ಗ್ಯಾರಂಟಿ ಯೋಜನೆಗಳಿಗೆ ಶೀಘ್ರದಲ್ಲೇ ಎಳ್ಳು-ನೀರು? ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?
ಗ್ಯಾರಂಟಿ ಯೋಜನೆಗಳ ಮೂಲಕವೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ದೇಶಾದ್ಯಂತ ಹೊಸ ಸಂಚಲನ ಸೃಷ್ಟಿ ಮಾಡಿತ್ತು. ಆದರೆ ಈಗ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕೈಯಲ್ಲಿ ಕಾಸು ಇಲ್ಲದೆ, ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲು ಸಜ್ಜಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸಿಎಂ ಸಿದ್ಧರಾಮಯ್ಯ ಅವರು ಸ್ಫೋಟಕ ಉತ್ತರ ನೀಡಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವಾ? ಮುಂದೆ ಓದಿ.
ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತೆ, ಕಾಂಗ್ರೆಸ್ ಗ್ಯಾರಂಟಿ ವಿಚಾರದಲ್ಲಿ ಬಿಜೆಪಿ & ಕಾಂಗ್ರೆಸ್ ಫೈಟ್ ಇನ್ನೂ ನಿಂತಿಲ್ಲ. ಅದರಲ್ಲೂ ಬಿಜೆಪಿ ಒಳ ಜಗಳದ ಕುರಿತು ರಾಜ್ಯ ಕಾಂಗ್ರೆಸ್ ನಾಯಕರು ಅಪಹಾಸ್ಯ ಮಾಡುವ ಸಮಯದಲ್ಲೇ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಕರ್ನಾಟಕದ ನಾಯಕರು ಸ್ಫೋಟಕ ಆರೋಪ ಮಾಡಿದ್ದರು. ಅಲ್ಲದೆ ಸೈಲೆಂಟ್ ಆಗಿ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲಿದೆ ಎಂದಿದ್ದರು. ಈಗ ಆ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಾದ್ರೆ ಇದೀಗ ಗ್ಯಾರಂಟಿ ಯೋಜನೆಗಳಿಗೆ ಸಿದ್ದರಾಮಯ್ಯ ಸರ್ಕಾರ ಎಳ್ಳು-ನೀರು ಬಿಡುತ್ತಾ? ಮುಂದೆ ಓದಿ.

ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ!
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಪ್ರಕಾರ, ಐದು ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಈ ಮೂಲಕ ನಮ್ಮ ಕರ್ನಾಟಕದ ಜನರಿಗೆ ಆರ್ಥಿಕವಾಗಿ ಬಲ ತುಂಬುವ ಪ್ರಯತ್ನ ಸಾಗಿತ್ತು. ಆದರೆ ಗ್ಯಾರಂಟಿ ಯೋಜನೆಗಳನ್ನ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಕಷ್ಟವಾಗುತ್ತಿದೆ, ಹಾಗೇ ಯೋಜನೆಗೆ ಸಾಕಾಗುವಷ್ಟು ಹಣ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಈ ಯೋಜನೆಗೆ ಗುಡ್ಬೈ ಹೇಳಲಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಇದೀಗ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ವೇಳೆ, ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಕುರಿತು ಸ್ಫೋಟಕ ಮಾಹಿತಿ ನೀಡಿದ್ದಾರೆ.
ಕನ್ನಡಿಗರ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಹಾಗಾದ್ರೆ ಈ ಕುರಿತು ಸಿದ್ದರಾಮಯ್ಯ ಅವರು ಹೇಳಿದ್ದೇನು? ಉತ್ತರ ಇಲ್ಲಿದೆ ಮುಂದೆ ಓದಿ.
ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಇಲ್ಲ!
ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಆರ್ಥಿಕವಾಗಿ ನೆರವು ನಿಡುವ ಜಾಗತಿಕ ಮೂಲ ಆದಾಯ ಪರಿಕಲ್ಪನೆಯನ್ನ ದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸಿದ್ದೇವೆ. ಇಂತಹ ಸಾಧನೆ ಮಾಡಿದ್ದು ನಮ್ಮ ಕರ್ನಾಟಕ ಎಂಬುದು ಹೆಮ್ಮೆ ವಿಷಯ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯುತ್ತವೆ ಎಂದರು. ಈ ಮೂಲಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡೆತಡೆ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications