ಇಂಧನ ಮರುನವೀಕರಣ, ಕರ್ನಾಟಕ ಅಪಾರದರ್ಶಕ : ಗೋಯಲ್ ಆರೋಪ
ಬೆಂಗಳೂರು, ಜನವರಿ 06 : ಕರ್ನಾಟಕ ಮರುನವೀಕರಿಸಬಹುದಾದ ಇಂಧನ ಯೋಜನೆಯನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಪಾರದರ್ಶಕ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರು ಆರೋಪಿಸಿದ್ದಾರೆ.
ಕರ್ನಾಟಕ ಎದುರಿಸುತ್ತಿರುವ ಇಂಧನ ಕೊರತೆಯ ಕುರಿತಂತೆ ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪಿಯೂಶ್ ಗೋಯಲ್ ಅವರು ಉತ್ತರಿಸುತ್ತಿದ್ದರು. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯ ಬಗ್ಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಮಾಡಿರುವ ಮನವಿಯ ಬಗ್ಗೆ ಮುನಿಯಪ್ಪ ಪ್ರಸ್ತಾಪಿಸಿದರು.
ಕರ್ನಾಟಕದ ಇಂಧನ ಸಚಿವರು ಮರುನವೀಕರಣ ಇಂಧನ ಮತ್ತು ಇಂಧನ ಕೊಳ್ಳುವಿಕೆಗಾಗಿ ಮಾರ್ಗದರ್ಶಿಯನ್ನು ನಿಗದಿ ಮಾಡಲು ಮಾತ್ರ ನನ್ನನ್ನು ಸಂಪರ್ಕಿಸಿದ್ದಾರೆ. ಆದರೆ, ಇನ್ನು ಅವರು ಪಾರದರ್ಶಕ ಕ್ರಿಯೆಯ ಮೂಲಕ ಮಾಡಿಲ್ಲ, ಒಡಂಬಡಿಕೆಯ ಆಧಾರದ ಮೇಲೆ ಮಾಡುತ್ತಿದ್ದಾರೆ. ಇದರಿಂದಾಗಿ ತೊಂದರೆಯಾಗುತ್ತಿದೆ ಎಂದು ಉತ್ತರಿಸಿದರು.

ಪಿಯೂಶ್ ಗೋಯಲ್ ಅವರು ಇಂಧನ ಸಚಿವರಾಗಿದ್ದಾಗ, ಸ್ಪರ್ಧಾತ್ಮಕ ಹರಾಜಿನ ಬದಲು ಇಂಧನ ಕೊಳ್ಳುವಿಕೆ ಒಪ್ಪಂದದ ಆಧಾರದ ಮೇಲೆ ಹೊಸ ಮತ್ತು ಮರುನವೀಕರಣ ಇಂಧನ ಯೋಜನೆಯ ಬಗ್ಗೆ ಕರ್ನಾಟಕ ಉತ್ಸುಕತೆ ತೋರಿದ್ದಾಗ ಅದಕ್ಕೆ ಉತ್ತೇಜನ ನೀಡಿದ್ದರು.
ಸ್ಪರ್ಧಾತ್ಮಕ ಹರಾಜಿನ ಮೂಲಕ ಮರುನವೀಕರಣ ಇಂಧನ ಯೋಜನೆಯನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರಕಾರ ಎಲ್ಲ ರಾಜ್ಯಗಳನ್ನು ಕೋರುತ್ತಿದೆ. ಇಂಧನ ಕೊಳ್ಳುವಿಕೆ ಒಪ್ಪಂದ ಅಥವಾ ಗುತ್ತಿಗೆ ಒಪ್ಪಂದ ಮಾಡಿಕೊಳ್ಳುವುದಕ್ಕಿಂತ ಸ್ಪರ್ಧಾತ್ಮಕ ಹರಾಜಿಗೆ ಕಡಿಮೆ ವ್ಯಯವಾಗುತ್ತದೆ ಎಂಬುದು ಕೇಂದ್ರದ ಅಭಿಪ್ರಾಯ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications