ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್ಯುಐಗೆ ಕನ್ಹಯ್ಯ ಕುಮಾರ್ ಅಧ್ಯಕ್ಷರಾಗಿ ನೇಮಕ
ನವದೆಹಲಿ, ಜುಲೈ 6: ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರನ್ನು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ (ಎನ್ಐಎಸ್ಯು) ಉಸ್ತುವಾರಿಯಾಗಿ ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ.
"ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಕನ್ಹಯ್ಯಾ ಕುಮಾರ್ ಅವರನ್ನು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಎಐಸಿಸಿ ಉಸ್ತುವಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರ ಪತ್ರದಲ್ಲಿ, "ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಕನ್ಹಯ್ಯಾ ಕುಮಾರ್ ಅವರನ್ನು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಎಐಸಿಸಿ ಉಸ್ತುವಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದ್ದಾರೆ" ಎಂದು ಬರೆಯಲಾಗಿದೆ.
ಹಿಂದೆ 2021 ರಲ್ಲಿ JNU ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದಿಂದ ಕಾಂಗ್ರೆಸ್ ಸೇರಿದ್ದರು. ಪಕ್ಷಕ್ಕೆ ಸೇರ್ಪಡೆಯಾದ ನಂತರ ಅವರು, ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರೆ ಅದು ಕೇವಲ ಪಕ್ಷವಲ್ಲ, ಇದು ಒಂದು ಕಲ್ಪನೆ. ಇದು ದೇಶದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷವಾಗಿದೆ, ಮತ್ತು ನಾನು 'ಪ್ರಜಾಪ್ರಭುತ್ವ'ಕ್ಕೆ ಒತ್ತು ನೀಡುತ್ತಿದ್ದೇನೆ. ಕಾಂಗ್ರೆಸ್ ಇಲ್ಲದೆ ದೇಶವು ಉಳಿಯುವುದಿಲ್ಲ ಎಂದು ನಾನು ಮಾತ್ರವಲ್ಲದೆ ಅನೇಕರು ಭಾವಿಸುತ್ತಾರೆ ಎಂದು ಹೇಳಿದ್ದರು.
ಏಪ್ರಿಲ್ 9, 1971 ರಂದು ಸ್ಥಾಪಿತವಾದ NSUI ಕಾಂಗ್ರೆಸ್ ವಿದ್ಯಾರ್ಥಿ ವಿಭಾಗವಾಗಿದೆ. ರಾಷ್ಟ್ರೀಯ ವಿದ್ಯಾರ್ಥಿಗಳ ಸಂಘಟನೆಯನ್ನು ರೂಪಿಸಲು ಕೇರಳ ವಿದ್ಯಾರ್ಥಿ ಸಂಘ ಮತ್ತು ಪಶ್ಚಿಮ ಬಂಗಾಳ ರಾಜ್ಯ ಛತ್ರ ಪರಿಷತ್ತನ್ನು ವಿಲೀನಗೊಳಿಸಿದ ನಂತರ ಇಂದಿರಾ ಗಾಂಧಿಯವರು ಈ ಸಂಘಟನೆಯನ್ನು ಸ್ಥಾಪಿಸಿದರು.
ಕನ್ಹಯ್ಯಾ ಕುಮಾರ್ ಯಾರು?
1. 1987 ರಲ್ಲಿ ಜನಿಸಿದ ಕನ್ಹಯ್ಯಾ ಕುಮಾರ್ 2007 ರಲ್ಲಿ ಪಾಟ್ನಾ ಕಾಲೇಜ್ ಆಫ್ ಕಾಮರ್ಸ್ನಲ್ಲಿ ವಿದ್ಯಾರ್ಥಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಪ್ರಾರಂಭಿಸಿದರು.
2. ಸೆಪ್ಟೆಂಬರ್ 2015 ರಲ್ಲಿ, ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್ಯುಎಸ್ಯು) ಅಧ್ಯಕ್ಷರಾಗಿ ಮತ್ತು ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ (ಎಐಎಸ್ಎಫ್) ನಾಯಕರಾಗಿ ಸೇವೆ ಸಲ್ಲಿಸಿದರು.
3. 2021 ರಲ್ಲಿ, ಕುಮಾರ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಿಂದ ಕಾಂಗ್ರೆಸ್ ಸೇರಿದರು. ಪಕ್ಷಕ್ಕೆ ಸೇರ್ಪಡೆಯಾದ ನಂತರ ಅವರು, "ನಾನು ಕಾಂಗ್ರೆಸ್ಗೆ ಸೇರುತ್ತಿದ್ದೇನೆ ಏಕೆಂದರೆ ಅದು ಕೇವಲ ಒಂದು ಪಕ್ಷವಲ್ಲ, ಇದು ಒಂದು ಕಲ್ಪನೆ. ಇದು ದೇಶದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷವಾಗಿದೆ ಮತ್ತು ನಾನು 'ಪ್ರಜಾಪ್ರಭುತ್ವ'ಕ್ಕೆ ಒತ್ತು ನೀಡುತ್ತಿದ್ದೇನೆ... ಕಾಂಗ್ರೆಸ್ ಇಲ್ಲದೆ ದೇಶ ಉಳಿಯುವುದಿಲ್ಲ ಎಂದು ನಾನು ಮಾತ್ರವಲ್ಲದೆ ಅನೇಕರು ಭಾವಿಸುತ್ತಾರೆ ಎಂದು ಹೇಳಿದ್ದರು.
4. ಕನ್ಹಯ್ಯಾ ಅವರು ಜಿಗ್ನೇಶ್ ಮೇವಾನಿ ಮತ್ತು ಹಾರ್ದಿಕ್ ಪಟೇಲ್ ಸೇರಿದಂತೆ ಇತರ ಯುವ ನಾಯಕರೊಂದಿಗೆ ಹಲವಾರು ರಾಜಕೀಯ ರ್ಯಾಲಿಗಳಲ್ಲಿ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಟುವಾದ ಟೀಕೆಗೆ ಅವರು ಹೆಸರುವಾಸಿಯಾಗಿದ್ದಾರೆ.
5. 2016 ರಲ್ಲಿ, ಜೆಎನ್ಯು ಕ್ಯಾಂಪಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶದ್ರೋಹದ ಆರೋಪದ ಮೇಲೆ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications