ಪಣಜಿಯಲ್ಲಿ ಕನ್ನಡ ಕಲರವ, ರಾಜ್ಯೋತ್ಸವ ಆಚರಣೆ
ಪಣಜಿ, ನ. 24 : ಕನ್ನಡ ನಾಡು, ಭಾಷೆ, ಸಂಸ್ಕೃತಿ ರಕ್ಷಣೆಗೆ ಗೋವಾದಲ್ಲಿರುವ ಎಲ್ಲಾ ಕನ್ನಡಿಗರು ಸಂಘಟಿತರಾಗಬೇಕು ಎಂದು ವಾರ್ತಾ ಸಚಿವ ರೋಷನ್ ಬೇಗ್ ಕರೆ ನೀಡಿದ್ದಾರೆ. ಗೋವಾದಲ್ಲಿರುವ ಕನ್ನಡಿಗರು ಕನ್ನಡ ಭವನ ನಿರ್ಮಾಣ ಮಾಡಲು ಮುಂದಾದರೆ ಕರ್ನಾಟಕ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ಸಚಿವರು ಭರವಸೆ ನೀಡಿದರು.
ಗೋವಾದ ಪಣಜಿಯಲ್ಲಿ ಭಾನುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗೋವಾ ಕನ್ನಡ ಸಮಾಜ ಜಂಟಿಯಾಗಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೋಷನ್ ಬೇಗ್. ಗೋವಾದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದಾರೆ. ಭಾಷೆ, ನಾಡಿನ ಹೆಸರಿನಲ್ಲಿ ಇಲ್ಲಿರುವ ಎಲ್ಲಾ ಕನ್ನಡಿಗರು ಒಂದೇ ವೇದಿಕೆಗೆ ಬರಬೇಕಿದೆ ಎಂದು ಹೇಳಿದರು. [ಗೋವಾ : ಬೈನಾ ನಿರಾಶ್ರಿತರಿಗೆ ಶಾಶ್ವತ ಪರಿಹಾರ]

ಇಲ್ಲಿನ ಕನ್ನಡಿಗರು ಸಂಘಟಿತರಾದರೆ ಇಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರ ವಿದ್ಯಾಭ್ಯಾಸ, ಆರೋಗ್ಯ ಸೇವೆಗಳಿಗೆ ನೆರವು ಒದಗಿಸಲು ಸಾಧ್ಯವಾಗುತ್ತದೆ. ಎಲ್ಲಾ ಕನ್ನಡಿಗರಿಗೆ ವೇದಿಕೆಯಾಗಬಲ್ಲ ಕನ್ನಡ ಭವನ ಇಲ್ಲಿ ನಿರ್ಮಾಣವಾಗುವ ಅಗತ್ಯವಿದ್ದು, ಕನ್ನಡ ಭವನ ನಿರ್ಮಾಣ ಕಾರ್ಯಕ್ಕೆ ಮುಂದಾದರೆ ಕರ್ನಾಟಕ ಸರ್ಕಾರ ನೆರವು ನೀಡಲಿದೆ ಎಂದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೋವಾದ ನಾಗರಿಕ ವಿಮಾನಯಾನ ಇಲಾಖೆ ನಿರ್ದೇಶಕ ಡಾ. ಸುರೇಶ್ ಶಾನ್ಭಾಗ್ ಮಾಡನಾಡಿ, ನಾವು ಯಾವುದೇ ರಾಜ್ಯದಲ್ಲಿ ನೆಲೆಸಿದ್ದರೂ ತಾಯಿ ಕಲಿಸಿದ ಭಾಷೆಯೇ ನಮ್ಮ ಮಾತೃಭಾಷೆ. ನಮ್ಮ ಯೋಚನಾ ಲಹರಿ ಸದಾ ಮಾತೃಭಾಷೆಯಲ್ಲೇ ಇರುತ್ತದೆ ಎಂದು ಹೇಳಿದರು. [ಗೋವಾ ಕನ್ನಡಿಗರಿಗೆ ನೆರವಾದ ಪೊಲೀಸರು]

ಗೋವಾ ಕನ್ನಡ ಸಮಾಜದ ಅಧ್ಯಕ್ಷ ಮಹಾಬಲ ಭಟ್ ಮಾತನಾಡಿ, ಗೋವಾದಲ್ಲಿ ಇಡೀ ಕರ್ನಾಟಕವನ್ನು ಪ್ರತಿನಿಧಿಸುವ ಜನರಿದ್ದಾರೆ. ಕನ್ನಡದ ವೈವಿದ್ಯತೆಯನ್ನು ಇಲ್ಲಿ ಕಾಣಬಹುದು. ಪ್ರಾದೇಶಿಕ ಹಾಗೂ ವರ್ಗ ಭಿನ್ನತೆಯನ್ನು ಮೀರಿದರೆ ಗೋವಾದಲ್ಲಿ ಕನ್ನಡಿಗರು ತಮ್ಮ ಧ್ವನಿಯನ್ನು ದಾಖಲಿಸಲು ಸಾಧ್ಯವಿದೆ ಎಂದು ತಿಳಿಸಿದರು.

ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಉಪ ನಿರ್ದೇಶಕರಾದ ಬಸವರಾಜ ಕಂಬಿ, ಎಸ್.ವಿ.ಲಕ್ಷ್ಮೀನಾರಾಯಣ, ಗೋವಾ ಕನ್ನಡ ಕನ್ನಡ ಸಮಾಜದ ಅಧ್ಯಕ್ಷ ಮಹಾಬಲ್ ಭಟ್, ಉಪಾಧಕ್ಷ ಮಲ್ಲಿಕಾರ್ಜುನ ಬಾದಾನಿ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications