Get Updates
Get notified of breaking news, exclusive insights, and must-see stories!

Sabarimala: ಶಬರಿಮಲೆಯಲ್ಲಿ ಕನ್ನಡಿಗ ಆತ್ಮಹತ್ಯೆ

ಪ್ರಸ್ತುತ ಶಬರಿಮಲೆ ಸೀಸನ್ ಆರಂಭವಾಗಿದೆ. ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನಕ್ಕಾಗಿ ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗೆ ಅಯ್ಯಪ್ಪನ ದರ್ಶನಕ್ಕೆ ಬಂದ ಮಾಲಾಧಾರಿ ಭಕ್ತರೊಬ್ಬರು ಕಳೆದ ದಿನ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಬರಿಮಲೆ ಸನ್ನಿಧಾನದಲ್ಲಿ ಫ್ಲೈಓವರ್ ಮೇಲಿಂದ ಹಾರಿ ಅಯ್ಯಪ್ಪ ಭಕ್ತ ಸಾವನ್ನಪ್ಪಿದ್ದಾರೆ. ಕರ್ನಾಟಕದ ರಾಮನಗರ ಮೂಲದ ಕುಮಾರಸ್ವಾಮಿ ಮೃತ ದುರ್ದೈವಿ.

ಕುಮಾರಸ್ವಾಮಿ ಅವರಿಗೆ 40 ವರ್ಷ ವಯಸ್ಸಾಗಿತ್ತು. ಅಯ್ಯಪ್ಪನ ಭಕ್ತರಾದ ಅವರು ಕಳೆದ ದಿನ ಸಂಜೆ ಸನ್ನಿಧಾನಂನಲ್ಲಿ ಫ್ಲೈಓವರ್‌ನಿಂದ ಮಾಲಿಕಪ್ಪುರಂಗೆ ಜಿಗಿದಿದ್ದಾರೆ. ಬಿದ್ದ ರಭಸಕ್ಕೆ ಕೈ ಮತ್ತು ಕಾಲಿಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸನ್ನಿಧಾನಂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.

Kannadiga commit suicide in Kerala s Sabarimala

ನಂತರ ಹೆಚ್ಚುವರಿ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಬಿದ್ದ ರಭಸಕ್ಕೆ ತೀವ್ರ ಒಳಪಟ್ಟು ಆಗಿದ್ದರಿಂದ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಯಾತ್ರಾರ್ಥಿ ಮಾನಸಿಕ ಅಸ್ವಸ್ಥನಾಗಿರಬಹುದು ಎಂಬ ಅನುಮಾನ ಮೂಡಿದೆ. ತಲೆ ಹಾಗೂ ಬೆನ್ನಿಗೆ ಪೆಟ್ಟು ಬಿದ್ದಿದ್ದರಿಂದ ಪರಸ್ಪರ ವಿರುದ್ಧವಾಗಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಎರಡು ದಿನಗಳಿಂದ ಕುಮಾರ್ ಸನ್ನಿಧಾನಂನಲ್ಲಿದ್ದರು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+