ಸಂವಿಧಾನವನ್ನು ನಾಶ ಮಾಡುತ್ತಿರುವ ಬಿಜೆಪಿ: ಮಾಯಾವತಿ ಆರೋಪ
ಬೆಂಗಳೂರು, ಮೇ 17: "ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಾಶ ಮಾಡುವ ಪಿತೂರಿ ಇದು" ಎಂದು ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ಬಿ ಎಸ್ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.
ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಅಂಗಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಸಂವಿಧಾನವನ್ನು ನಾಶ ಮಾಡಲು ಪಿತೂರಿ ನಡೆಸುತ್ತಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ.

ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ, ಕಾಂಗ್ರೆಸ್ 78 ಸ್ಥಾನ, ಜೆಡಿಎಸ್ 38 ಸ್ಥಾನ ಮತ್ತು ಇತರರು 2 ಸ್ಥಾನ ಗೆದ್ದಿದ್ದರು. ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿದ ಬಿಜೆಪಿ, ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರನ್ನು ಆರಿಸಿತ್ತು. ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ್ದರಿಂದ ರಾಜ್ಯದ 24 ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದರು.











Click it and Unblock the Notifications