ಕಾಂಗ್ರೆಸ್ ಜನರ ಆಯ್ಕೆಯಲ್ಲ ಎಂಬುದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ: ಕಪಿಲ್ ಸಿಬಲ್
ನವದೆಹಲಿ, ನವೆಂಬರ್ 16: ಕಾಂಗ್ರೆಸ್ ನಾಯಕರು ಪಕ್ಷವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ಸಿಗ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರು ಕಾಂಗ್ರೆಸ್ ಅನ್ನು ಪರಿಣಾಮಕಾರಿ ಪರ್ಯಾಯವಾಗಿ ಪರಿಗಣಿಸುತ್ತಿಲ್ಲ ಎನ್ನುವುದಕ್ಕೆ ಬಿಹಾರ ವಿಧಾನಸಭೆ ಚುನಾವಣೆ ಮತ್ತು ಉಪ ಚುನಾವಣೆಗಳಲ್ಲಿನ ಕಾಂಗ್ರೆಸ್ನ ಕಳಪೆ ಪ್ರದರ್ಶನವೇ ಸಾಕ್ಷಿ ಎಂದು ಅವರು ಕಿಡಿಕಾರಿದ್ದಾರೆ.
ಪಕ್ಷದ ನಾಯಕತ್ವ ಮತ್ತು ರಚನೆಯಲ್ಲಿ ಆಮೂಲಾಗ್ರ ಬದಲಾವಣೆಗಳು ಆಗಬೇಕು ಎಂದು ಕೆಲವು ತಿಂಗಳ ಹಿಂದೆ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ 23 ಮುಖಂಡರಲ್ಲಿ ಒಬ್ಬರಾಗಿದ್ದ ಕಪಿಲ್ ಸಿಬಲ್, ಪಕ್ಷದ ನಾಯಕತ್ವ ವೈಫಲ್ಯದ ಬಗ್ಗೆ ಅನೇಕ ಬಾರಿ ಬಹಿರಂಗವಾಗಿ ಧ್ವನಿ ಎತ್ತಿದ್ದರು.
ಪಕ್ಷದಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ ಎನ್ನುವುದು ಕಾಂಗ್ರೆಸ್ಗೆ ಚೆನ್ನಾಗಿ ತಿಳಿದಿದೆ, ಅವುಗಳಿಗೆ ಉತ್ತರವೂ ಗೊತ್ತಿದೆ. ಆದರೆ ಅವುಗಳನ್ನು ಗುರುತಿಸುವ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಸಿಬಲ್ ಹೇಳಿದ್ದಾರೆ. ಮುಂದೆ ಓದಿ.

ನಮಗೆ ಬೆನ್ನು ತೋರಿಸಿದರು
'ನಾವು ಕೆಲವು ಮಂದಿ ನಮ್ಮ ಅಭಿಪ್ರಾಯಗಳನ್ನು ಪೆನ್ನಿನಿಂದ ಕಾಗದದ ಮೇಲೆ ಇಳಿಸಿದ್ದೆವು. ಮುಂದಿನ ಹಾದಿಯಲ್ಲಿ ಕಾಂಗ್ರೆಸ್ ಏನು ಮಾಡಬೇಕು ಎಂಬುದನ್ನು ತಿಳಿಸಿದ್ದೆವು. ಆದರೆ ನಮ್ಮನ್ನು ಆಲಿಸುವ ಬದಲು ನಮ್ಮೆಡೆಗೆ ಬೆನ್ನು ತೋರಿಸಿದರು. ಅದರ ಫಲಿತಾಂಶವನ್ನು ನೀವು ನೋಡುತ್ತಿದ್ದೀರಿ. ದೇಶದ ಜನರು, ಬಿಹಾರ ಮಾತ್ರವಲ್ಲ ಆದರೆ ಉಪ ಚುನಾವಣೆ ನಡೆದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಅನ್ನು ಪರಿಣಾಮಕಾರಿ ಪರ್ಯಾಯ ಪಕ್ಷ ಎಂದು ಪರಿಗಣಿಸದೆ ಇರುವುದು ಸ್ಪಷ್ಟವಾಗಿದೆ' ಎಂದಿದ್ದಾರೆ.

ಆತ್ಮಾವಲೋಕನ ಮಾಡದೆ ಆರು ವರ್ಷವಾಯ್ತು
ಇದು ಆತ್ಮಾವಲೋಕನದ ಸಮಯ ಎಂದಿರುವ ಸಿಬಲ್, ''ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯನಾಗಿರುವ ನನ್ನ ಸಹೋದ್ಯೋಗಿಯೊಬ್ಬರು ಒಂದು ದಿನ, 'ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂಬ ಭರವಸೆ ಇದೆ' ಎಂದು ಹೇಳಿದ್ದರು. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳದೆ ಆರು ವರ್ಷಗಳಾದವು. ಈಗ ಆತ್ಮಾವಲೋಕನ ಮಾಡಿಕೊಳ್ಳುವ ಭರವಸೆ ಎಲ್ಲಿಂದ ಬರಬೇಕು? ಕಾಂಗ್ರೆಸ್ನಲ್ಲಿರುವ ಸಮಸ್ಯೆ ಏನೆಂದು ನಮಗೆ ಗೊತ್ತಿದೆ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗ್ರಾಫ್ ಕುಸಿಯುತ್ತಲೇ ಹೋಗಲಿದೆ
'ಸಂಘಟನಾತ್ಮಕವಾಗಿ ಏನು ತಪ್ಪಾಗಿದೆ ಎನ್ನುವುದು ನಮಗೆ ಗೊತ್ತು. ನಮಗೆ ಎಲ್ಲ ಉತ್ತರಗಳೂ ಇವೆ. ಸ್ವತಃ ಕಾಂಗ್ರೆಸ್ಗೆ ಎಲ್ಲ ಉತ್ತರಗಳೂ ಗೊತ್ತು. ಆದರೆ ಆ ಉತ್ತರಗಳನ್ನು ಗುರುತಿಸಲು ಅವರಿಗೆ ಇಚ್ಛಾಶಕ್ತಿ ಇಲ್ಲ. ಹೀಗಿರುವಾಗ ಗ್ರಾಫ್ ಕುಸಿಯುತ್ತಲೇ ಹೋಗುತ್ತದೆ. ಕಾಂಗ್ರೆಸ್ ಧೈರ್ಯಶಾಲಿಯಾಗಬೇಕು ಮತ್ತು ಉತ್ತರಗಳನ್ನು ಕಂಡುಕೊಳ್ಳಲು ಮುಂದಾಗಬೇಕು' ಎಂದು ಹೇಳಿದ್ದಾರೆ.

ಉಪ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನ
ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗುಜರಾತ್ನಲ್ಲಿ ಎಲ್ಲ ಎಂಟು ಸ್ಥಾನಗಳಲ್ಲಿ ಸೋತಿದೆ. ಅವರಲ್ಲಿ ಮೂವರು ಅಭ್ಯರ್ಥಿಗಳ ಠೇವಣಿ ಕೂಡ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಏಳು ಕ್ಷೇತ್ರಗಳ ಪೈಕಿ ಕೆಲವು ಕಡೆ ಶೇ 2ಕ್ಕಿಂತಲೂ ಕಡಿಮೆ ಮತಗಳನ್ನು ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿಯೂ ಇದುವರೆಗೂ ಅಧಿಕಾರದಲ್ಲಿದ್ದ ಕಾಂಗ್ರೆಸ್ 28 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದೆ ಎಂದು ಅವರು ಹೇಳಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications