ಕರ್ನಾಟಕ ನಮ್ಮ ದೊಡ್ಡಣ್ಣ, ಶತ್ರುವಲ್ಲ: ಗೋವಾ ಸಿಎಂ
ಪಣಜಿ, ಜುಲೈ 30: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕರ್ನಾಟಕದಲ್ಲಿ ಶನಿವಾರ ಬಂದ್ ಆಚರಿಸಲಾಗುತ್ತಿದೆ. ತೀರ್ಪು ಬಂದ ಕೂಡಲೇ 'ಹೋರಾಟ ಇನ್ನೂ ಮುಗಿದಿಲ್ಲ' ಎಂದು ಪ್ರತಿಕ್ರಿಯಿಸಿದ್ದ ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೆಕರ್ ಅವರು ಈಗ ಉಲ್ಟಾ ಹೇಳಿಕೆ ನೀಡಿದ್ದಾರೆ.
'ಕರ್ನಾಟಕ-ಗೋವಾ ಅಕ್ಕ ಪಕ್ಕ ರಾಜ್ಯಗಳು, ನಾವು ಕರ್ನಾಟಕವನ್ನು ಶತ್ರುವಿನಂತೆ ಕಾಣುತ್ತಿಲ್ಲ. ಕರ್ನಾಟಕ ನಮ್ಮ ದೊಡ್ಡಣ್ಣ ಇದ್ದ ಹಾಗೆ, ಮಹದಾಯಿ ತೀರ್ಪಿನ ಬಗ್ಗೆ ಕಾನೂನು ಹೋರಾಟ ಏನೇ ಇರಬಹುದು, ಉಭಯ ರಾಜ್ಯಗಳ ಪರಸ್ಪರ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು' ಎಂದು ಗೋವಾ ಸಿಎಂ ಲಕ್ಷ್ಮಿಕಾಂತ್ ಹೇಳಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೆಲ ರಾಜಕೀಯ ಶಕ್ತಿಗಳು ಎರಡು ರಾಜ್ಯಗಳ ನಡುವೆ ವಿಷಬೀಜ ಬಿತ್ತುತ್ತಿವೆ. ಇದರಿಂದ ಜನರು ಉದ್ರಿಕ್ತಗೊಂಡು ಬಂದ್ ನಡೆಸುತ್ತಿದ್ದಾರೆ. ನಾಗರಿಕರಾಗಿ ನಾವು ವರ್ತಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಗೋವಾದಿಂದ ಕರ್ನಾಟಕಕ್ಕೆ ಬಸ್ ಸಂಚಾರ ಈಗಾಗಲೇ ಬಂದ್ ಆಗಿದೆ, ಸೋಮವಾರ ತನಕ ಬಸ್ ಸಂಚಾರ ಇರುವುದಿಲ್ಲ. ಆದರೆ, ಕರ್ನಾಟಕದಿಂದ ಗೋವಾಕ್ಕೆ ಬಸ್ ಸಂಚಾರ ನಿಲ್ಲಿಸಿಲ್ಲ. ಶನಿವಾರ ಮಾತ್ರ ಬಂದ್ ಕಾರಣ ಬಸ್ ಸಂಚಾರ ಸ್ತಬ್ಧವಾಗಿದೆ.
ಕರ್ನಾಟಕದಲ್ಲಿರುವ ಗೋವಾ ಮೂಲದವರನ್ನು ರಕ್ಷಿಸುವ ಭರವಸೆ ಸಿಕ್ಕಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗಳು ಹಾಗೂ ಡಿಜಿಪಿಗಳು ಕರ್ನಾಟಕದ ಪ್ರತಿನಿಧಿಗಳ ಜತೆ ನಿರಂತ್ರ ಸಂಪರ್ಕದಲ್ಲಿದ್ದಾರೆ. ಕಾನೂನು ಹೋರಾಟ ಮುಂದುವರೆಯಲಿದೆ. ನ್ಯಾಯಾಂಗಕ್ಕೆ ತಲೆ ಬಾಗಬೇಕು. ಇದು ಅಂತಾರಾಜ್ಯ ಯುದ್ಧವಲ್ಲ ಎಂದು ಪರ್ಸೆಕರ್ ಹೇಳಿದ್ದಾರೆ. (ಪಿಟಿಐ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications