ಚಿತ್ರಗಳು:ವಿಜಯ ದಿವಸ: ಕಾರ್ಗಿಲ್ ಹುತಾತ್ಮ ಯೋಧರಿಗೆ ದೇಶದ ನಮನ
ಬೆಂಗಳೂರು, ಜು.26: ದೇಶಾದ್ಯಂತ ಇಂದು ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಮಿ ಚೀಫ್ ಜನರಲ್ ಬಿಪಿನ್ ತಾವತ್ ಅವರೊಂದಿಗೆ ನವದೆಹಲಿಯ ಅಮರ್ಜವಾನ್ ಜ್ಯೋತಿಗೆ ತೆರಳಿ ಗೌರವ ಸಲ್ಲಿಸಿದರು. ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ಕಾರ್ಗಿಲ್ ವಿಜಯ್ ದಿವಸ್' ಆಚರಣೆಮಾಡಲಾಗುತ್ತಿದೆ.
ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ. ಭಾರತ ಸರ್ಕಾರ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟ, ಧೈರ್ಯ ಮತ್ತು ಸಾಹಸಗಳಿಂದ ಆಪರೇಷನ್ ವಿಜಯ್'ಗೆ ಯಶಸ್ವಿಗೊಳಿಸಿದ, ರೈಫಲ್ ಮ್ಯಾನ್ ಸಂಜಯ್ ಕುಮಾರ್, ನಯಿಬ್ ಸುಬೇದಾರ್ ಯೋಗೇಂದ್ರ ಸಿಂಗ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ಮತ್ತು ವಿಕ್ರಮ್ ಬಾತ್ರಾರವರಿಗೆ ಸೇನೆಯ ಅತ್ಯುನ್ನತ ಪ್ರಶಸ್ತಿಯಾದ ಪರಮವೀರ ಚಕ್ರ ಪುರಸ್ಕಾರವನ್ನು ನೀಡಿ ಗೌರವಿಸಿತ್ತು.
ಪಾಕಿಸ್ತಾನದ ಕರಾಚಿಯಲ್ಲಿ ಚುನಾವಣಾ ಅಧಿಕಾರಿಗಳು ಮತ ಎಣಿಕೆಯಲ್ಲಿ ತೊಡಗಿದ್ದರು.ಇನ್ನು ನವದೆಹಲಿಯಲ್ಲಿ ಬುಧವಾರ ನಡೆದ ಇಂಡಿಯಾ ಕೋಚರ್ ವೀಕ್ನಲ್ಲಿ ಡಿಸೈನರ್ ತಹಿಲಿಯಾನಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆತೊಟ್ಟು ರಾಂಪ್ ಮೇಲೆ ಹೆಜ್ಜೆ ಹಾಕಿದರು.
ಇನ್ನು ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಸರ್ಕಾರದ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಮರಾಠ ಸಂಘಟನೆಗಳು ಸೋಮವಾರದಿಂದ ಪ್ರತಿಭಟನೆ ಕೈಗೊಂಡು, ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿದ್ದರು. ಬಂದ್ ಹಿಂಸಾಚಾರಕ್ಕೆ ತೆರುಗಿದ ಹಿನ್ನೆಲೆಯಲ್ಲಿ ಬಂದ್ ಹಿಂಪಡೆಯಲಾಗಿದೆ ಈ ಎಲ್ಲಾ ಘಟನೆಗಳನ್ನು ಚಿತ್ರಗಳ ಮೂಲಕ ವೀಕ್ಷಿಸಬಹುದಾಗಿದೆ.

ನಿರ್ಮಲಾ ಸೀತಾರಾಮನ್ ಯೋಧರಿಗೆ ನಮನ
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಮಿ ಚೀಫ್ ಜನರಲ್ ಬಿಪಿನ್ ರಾವತ್ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನವದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಯೋಧರಿಗೆ ನಮನ ಸಲ್ಲಿಸಿದರು.

ಕರಾಚಿಯಲ್ಲಿ ಮತ ಎಣಿಕೆ ಮಾಡುತ್ತಿರುವ ಚುನಾವಣಾ ಅಧಿಕಾರಿಗಳು
ಪಾಕಿಸ್ತಾನದಲ್ಲಿ ನಡೆದ ಚುನಾವಣೆ ಬಳಿಕ ಚುನಾವಣಾ ಅಧಿಕಾರಿಗಳು ಕರಾಚಿಯಲ್ಲಿ ಮತೆಣಿಕೆ ಮಾಡುತ್ತಿರುವ ದೃಶ್ಯವನ್ನು ನೀವು ನೋಡಬಹುದಾಗಿದೆ.

ಮಹಾರಾಷ್ಟ್ರ ಬಂದ್: ವಾಹನಗಳಿಗೆ ಬೆಂಕಿ
ಮಹಾರಾಷ್ಟ್ರ ಸರ್ಕಾರದಲ್ಲಿ ಮರಾಠಿಗರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡುವಂತೆ ಕರೆ ನೀಡಿದ್ದ ಮಹಾರಾಷ್ಟ್ರ ಬಂದ್ ಯಶಸ್ವಿಯಾಗದಿದ್ದರೂ ಬಂದ್ ಹಿಂಪಡೆಯಲಾಗಿದೆ. ಬಂದ್ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಬಂದ್ ವಾಪಸ್ ಪಡೆಯಲಾಗಿದೆ.

ಮೂವರು ಸಹೋದರಿಯರ ನಿಗೂಢ ಸಾವು
ನವದೆಹಲಿಯ ಮಂಡವಾಲಿ ಪ್ರದೇಶದಲ್ಲಿ ಮೂವರು ಸಹೋದರಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ, ತನಿಖೆ ಮುಂದುವರೆದಿದ್ಉ ಸಾವಿಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

ಭಾರತೀಯ ಉಡುಗೆಯಲ್ಲಿ ಮಿಂಚಿದ ರೂಪದರ್ಶಿಗಳು
ನವದೆಹಲಿಯಲ್ಲಿ ಇಂಡಿಯಾ ಕೋಚರ್ ವೀಕ್ನಲ್ಲಿ ಡಿಸೈನರ್ ತರುಣ್ ತಹಿಲಿಯಾನಿ ಅವರು ಕ್ರಿಯೇಷನ್ನಲ್ಲಿ ಭಾರತೀಯ ಉಡುಗೆ ತೊಟ್ಟು ಮಾಡೆಲ್ಗಳು ರಾಂಪ್ ಮೇಲೆ ಹೆಜ್ಜೆ ಹಾಕಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications