ಕರ್ನಾಟಕ ನಮ್ಮ ದೊಡ್ಡಣ್ಣ, ಶತ್ರುವಲ್ಲ: ಗೋವಾ ಸಿಎಂ
ಪಣಜಿ, ಜುಲೈ 30: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕರ್ನಾಟಕದಲ್ಲಿ ಶನಿವಾರ ಬಂದ್ ಆಚರಿಸಲಾಗುತ್ತಿದೆ. ತೀರ್ಪು ಬಂದ ಕೂಡಲೇ 'ಹೋರಾಟ ಇನ್ನೂ ಮುಗಿದಿಲ್ಲ' ಎಂದು ಪ್ರತಿಕ್ರಿಯಿಸಿದ್ದ ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೆಕರ್ ಅವರು ಈಗ ಉಲ್ಟಾ ಹೇಳಿಕೆ ನೀಡಿದ್ದಾರೆ.
'ಕರ್ನಾಟಕ-ಗೋವಾ ಅಕ್ಕ ಪಕ್ಕ ರಾಜ್ಯಗಳು, ನಾವು ಕರ್ನಾಟಕವನ್ನು ಶತ್ರುವಿನಂತೆ ಕಾಣುತ್ತಿಲ್ಲ. ಕರ್ನಾಟಕ ನಮ್ಮ ದೊಡ್ಡಣ್ಣ ಇದ್ದ ಹಾಗೆ, ಮಹದಾಯಿ ತೀರ್ಪಿನ ಬಗ್ಗೆ ಕಾನೂನು ಹೋರಾಟ ಏನೇ ಇರಬಹುದು, ಉಭಯ ರಾಜ್ಯಗಳ ಪರಸ್ಪರ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು' ಎಂದು ಗೋವಾ ಸಿಎಂ ಲಕ್ಷ್ಮಿಕಾಂತ್ ಹೇಳಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೆಲ ರಾಜಕೀಯ ಶಕ್ತಿಗಳು ಎರಡು ರಾಜ್ಯಗಳ ನಡುವೆ ವಿಷಬೀಜ ಬಿತ್ತುತ್ತಿವೆ. ಇದರಿಂದ ಜನರು ಉದ್ರಿಕ್ತಗೊಂಡು ಬಂದ್ ನಡೆಸುತ್ತಿದ್ದಾರೆ. ನಾಗರಿಕರಾಗಿ ನಾವು ವರ್ತಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಗೋವಾದಿಂದ ಕರ್ನಾಟಕಕ್ಕೆ ಬಸ್ ಸಂಚಾರ ಈಗಾಗಲೇ ಬಂದ್ ಆಗಿದೆ, ಸೋಮವಾರ ತನಕ ಬಸ್ ಸಂಚಾರ ಇರುವುದಿಲ್ಲ. ಆದರೆ, ಕರ್ನಾಟಕದಿಂದ ಗೋವಾಕ್ಕೆ ಬಸ್ ಸಂಚಾರ ನಿಲ್ಲಿಸಿಲ್ಲ. ಶನಿವಾರ ಮಾತ್ರ ಬಂದ್ ಕಾರಣ ಬಸ್ ಸಂಚಾರ ಸ್ತಬ್ಧವಾಗಿದೆ.
ಕರ್ನಾಟಕದಲ್ಲಿರುವ ಗೋವಾ ಮೂಲದವರನ್ನು ರಕ್ಷಿಸುವ ಭರವಸೆ ಸಿಕ್ಕಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗಳು ಹಾಗೂ ಡಿಜಿಪಿಗಳು ಕರ್ನಾಟಕದ ಪ್ರತಿನಿಧಿಗಳ ಜತೆ ನಿರಂತ್ರ ಸಂಪರ್ಕದಲ್ಲಿದ್ದಾರೆ. ಕಾನೂನು ಹೋರಾಟ ಮುಂದುವರೆಯಲಿದೆ. ನ್ಯಾಯಾಂಗಕ್ಕೆ ತಲೆ ಬಾಗಬೇಕು. ಇದು ಅಂತಾರಾಜ್ಯ ಯುದ್ಧವಲ್ಲ ಎಂದು ಪರ್ಸೆಕರ್ ಹೇಳಿದ್ದಾರೆ. (ಪಿಟಿಐ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications