ಫ್ಲೈ ಬಸ್ಗಾಗಿ ಕಣ್ಣೂರು ಏರ್ಪೋರ್ಟ್ನಿಂದ ಕೆಎಸ್ಆರ್ಟಿಸಿಗೆ ಪತ್ರ
ಬೆಂಗಳೂರು, ಜೂನ್ 04 : 2018ರ ಡಿಸೆಂಬರ್ನಲ್ಲಿ ಆರಂಭವಾಗ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿಮಾನ ನಿಲ್ದಾಣಕ್ಕೆ ಫ್ಲೈ ಬಸ್ ಆರಂಭಿಸಬೇಕು ಎಂದು ವಿಮಾನ ನಿಲ್ದಾಣ ಕೆಎಸ್ಆರ್ಟಿಸಿಗೆ ಪತ್ರ ಬರೆದಿದೆ.
ಕರ್ನಾಟಕದ ಮೈಸೂರು, ಕೊಡಗು ಜಿಲ್ಲೆಗಳಿಂದ ಕಣ್ಣೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸಲು ಫ್ಲೈ ಬಸ್ ಸೇವೆ ಆರಂಭಿಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಮನವಿ ಮಾಡಿದೆ.
2018ರಲ್ಲಿ ಕಣ್ಣೂರು ವಿಮಾನ ನಿಲ್ದಾಣ ಆರಂಭವಾಗಿದ್ದು ಕೇರಳ ಮತ್ತು ಕರ್ನಾಟಕ-ಕೇರಳ ಗಡಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಕಣ್ಣೂರು, ಕಾಸರಗೋಡು, ವಯನಾಡು, ಕೋಯಿಕ್ಕೋಡ್, ಕೊಡಗು, ಮೈಸೂರು ಭಾಗದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ಅನುಕೂಲವಾಗಿದೆ.
ಕೆಎಸ್ಆರ್ಟಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರವಾಗಿ ಸಂಪರ್ಕ ಕಲ್ಪಿಸಲು ಫ್ಲೈ ಬಸ್ ಸೇವೆಯನ್ನು ಆರಂಭಿಸಿದೆ. ಮೈಸೂರು, ಮಣಿಪಾಲ್, ಮಂಗಳೂರು ಸೇರಿದಂತೆ ವಿವಿಧ ನಗರಗಳಿಂದ ನೇರವಾಗಿ ಜನರ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಪತ್ರದಲ್ಲಿ ಏನಿದೆ?
ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೈಸೂರು, ಕೊಡಗು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಫ್ಲೈ ಬಸ್ ಸೇವೆಯನ್ನು ಆರಂಭಿಸಬೇಕು ಎಂದು ಕಣ್ಣೂರು ವಿಮಾನ ನಿಲ್ದಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಗೆ ಪತ್ರ ಬರೆದಿದೆ.

ಕರ್ನಾಟಕ-ಕೇರಳ ಗಡಿಯಲ್ಲಿದೆ
ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದ ವಿವಿಧ ನಗರಗಳಿಗೂ ಹತ್ತಿರದಲ್ಲಿದೆ. ವಿರಾಜಪೇಟೆಯಿಂದ 58 ಕಿ.ಮೀ., ಮಡಿಕೇರಿಯಿಂದ 90 ಕಿ.ಮೀ. ಮತ್ತು ಮೈಸೂರಿನಿಂದ 158 ಕಿ.ಮೀ.ದೂರದಲ್ಲಿದೆ.

ಬೆಂಗಳೂರು ನಿಲ್ದಾಣ ಬಳಸುತ್ತಿದ್ದರು
ಕಣ್ಣೂರು ವಿಮಾನ ನಿಲ್ದಾಣ ಆರಂಭವಾಗುವ ಮೊದಲು ಮೈಸೂರು, ಮಡಿಕೇರಿ ಭಾಗದ ಪ್ರಯಾಣಿಕರು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಳಸುತ್ತಿದ್ದರು. ಈಗ ಅವರು ಕಣ್ಣೂರು ವಿಮಾನ ನಿಲ್ದಾಣ ಬಳಸುತ್ತಿದ್ದಾರೆ.

2018ರಲ್ಲಿ ಏರ್ ಪೋರ್ಟ್ ಆರಂಭ
1,900 ಎಕರೆ ಪ್ರದೇಶದಲ್ಲಿ ಕಣ್ಣೂರು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. 2018ರ ಡಿಸೆಂಬರ್ನಲ್ಲಿ ನಿಲ್ದಾಣ ಕಾರ್ಯಾರಂಭ ಮಾಡಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications