ಕೇಂದ್ರ ಬಜೆಟ್ 2023: ಬಜೆಟ್ ಬಗ್ಗೆ ಭರವಸೆ ಕಳೆದುಕೊಂಡ ಸಿದ್ದರಾಮಯ್ಯ..!
ಫೆಬ್ರವರಿ 1ರಂದು 2023-24ನೇ ಸಾಲಿನ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಬಜೆಟ್ನಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ. ಇದು ಭರವಸೆಗಳಿಂದ ತುಂಬಿರುತ್ತದೆ. ಆದರೆ ಅದನ್ನು ಈಡೇರಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳಿನ ಬಿಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
2023-24ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ನಾಳಿನ ಬಜೆಟ್ ಹೇಗಿರಲಿದೆ ಎನ್ನುವ ಬಗ್ಗೆ ಇಂದೇ ಮಾಹಿತಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 'ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷವನ್ನು ಮರಳಿ ತರಲು ನಿರ್ಧರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ನಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ. ಇದು ಭರವಸೆಗಳಿಂದ ತುಂಬಿರುತ್ತದೆ. ಆದರೆ ಯಾವುದನ್ನೂ ಈಡೇರಿಸುವುದಿಲ್ಲ' ಎಂದಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿದೆ. ಹಿಂದಿನ ಎರಡರಂತೆ ಈ ಬಾರಿಯೂ 2023-24 ರ ಕೇಂದ್ರ ಬಜೆಟ್ ಅನ್ನು ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ.
The people of #Karnataka have decided to bring back the Congress party in the upcoming elections in May. I have no expectations from Nirmala Sitharaman’s Budget. It will be full of promises but none will be fulfilled: Karnataka LoP #Siddaramaiah #Budget2023
— TOI Bengaluru (@TOIBengaluru) January 31, 2023
ಬಜೆಟ್ ನಿರೀಕ್ಷೆಗಳು:-
2024 ರ ಸಾರ್ವತ್ರಿಕ ಚುನಾವಣೆಯ ಮುನ್ನ ಮಂಡನೆಯಾಗುತ್ತಿರುವ ಪೂರ್ಣ ವರ್ಷದ ಕೊನೆಯ ಬಜೆಟ್ ಕೂಡ ಹೌದು ಹಾಗಾಗಿ ಮಹತ್ವಾಕಾಂಕ್ಷೆ ಹೆಚ್ಚಿದೆ. ಎಫ್ಎಂ ನಿರ್ಮಲಾ ಸೀತಾರಾಮನ್ ಅವರಿಂದ ನಿರೀಕ್ಷಿಸಲಾದ ಪ್ರಮುಖ ಘೋಷಣೆಗಳು ಇಲ್ಲಿದೆ.

*ಬಜೆಟ್ನಲ್ಲಿ ತೆರಿಗೆ ದರಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.
*ಜನರ ವೇತನ ಉಳಿತಾಯದ ದೃಷ್ಟಿಯಿಂದ ಮೂಲ ವಿನಾಯಿತಿ ಮಿತಿಯನ್ನು ಪ್ರಸ್ತುತ ರೂ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕೆಂದು ತಜ್ಞರು ಬಯಸುತ್ತಾರೆ.
*ವರ್ಷಕ್ಕೆ 1 ಲಕ್ಷ ರೂಪಾಯಿಗಳ ತೆರಿಗೆ ರಹಿತ ಮಿತಿಯನ್ನು ಕನಿಷ್ಠ 2 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಬಹುದು ಎಂಬುದು ರಿಟೇಲ್ ಹೂಡಿಕೆದಾರರ ನಿರೀಕ್ಷೆಯಾಗಿದೆ.
*ಸರ್ಕಾರ ಈ ವರ್ಷದ ಬಜೆಟ್ನಲ್ಲಿ ಇನ್ನೂ 400 ಹೊಸ ವಂದೇ ಭಾರತ್ ರೈಲುಗಳ ಯೋಜನೆಗಳನ್ನು ಅನಾವರಣಗೊಳಿಸುವ ಸಾಧ್ಯತೆಯಿದೆ.
*ಪಾನ್ ಸಂಖ್ಯೆಯನ್ನು ಅಳವಡಿಸಿಕೊಳ್ಳಲು ಕಾನೂನು ಮತ್ತು ಕಾರ್ಯಾಚರಣೆಯ ಚೌಕಟ್ಟನ್ನು ಹೊರತರಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications