಿಮಾನ ಅಪಹರಿಸುವ ಸಂಚು ರೂಪಿಸಿದ್ದಾರೆಂಬುದು ಗುಪ್ತಚರ ಇಲಾಖೆಯ ಮಾಹಿತಿ ನೀಡಿದೆ.
ಕರಾವಳಿಯಲ್ಲೂ ಕಟ್ಟೆಚ್ಚರ: ಪೋರಬಂದರಿನ ಬಳಿ ಪಾಕಿಸ್ತಾನಕ್ಕೆ ಸೇರಿದೆ ಎನ್ನಲಾದ ಬೋಟ್ ಅಗ್ನಿಗೆ ಆಹುತಿಯಾದ ಘಟನೆ ನಂತರ ಕರ್ನಾಟಕ ಸೇರಿದಂತೆ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಧ್ವಂಸಗೊಂಡ ಬೋಟ್ ನ ಅವಶೇಷಗಳ ಹುಡುಕಾಟ ಮುಂದುವರೆದಿದೆ. ಶೀಘ್ರದಲ್ಲೆ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಕರಾವಳಿ ಕಾವಲು ಪಡೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications