Upendra: ಉಪೇಂದ್ರರಿಂದ ಸಂವಿಧಾನಕ್ಕೆ ಅವಮಾನ, ಅವರ ಪ್ರವೃತ್ತಿಯನ್ನು ನಿಲ್ಲಿಸಲು ಪೂರಕ ಕ್ರಮ- ಸಚಿವ ಮಹಾದೇವಪ್ಪ
ಬೆಂಗಳೂರು, ಆಗಸ್ಟ್ 14: ನಟ ಉಪೇಂದ್ರ ನೀಡಿರುವ ಜಾತಿ ನಿಂದನೆ ಹೇಳಿಕೆಗೆ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದಲಿತ ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟಿಸಲು ಮುಂದಾಗಿವೆ. ಇದೇ ವೇಳೆ, ಸಚಿವ ಡಾ ಎಚ್ಸಿ ಮಹಾದೇವಪ್ಪ ಅವರು ಉಪೇಂದ್ರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ( ಈಗ ಎಕ್ಸ್ ) ಮಾಡಿರುವ ಅವರು, 'ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ' ಎಂದು ಮಹಾದೇವಪ್ಪ ಹೇಳಿದ್ದಾರೆ.

'ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯನ್ನು ಅವರು ಅರಿಯಬೇಕು' ಎಂದು ತಿಳಿಸಿದ್ದಾರೆ.
ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ ಎಂದು ಮಹಾದೇವಪ್ಪ ಕಿಡಿ ಕಾರಿದ್ದಾರೆ.
'ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾದೇವಪ್ಪ ಟ್ವೀಟ್ ಹೇಳಿದ್ದಾರೆ.

ಮಹಾದೇವಪ್ಪ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಹಾಲು ಉತ್ಪಾದಕ ಸಹಕಾರ ಸಂಘ ಉಪಾಧ್ಯಕ್ಷ ಹೆಚ್.ಎಸ್. ಅಶೋಕ ಅವರು, 'ಹೊಲಗೇರಿ ಎಂಬ ಪದವನ್ನು ಇನ್ನೊಮ್ಮೆ ಯಾರು ಕೂಡ ಮಾತನಾಡಬಾರದು, ಆ ರೀತಿ ಉಪೇಂದ್ರರಿಗೆ ಕಾನೂನಿನ ಕ್ರಮವನ್ನು ಜರಗಿಸಲು ಪೋಲಿಸ್ ಇಲಾಖೆಗೆ ಬೆಂಬಲವನ್ನು ನೀಡಬೇಕೆಂದು ಮನವಿ, ಪೊಲೀಸ್ ಇಲಾಖೆಯು ಯಾವುದೇ ಒತ್ತಡಕ್ಕೆ ಮತ್ತು ಲಾಬಿಗೆ ಒಳಗಾಗದ ರೀತಿಯಲ್ಲಿ ಸೂಕ್ತ ನಿರ್ದೇಶನ ನೀಡಬೇಕೆಂದು ಈ ಮೂಲಕ ತಮಗೆ ಮನವಿ ಮಾಡುತ್ತೇನೆ' ಎಂದು ತಿಳಿಸಿದ್ದಾರೆ.
ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಟ್ವೀಟಿಗರೊಬ್ಬರು, 'ಬ್ರಾಹ್ಮಣ್ಯದ ವಿರುದ್ಧ ಮಾತನಾಡಿದ್ದಕ್ಕೆ ಚೇತನ್ ಅಹಿಂಸಾಗೆ ಜೈಲಿಗೆ ಅಟ್ಟಿದರು. ಆದರೆ ಬ್ರಾಹ್ಮಣ ಮಾತನಾಡಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದಾಗ ದ್ವೇಷ ಏಕೆ ಮಾಡುತ್ತೀರಿ, ಕ್ಷಮಿಸಿ ಅಂದರು. ಒದೆಯೂ ನಾವೇ ತಿನ್ನಬೇಕು, ಔದಾರ್ಯವೂ ನಾವೇ ತೋರಿಸಬೇಕು. ಅವರಿಗೆ ಮಾತ್ರ ಶಾಂತಿಯುತ ಜೀವನ ನೀಡಬೇಕು. ಈ ನೀತಿ ಬದಲಾಗಲೇಬೇಕು' ಎಂದು ಅವರು ಹೇಳಿದ್ದಾರೆ.

ನಟ ಉಪೇಂದ್ರ ಅವರು ವಿಡಿಯೊವೊಂದರಲ್ಲಿ 'ಊರು ಇದ್ದ ಕಡೆ ಹೊಲಗೇರಿ ಇದ್ದೇ ಇರುತ್ತದೆ' ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದಕ್ಕೆ ದಲಿತ ಸಮುದಾಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ಡಿಲೀಟ್ ಮಾಡಿರುವ ನಟ ಉಪೇಂದ್ರ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications