ರಾಜ್ಯದ ಬಿಜೆಪಿ ಸಂಸದರನ್ನು ಪ್ರಧಾನಿ ಮೋದಿ ಬೆಂಡೆತ್ತಿದ್ದು ಯಾಕೆ?
ನವದೆಹಲಿಯ ಪ್ರಧಾನಿ ನರೇಂದ್ರ ಮೋದಿ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯದ ಬಿಜೆಪಿ ಸಂಸದರಿಗೆ ಚಹಾ ಕೂಟ. ಈ ಕೂಟದಲ್ಲಿ ರಾಜ್ಯದ ಸಂಸದರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು, ಆಗಸ್ಟ್ 4: ದಕ್ಷಿಣ ಭಾರತದ ಬಿಜೆಪಿ ಸಂಸದರಿಗಾಗಿ ಪ್ರಧಾನಿ ನಿವಾಸದಲ್ಲಿ ಬುಧವಾರ ಬೆಳಗ್ಗೆ ಏರ್ಪಡಿಸಲಾಗಿದ್ದ ಚಹಾ ಕೂಟದಲ್ಲಿ ನರೇಂದ್ರ ಮೋದಿ ಅವರು ಸಂಸದರಿಗೆ ಛೀಮಾರಿ ಹಾಕಿದ್ದಾರೆಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನೀವು ವಿಫಲರಾಗಿದ್ದೀರಿ ಎಂದು ಪ್ರಧಾನಿ ಸಂಸದರನ್ನು ತರಾಟೆಗೆ ತೆಗೆದುಕೊಂಡರು ಎಂದು ಹೇಳಲಾಗಿದೆ. ಈ ಸಭೆಯಲ್ಲಿ ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರೂ ಭಾಗವಹಿಸಿದ್ದರು.

9 ಗಂಟೆಗೆ ಸರಿಯಾಗಿ ಆರಂಭವಾದ ಸಭೆಯಲ್ಲಿ, ಮೊದಲಿಗೆ ಸಂಸದರ ಉಭಯ ಕುಶಲೋಪರಿ ವಿಚಾರಿಸಿ ಆನಂತರ ಮಾತಿಗೆಳೆದ ಮೋದಿ, ನಿಧಾನವಾಗಿ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಸಾಗಿದರು. ಈ ಎಲ್ಲಾ ಪ್ರಶ್ನೆಗಳೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿದ ರೀತಿಯ ಬಗ್ಗೆಯೇ ಕೇಂದ್ರೀಕೃತವಾಗಿದ್ದವು.
ಆದರೆ, ಈ ಪ್ರಶ್ನೆಗಳಿಗೆ ರಾಜ್ಯದ ಸಂಸದರಾಗಲೀ ಅಥವಾ ದಕ್ಷಿಣ ಭಾರತದ ಯಾವುದೇ ಸಂಸದರಾಗಲೀ ಸೂಕ್ತವಾದ ಉತ್ತರಗಳನ್ನು ಕೊಡಲಿಲ್ಲ. ಇದರಿಂದ ಕೊಂಚ ಅಸಮಾಧಾನಗೊಂಡ ಮೋದಿ, ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸಂಸದರಾದ ನಿಮ್ಮ ಕರ್ತವ್ಯ. ನಿಮ್ಮ ರಾಜ್ಯಗಳಲ್ಲಿ ಬೇರೆ ಪಕ್ಷಗಳ ಸರ್ಕಾರಗಳು ಅಧಿಕಾರದಲ್ಲಿವೆ.
ಹಾಗಾಗಿ, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನೀವು ಹೆಚ್ಚು ಕೆಲಸ ಮಾಡಬೇಕಿರುತ್ತದೆ. ಹಾಗಿರುವಾಗ, ನೀವು ನಿರ್ಲಿಪ್ತರಾಗಿದ್ದರೆ ಮುಂಬರುವ ಚುನಾವಣೆಗಳಲ್ಲಿ ನಾವು ಜನರ ಬಳಿ ಮತ ಕೇಳಲು ಹೋಗುವುದಾದರೂ ಹೇಗೆ, ಆ ರಾಜ್ಯಗಳಲ್ಲಿ ಬಿಜೆಪಿಯು ಮೇಲ್ಪಂಕ್ತಿಗೆ ಬರುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಪರವಾಗಿ, ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ನಿರ್ಮಲ ಸೀತಾರಾಮನ್, ರಾಜ್ಯ ಸಂಸದರಾದ ಬಿ.ಎಸ್.ಯಡಿಯೂರಪ್ಪ , ಜಿ.ಎಂ.ಸಿದ್ದೇಶ್ವರ್, ಕರಡಿ ಸಂಗಣ್ಣ , ಶೋಭ ಕರಂದ್ಲಾಜೆ, ಪಿ.ಸಿ.ಮೋಹನ್, ನಳಿನ್ಕುಮಾರ್ ಕಟೀಲ್, ಸುರೇಶ್ ಅಂಗಡಿ, ಪ್ರತಾಪ್ ಸಿಂಹ, ಶ್ರೀರಾಮಲು, ರಾಜ್ಯಸಭಾ ಸದಸ್ಯರಾದ ಪ್ರಭಾಕರ್ ಕೋರೆ ಸೇರಿದಂತೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಪೂರ್ವ ತಯಾರಿ ಬಗ್ಗೆ ಚರ್ಚಿಸುವ ಉದ್ದೇಶದಿಂದಲೂ ಕರೆಯಲಾಗಿದ್ದ ಈ ಸಭೆಯಲ್ಲಿ ಸಂಸದರ ಸಾಧನೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬ ಬಗ್ಗೆಯೂ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications