ಬಿಎಸ್ವೈ ಹಿಂದೆ ದುಂಬಾಲು ಬಿದ್ದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳು
ಬೆಂಗಳೂರು, ಅ 13: ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಪ್ರಚಾರಕ್ಕೆ ತೆರಳಲಿದ್ದಾರೆ.
ಕಳೆದ ಮಹಾ ಅಸೆಂಬ್ಲಿ ಚುನಾವಣೆಯಲ್ಲೂ ಯಡಿಯೂರಪ್ಪ ಸುಮಾರು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಅದು, ಪಕ್ಷಕ್ಕೆ ಭರ್ಜರಿ ವರ್ಕೌಟ್ ಆಗಿತ್ತು.
ಲಿಂಗಾಯತ ಮತಬ್ಯಾಂಕ್ ಹೆಚ್ಚಾಗಿರುವ ಸುಮಾರು ನಲವತ್ತಕ್ಕೂ ಕ್ಷೇತ್ರಗಳು ಮಹಾರಾಷ್ಟ್ರದಲ್ಲಿದೆ. ಅಲ್ಲೆಲ್ಲಾ, ಪ್ರಚಾರಕ್ಕೆ ಬರಬೇಕೆಂದು, ಪಕ್ಷದ ಅಭ್ಯರ್ಥಿಗಳು, ಯಡಿಯೂರಪ್ಪನವರಿಗೆ ತೀವ್ರ ಒತ್ತಡ ಹಾಕುತ್ತಿದ್ದಾರೆಂದು ವರದಿಯಾಗಿದೆ.

ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಯಡಿಯೂರಪ್ಪ, ಅಕ್ಟೋಬರ್ ಹದಿನೈದರಿಂದ ಮೂರು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಕಲಬುರಗಿಯಿಂದ ರಸ್ತೆಯ ಮೂಲಕ, ಮಹಾರಾಷ್ಟ್ರಕ್ಕೆ ಯಡಿಯೂರಪ್ಪ ತಲುಪಲಿದ್ದಾರೆ.
ಕೊಲ್ಹಾಪುರ, ಸೊಲ್ಹಾಪುರ, ಪುಣೆ, ನಾಂದೇಡ್ ಜಿಲ್ಲೆಗಳಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ, ಮತ್ತು, ಕನ್ನಡಿಗರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಅಕ್ಟೋಬರ್ ಹದಿನೇಳರಿಂದ ಯಡಿಯೂರಪ್ಪ, ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ತೆರಳಲು ನಿರ್ಧರಿಸಿದ್ದರು. ಆದರೆ, ಆ ವೇಳೆ, ಮೋದಿ ಮತ್ತು ಶಾ ಅವರ ಸಾರ್ವಜನಿಕ ಸಭೆ ಆಯೋಜನೆಗೊಂಡಿರುವುದರಿಂದ, ಎರಡು ದಿನಗಳ ಮೊದಲೇ, ಬಿಎಸ್ವೈ, ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.












Click it and Unblock the Notifications