ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಿಎಸ್ ವೈ: ರಮಣ್ ಸಿಂಗ್

|
Google Oneindia Kannada News

ರಾಜ್ನಂದ್ ಗಾಂವ್, ಏಪ್ರಿಲ್ 21: "ಕರ್ನಾಟಕಕ್ಕೆ ಹೊಸ ನಾಯಕತ್ವದ ಅಗತ್ಯವಿದೆ" ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಹೇಳಿದ್ದಾರೆ.

75 ವರ್ಷ ವಯಸ್ಸು ಯಡಿಯೂರಪ್ಪ ಪಾಲಿಗೆ ಕೇವಲ ನಂಬರ್!75 ವರ್ಷ ವಯಸ್ಸು ಯಡಿಯೂರಪ್ಪ ಪಾಲಿಗೆ ಕೇವಲ ನಂಬರ್!

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿ ಎಸ್ ಯಡಿಯೂರಪ್ಪ ಏ.19 ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗಿದ್ದ ರಮಣ್ ಸಿಂಗ್ ಯಡಿಯೂರಪ್ಪನವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka Elections: Change is need of the hour says Raman Singh

"ಯಡಿಯೂರಪ್ಪನವರು ನನಗೆ ಹಳೇ ಸ್ನೇಹಿತರು. ಶಿಕಾರಿಪುರದಿಂದ ಸ್ಪರ್ಧಿಸುತ್ತಿರುವ ಅವರಿಗೆ ಬೆಂಬಲ ನೀಡಲು ಮತ್ತು ಅವರ ಪರವಾಗಿ ಪ್ರಚಾರ ಮಾಡಲು ನಾನು ಇಲ್ಲಿಗೆ ಬಂಧಿದ್ದೇನೆ. ಅವರಿಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕ ರಾಜ್ಯ ಹೊಸ ನಾಯಕತ್ವವನ್ನು ಬಯಸುತ್ತಿದೆ. ಬದಲಾವಣೆಯನ್ನು ಬಯಸುತ್ತಿದೆ. ಕಾಂಗ್ರೆಸ್ಸನ್ನು ಕರ್ನಾಟಕದ ಜನ ಸೋಲಿಸಸಲಿದ್ದಾರೆ ಮತ್ತು ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ" ಎಂದು ಅವರು ಹೇಳಿದರು.

ಮೇ.12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮೇ. 15 ರಂದು ಫಲಿತಾಂಶ ಹೊರಬೀಳಲಿದೆ.

English summary
Karnataka assembly Elections 2018: The poll-bound state of Karnatakaneeds a change in its leadership, Chhattisgarh Chief Minister Raman Singh said on Aapril 21st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X