Pragya Singh: ಪ್ರಚೋದನಕಾರಿ ಭಾಷಣ: ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಕರ್ನಾಟಕ ಬಿಜೆಪಿ ಸರ್ಕಾರ

ನವದೆಹಲಿ ಡಿಸೆಂಬರ್ 29: ಶಿವಮೊಗ್ಗದಲ್ಲಿ ಸಾಧ್ವಿಪ್ರಜ್ಞಾ ಸಿಂಗ್ ಅವರ ವಿವಾದಾತ್ಮಕ ಹೇಳಿಕೆಯಿಂದಾಗಿ ಕರ್ನಾಟಕ ಬಿಜೆಪಿ ಸರ್ಕಾರ ಎಫ್‌ಐಆರ್ ದಾಖಲಿಸಿದೆ. ಪೊಲೀಸರು 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಕರ್ನಾಟಕದ ಶಿವಮೊಗ್ಗದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ವಾರ್ಷಿಕ ಸಮಾವೇಶದಲ್ಲಿ ಮಾತನಾಡುತ್ತಿದ್ದ ಭೋಪಾಲ್ ಸಂಸದೆ ಪ್ರಜ್ಞಾ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಮಾರಂಭದಲ್ಲಿ ಪ್ರಜ್ಞಾ ಠಾಕೂರ್ ಅವರು ಹಿಂದೂ ಕಾರ್ಯಕರ್ತರ ಹತ್ಯೆಯ ಬಗ್ಗೆ ಮಾತನಾಡುವಾಗಲೂ ತಮ್ಮ ಮೇಲೆ ಮತ್ತು ಅವರ ಘನತೆಯ ಮೇಲೆ ದಾಳಿ ಮಾಡುವವರಿಗೆ ಪ್ರತಿಕ್ರಿಯಿಸುವ ಹಕ್ಕು ಹಿಂದೂಗಳಿಗೆ ಇದೆ ಎಂದು ಹೇಳಿದ್ದರು.

Karnataka Govt Registers FIR against Sadhvi Pragya Singh her controversial statement in Shivamogga

"ಅವರು ಜಿಹಾದ್ ಸಂಪ್ರದಾಯವನ್ನು ಹೊಂದಿದ್ದಾರೆ. ಅವರು ಏನನ್ನೂ ಮಾಡದಿದ್ದರೂ ಲವ್ ಜಿಹಾದ್ ಮಾಡುತ್ತಾರೆ. ಲವ್ ಮಾಡಿ ಅವರು ಅದರಲ್ಲಿ ಜಿಹಾದ್ ಮಾಡುತ್ತಾರೆ. ನಾವು (ಹಿಂದೂಗಳು) ಕೂಡ ಪ್ರೀತಿಸುತ್ತೇವೆ. ನಾವು ದೇವರನ್ನು ಪ್ರೀತಿಸುತ್ತೇವೆ. ಸನ್ಯಾಸಿ ತನ್ನ ದೇವರನ್ನು ಪ್ರೀತಿಸುತ್ತಾನೆ" ಎಂದು ಠಾಕೂರ್ ಹೇಳಿದ್ದರು.

"ದೇವರು ಸೃಷ್ಟಿಸಿದ ಈ ಜಗತ್ತಿನಲ್ಲಿ ಸನ್ಯಾಸಿ ಹೇಳುವುದು ಇಷ್ಟೇ ಎಲ್ಲಾ ದಬ್ಬಾಳಿಕೆಗಾರರನ್ನು ಮತ್ತು ಪಾಪಿಗಳನ್ನು ಕೊನೆಗೊಳಿಸಿ, ಇಲ್ಲದಿದ್ದರೆ ನಿಜವಾದ ಪ್ರೀತಿ ಇಲ್ಲಿ ಉಳಿಯುವುದಿಲ್ಲ. ಆದ್ದರಿಂದ ಲವ್ ಜಿಹಾದ್‌ನಲ್ಲಿ ತೊಡಗಿರುವವರಿಗೆ ಅದೇ ರೀತಿಯಲ್ಲಿ ಉತ್ತರಿಸಿ. ನಿಮ್ಮ ಹುಡುಗಿಯರನ್ನು ರಕ್ಷಿಸಿ, ಅವರಿಗೆ ಸರಿಯಾದ ಮೌಲ್ಯಗಳನ್ನು ಕಲಿಸಿ" ಎಂದು ಅವರು ಹೇಳಿದರು.

Karnataka Govt Registers FIR against Sadhvi Pragya Singh her controversial statement in Shivamogga

ಆಗ ಠಾಕೂರ್ ಹಿಂದೂಗಳು ಕನಿಷ್ಠ ತಮ್ಮ ಮನೆಯಲ್ಲಿ ಚಾಕುಗಳನ್ನು ಇಟ್ಟುಕೊಳ್ಳಬೇಕೆಂದು ಕರೆ ನೀಡಿದರು. ಏಕೆಂದರೆ ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದ್ದಾರೆ ಎಂದಿದ್ದರು. "ನಿಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಿ, ಏನಿಲ್ಲವೆಂದರೂ ತರಕಾರಿಗಳನ್ನು ಕತ್ತರಿಸಲು ಬಳಸುತ್ತಿದ್ದ ಕನಿಷ್ಠ ಚಾಕುಗಳನ್ನಾದರೂ ಇಟ್ಟುಕೊಳ್ಳಿ. ಯಾವಾಗ ಯಾವ ಪರಿಸ್ಥಿತಿ ಬರುತ್ತದೋ ಗೊತ್ತಿಲ್ಲ. ಎಲ್ಲರಿಗೂ ಆತ್ಮರಕ್ಷಣೆ ಹಕ್ಕಿದೆ. ನಮ್ಮ ಮನೆಗೆ ಯಾರಾದರೂ ನುಸುಳಿದರೆ ಮತ್ತು ನಮ್ಮ ಮೇಲೆ ದಾಳಿ ಮಾಡಿದರೆ ಆಗ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಅದು ನಮಗೆ ಸಹಾಯ ಮಾಡುತ್ತದೆ. ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ" ಎಂದು ಅವರು ಹೇಳಿದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಸದ್ಯ ಕರ್ನಾಟಕ ಬಿಜೆಪಿ ಸರ್ಕಾರ ಎಫ್‌ಐಆರ್ ದಾಖಲಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+