ತಮಿಳುನಾಡು ನಾಯಕರಿಗೆ ಪ್ರಧಾನಿ ಪಟ್ಟದ ಆಫರ್ ಕೊಟ್ಟ ಅಮಿತ್ ಶಾಗೆ ಕನ್ನಡಿಗರ ಪ್ರಶ್ನೆ
ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ತಮಿಳು ನಾಡಿಗೆ ಭರ್ಜರಿ ಆಫರ್ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ಪ್ರಧಾನಿ ಮಾಡುವುದಾಗಿ ಅವರು ಹೇಳಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅವರು, ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಅವರು ಭವಿಷ್ಯದಲ್ಲಿ ತಮಿಳು ನಾಡು ಬಿಜೆಪಿ ನಾಯಕರೊಬ್ಬರನ್ನು ಪ್ರಧಾನ ಮಂತ್ರಿ ಮಾಡುವ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಕೂಡ ತಮಿಳರಿಗೆ ಪ್ರಧಾನ ಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಆದರೆ ಡಿಎಂಕೆ ಅದನ್ನು ತಪ್ಪಿಸಿತು ಎಂದು ಅಮಿತ್ ಶಾ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಕನಿಷ್ಠ 20 ಸೀಟುಗಳು ಗೆಲ್ಲುವಂತೆ ಮಾಡಬೇಕು ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ. ತಮಿಳು ನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿ ಮತ ಸೆಳೆಯಲು ಈ ಆಫರ್ ನೀಡಿದೆ ಎಂದು ಹೇಳಲಾಗಿದೆ.
ಸೆಂಗೋಲ್ಗೆ ಗೌರವ ಕೊಟ್ಟಿದ್ದೇವೆ 20 ಸೀಟು ಗೆಲ್ಲಿಸಿ
ವೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯದ ಜನ ಎನ್ಡಿಎನ ಕನಿಷ್ಠ 25 ಸಂಸದರನ್ನು ಆರಿಸಿ ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಸೆಂಗೋಲ್ ಅನ್ನು ಸಂಸತ್ತಿನಲ್ಲಿ ಪ್ರತಿಷ್ಠಾಪಿಸಿದ್ದಕ್ಕಾಗಿ ತಮಿಳುನಾಡು ಜನತೆ ಮೋದಿಗೆ ಬೆಂಬಲ ಕೊಡಲು ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
25 ಸಂಸದರನ್ನು ಆರಿಸಿ ಕಳುಹಿಸಿದ ರಾಜ್ಯಕ್ಕೇನು ಕೊಟ್ಟಿದ್ದೀರಾ?
ಅಮಿತ್ ಶಾ ಅವರು ತಮಿಳು ನಾಡು ನಾಯಕರಿಗೆ ಪ್ರಧಾನಿ ಮಾಡ್ತೀವಿ ಎನ್ನುವುದು ವರದಿಯಾದ ಬೆನ್ನಲ್ಲೇ ಅನೇಕ ಕನ್ನಡಿಗರು ಬಿಜೆಪಿ ಚಿಂತನೆ ಬಗ್ಗೆ ಟೀಕಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಮೊದಲು ಬಿಜೆಪಿಯನ್ನು ಅಧಿಕಾರಕ್ಕೆ ಬರುವಂತೆ ಮಾಡಿದ್ದು, ಕನ್ನಡಿಗರು. ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದಾರೆ, ಇಷ್ಟು ದಿನ ರಾಜ್ಯದ ಬಗ್ಗೆ ಅಮಿತ್ ಶಾ ಹೀಗೆ ಎಂದಾದರೂ ಮಾತನಾಡಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಬಿಜೆಪಿಯಿಂದ 4 ಶಾಸಕರು ಮಾತ್ರ ಇದ್ದಾರೆ, ಆದರೆ ತಮಿಳುನಾಡಿನಲ್ಲಿ ಬಿಜೆಪಿಯ ಒಬ್ಬ ಸಂಸದ ಕೂಡ ಇಲ್ಲ ಆದರೂ ತಮಿಳು ನಾಡು ನಾಯಕರಿಗೆ ಅಮಿತ್ ಶಾ ಪ್ರಧಾನಿ ಮಾಡುವುದಾಗಿ ಹೇಳಿದ್ದಾರೆ, ಇಷ್ಟು ದಿನ ಕರ್ನಾಟಕದಲ್ಲಿ ಅಧಿಕಾರ ಕೊಟ್ಟಿದ್ದಕ್ಕೆ ರಾಜ್ಯದ ನಾಯಕರಿಗೆ ಪ್ರಧಾನಿ ಮಾಡುವುದಾಗಿ ಎಂದಾದರೂ ಹೇಳಿದ್ದಾರಾ? ರಾಜಕೀಯ ಲಾಭಕ್ಕಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.
ಕರ್ನಾಟಕ ನಾಯಕರ ಕೈಗೆ ಚೊಂಬು?
— SHIVA (@SHIVA42741120) June 12, 2023
ಬಿಜೆಪಿಗೆ ದುಡಿಯಿರಿ ಚೊಂಬು ಇಸ್ಕೊಳ್ಳಿ.
ನೆನ್ನೆ ಮೊನ್ನೆ ಬಂದವರಿಗೆ ಮಂತ್ರಿಗಿರಿ ಈಗ ಪ್ರಧಾನ ಮಂತ್ರಿ ಸ್ಥಾನ.
ಇನ್ನೂ ಏನೇನು ಇದ್ಯೋ?
ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಬಗೆ ಬಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಶಿವ ಎನ್ನುವವರು ಪ್ರತಿಕ್ರಿಯೆ ನೀಡಿ "ಕರ್ನಾಟಕ ನಾಯಕರ ಕೈಗೆ ಚೊಂಬು? ಬಿಜೆಪಿಗೆ ದುಡಿಯಿರಿ ಚೊಂಬು ಇಸ್ಕೊಳ್ಳಿ. ನೆನ್ನೆ ಮೊನ್ನೆ ಬಂದವರಿಗೆ ಮಂತ್ರಿಗಿರಿ ಈಗ ಪ್ರಧಾನ ಮಂತ್ರಿ ಸ್ಥಾನ. ಇನ್ನೂ ಏನೇನು ಇದ್ಯೋ?" ಎಂದು ಹೇಳಿದ್ದಾರೆ.
ಒಂದೇ ಒಂದು ಸೀಟು ಗೆಲ್ಲದ ತಮಿಳುನಾಡಿನ ನಾಯಕನಿಗೆ ಪ್ರಧಾನಿ ಹುದ್ದೆ🤦 ಕರ್ನಾಟಕ ಬಿಜೆಪಿ ನಾಯಕರು ಬರಿ ಹೆಸರಿಗಷ್ಟೇ 😅
— Sumanth Heggade R (@heggade_r) June 12, 2023
ಮತ್ತೊಬ್ಬರು ಪ್ರತಿಕ್ರಿಯೆ ನೀಡಿ, "ಒಂದೇ ಒಂದು ಸೀಟು ಗೆಲ್ಲದ ತಮಿಳುನಾಡಿನ ನಾಯಕನಿಗೆ ಪ್ರಧಾನಿ ಹುದ್ದೆ. ಕರ್ನಾಟಕ ಬಿಜೆಪಿ ನಾಯಕರು ಬರಿ ಹೆಸರಿಗಷ್ಟೇ" ಎಂದು ಹೇಳಿದ್ದಾರೆ. ಇನ್ನೂ ಕೆಲವರು ನೀವು ಏನೇ ಮಾಡಿದರೂ ತಮಿಳುನಾಡಿನಲ್ಲಿ ಬಿಜೆಪಿ ಒಂದೂ ಸ್ಥಾನವನ್ನು ಗೆಲ್ಲಲಾಗದರು ಎಂದು ಕಾಲೆಳದಿದ್ದಾರೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications