ಇಂಧನ ಮರುನವೀಕರಣ, ಕರ್ನಾಟಕ ಅಪಾರದರ್ಶಕ : ಗೋಯಲ್ ಆರೋಪ
ಬೆಂಗಳೂರು, ಜನವರಿ 06 : ಕರ್ನಾಟಕ ಮರುನವೀಕರಿಸಬಹುದಾದ ಇಂಧನ ಯೋಜನೆಯನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಪಾರದರ್ಶಕ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರು ಆರೋಪಿಸಿದ್ದಾರೆ.
ಕರ್ನಾಟಕ ಎದುರಿಸುತ್ತಿರುವ ಇಂಧನ ಕೊರತೆಯ ಕುರಿತಂತೆ ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಪಿಯೂಶ್ ಗೋಯಲ್ ಅವರು ಉತ್ತರಿಸುತ್ತಿದ್ದರು. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯ ಬಗ್ಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಮಾಡಿರುವ ಮನವಿಯ ಬಗ್ಗೆ ಮುನಿಯಪ್ಪ ಪ್ರಸ್ತಾಪಿಸಿದರು.
ಕರ್ನಾಟಕದ ಇಂಧನ ಸಚಿವರು ಮರುನವೀಕರಣ ಇಂಧನ ಮತ್ತು ಇಂಧನ ಕೊಳ್ಳುವಿಕೆಗಾಗಿ ಮಾರ್ಗದರ್ಶಿಯನ್ನು ನಿಗದಿ ಮಾಡಲು ಮಾತ್ರ ನನ್ನನ್ನು ಸಂಪರ್ಕಿಸಿದ್ದಾರೆ. ಆದರೆ, ಇನ್ನು ಅವರು ಪಾರದರ್ಶಕ ಕ್ರಿಯೆಯ ಮೂಲಕ ಮಾಡಿಲ್ಲ, ಒಡಂಬಡಿಕೆಯ ಆಧಾರದ ಮೇಲೆ ಮಾಡುತ್ತಿದ್ದಾರೆ. ಇದರಿಂದಾಗಿ ತೊಂದರೆಯಾಗುತ್ತಿದೆ ಎಂದು ಉತ್ತರಿಸಿದರು.

ಪಿಯೂಶ್ ಗೋಯಲ್ ಅವರು ಇಂಧನ ಸಚಿವರಾಗಿದ್ದಾಗ, ಸ್ಪರ್ಧಾತ್ಮಕ ಹರಾಜಿನ ಬದಲು ಇಂಧನ ಕೊಳ್ಳುವಿಕೆ ಒಪ್ಪಂದದ ಆಧಾರದ ಮೇಲೆ ಹೊಸ ಮತ್ತು ಮರುನವೀಕರಣ ಇಂಧನ ಯೋಜನೆಯ ಬಗ್ಗೆ ಕರ್ನಾಟಕ ಉತ್ಸುಕತೆ ತೋರಿದ್ದಾಗ ಅದಕ್ಕೆ ಉತ್ತೇಜನ ನೀಡಿದ್ದರು.
ಸ್ಪರ್ಧಾತ್ಮಕ ಹರಾಜಿನ ಮೂಲಕ ಮರುನವೀಕರಣ ಇಂಧನ ಯೋಜನೆಯನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರಕಾರ ಎಲ್ಲ ರಾಜ್ಯಗಳನ್ನು ಕೋರುತ್ತಿದೆ. ಇಂಧನ ಕೊಳ್ಳುವಿಕೆ ಒಪ್ಪಂದ ಅಥವಾ ಗುತ್ತಿಗೆ ಒಪ್ಪಂದ ಮಾಡಿಕೊಳ್ಳುವುದಕ್ಕಿಂತ ಸ್ಪರ್ಧಾತ್ಮಕ ಹರಾಜಿಗೆ ಕಡಿಮೆ ವ್ಯಯವಾಗುತ್ತದೆ ಎಂಬುದು ಕೇಂದ್ರದ ಅಭಿಪ್ರಾಯ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications