ಡೈರಿಯಲ್ಲಿ ಕಂಡ ಡೊನೆಷನ್ ಆರ್ ಜಿ ಟೂರಿಗೆ ವಿನಿಯೋಗ: ಸಿಟಿಆರ್
ಕರ್ನಾಟಕದ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಮನೆಯಿಂದ ವಶ ಪಡಿಸಿಕೊಳ್ಳಲಾಗಿದೆ ಎನ್ನಲಾದ ಡೈರಿಯ ಆಯ್ದ ಭಾಗಗಳು ದೆಹಲಿಯಲ್ಲಿ ಗುರುವಾರ ಸಂಜೆ ಬಿಡುಗಡೆಯಾಗಿದೆ. ಇದಕ್ಕೆ ಟ್ವಿಟ್ಟರ್ ನಲ್ಲಿ ಬಗೆ ಬಗೆ ಪ್ರತಿಕ್ರಿಯೆಗಳು ಹರಿದು ಬಂದಿವೆ
ಬೆಂಗಳೂರು, ಫೆಬ್ರವರಿ 23: ಕರ್ನಾಟಕದ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಮನೆಯಿಂದ ವಶ ಪಡಿಸಿಕೊಳ್ಳಲಾಗಿದೆ ಎನ್ನಲಾದ ಡೈರಿಯ ಆಯ್ದ ಭಾಗಗಳು ದೆಹಲಿಯಲ್ಲಿ ಗುರುವಾರ ಸಂಜೆ ಬಿಡುಗಡೆಯಾಗಿದೆ. ರಾಷ್ಟ್ರೀಯ ಮಾಧ್ಯಮದ ಮೂಲಕ ಈ ಸುದ್ದಿ ಸ್ಫೋಟಗೊಳ್ಳುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಬಗೆ ಬಗೆ ಪ್ರತಿಕ್ರಿಯೆಗಳು ಹರಿದು ಬಂದಿವೆ.
ಕಾಂಗ್ರೆಸ್ ಹೈ ಕಮಾಂಡಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಾವಿರಾರು ಕೋಟಿ ರು ದೇಣಿಗೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಆರೋಪ ಮಾಡಿದ್ದರು. ಈ ಆರೋಪಕ್ಕೆ ಪೂರಕವಾಗಿ ಡೈರಿ ಬಿಡುಗಡೆಯಾಗಿದ್ದು, ಡೈರಿ ತುಂಬಾ ಯಾರಿಗೆ ಎಷ್ಟು ದುಡ್ಡು ನೀಡಲಾಗಿದೆ ಎಂಬ ವಿವರವಿದೆ.
ಆದರೆ, ಎಲ್ಲಾ ಹೆಸರುಗಳನ್ನು ಇನಿಶಿಯಲ್ ನಲ್ಲಿ ಬರೆಯಲಾಗಿದೆ. ಉದಾ: KJG,RG..ಇತ್ಯಾದಿ, ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಹೆಸರುಗಳು, ನೋನಿಯಾ ಗಾಂಧಿ, ರಾಹುಲ್ ಗಾಂಧಿ ಕಚೇರಿಗಳಿಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೋರಾ, ದಿಗ್ವೀಜಯ್ ಸಿಂಗ್ ಮತ್ತಿತರಿಗೆ ಕೋಟಿಗಳಿಗೆ ಹಣ ಸಂದಾಯವಾಗಿದೆ ಎಂಬ ಹೋಲಿಕೆಯ ಇನಿಶಿಯಲ್ ಗಳಿವೆ. [ಡೈರಿ ಸ್ಪೋಟ: ಕೋಟಿ ಕೋಟಿ ಹಣದ ಸಂಪೂರ್ಣ ವಿವರ]
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆಗಳು ಬಂದಿದ್ದು, ಈ ಎಲ್ಲಾ ಮೊತ್ತವನ್ನು ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸಕ್ಕೆ ಖರ್ಚು ಮಾಡಲಾಗಿದೆ ಎಂದು ಸಾರ್ವಜನಿಕರು ಹಾಸ್ಯ ಮಾಡಿದ್ದಾರೆ.

ಮಾಧ್ಯಮಗಳಿಂದ ಡೈರಿ ಬಹಿರಂಗ
ಕೆಪಿಸಿಸಿ ಖಜಾಂಚಿ ಹಾಗೂ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ, ಎಂಎಲ್ ಸಿ ಕೆ.ಗೋವಿಂದರಾಜು ಅವರ ಮನೆಯ ಮೇಲೆ 2016ರಲ್ಲಿ ಐಟಿ ದಾಳಿ ನಡೆಸಲಾಗಿತ್ತು.[ವಿವರ ಇಲ್ಲಿ ಓದಿ] ಈ ಸಂದರ್ಭದಲ್ಲಿ ಜಪ್ತಿ ಮಾಡಲಾದ ಡೈರಿ ಈಗ ಜಾರಿ ನಿರ್ದೇಶನಾಲಯದ ವಶದಲ್ಲಿದೆ. ಇದೇ ಡೈರಿಯ ಬಗ್ಗೆ ಯಡಿಯೂರಪ್ಪ ಸುಳಿವು ನೀಡಿದ್ದರು. ಅದೇ ಡೈರಿ ವಿವರ ಈಗ ಬಹಿರಂಗವಾಗಿದೆ.
|
ಸಿಟಿ ರವಿ ಪ್ರತಿಕ್ರಿಯೆ
ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದ ರಾಜು ಅವರ ಡೈರಿಯಲ್ಲಿ ಇರುವ ಮೊತ್ತದಲ್ಲಿ ಬಹುಪಾಲು ರಾಹುಲ್ ಗಾಂಧಿ ಅವರ ವಿದೇಶಿ ಯಾತ್ರೆಗೆ ವಿನಿಯೋಗಿಸಲಾಗಿದೆ ಎಂದ ಬಿಜೆಪಿ ಮುಖಂಡ ಸಿ.ಟಿ ರವಿ.
|
ಕುರ್ತಾ ಖರೀದಿಸಲಿಲ್ಲವೇ
ಸಾವಿರಾರು ಕೋಟಿ ರು ದೇಣಿಗೆ ಸಿಕ್ಕರೂ ರಾಹುಲ್ ಗಾಂಧಿ ಅವರು ಹರಿದ ಕುರ್ತಾ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಹೊಸ ಕುರ್ತಾ ಖರೀದಿಗೆ ದುಡ್ಡು ಸಾಲುತ್ತಿಲ್ಲವೇ?
|
ಸರ್ಕಾರದಿಂದ ಡೈರಿ ಭಾಗ್ಯ
ಸಿದ್ದರಾಮಯ್ಯ ಸರ್ಕಾರದಿಂದ ಡೈರಿ ಭಾಗ್ಯ, ಭ್ರಷ್ಟಾಚಾರ ಭಾಗ್ಯ #donationagate
|
ಟಿವಿ ಸ್ಕ್ರೀನ್ ಶಾಟ್ ಹಂಚಿಕೆ
ಟೈಮ್ಸ್ ನೌ #donationgate ಅಡಿಯಲ್ಲಿ ಭ್ರಷ್ಟಾಚಾರದ ಮಾಹಿತಿ ಬಹಿರಂಗ ಪಡಿಸುತ್ತಿದ್ದಂತೆ ವಿವರಗಳನ್ನು ಹಂಚಿಕೊಂಡ ಸಾರ್ವಜನಿಕರು.
|
ಬಿಬಿಎಂಪಿ ಹಗರಣ ಬಯಲಿಗೆ
ಯಡಿಯೂರಪ್ಪ ಅವರು ಶುಕ್ರವಾರದಂದು 3,000 ಕೋಟಿ ರು ಮೌಲ್ಯದ ಬಿಬಿಎಂಪಿ ಹಗರಣದ ವಿವರ ನೀಡಲಿದ್ದಾರೆ, ಕಾದು ನೋಡಿ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications