ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಹುಮತ 'ಸೃಷ್ಟಿಸಲು' ರಾಜ್ಯಪಾಲರ ಅವಕಾಶ: ಚಿದಂಬರಂ ಕಿಡಿ

|
Google Oneindia Kannada News

ನವದೆಹಲಿ, ಮೇ 17: ಕರ್ನಾಟಕದ ರಾಜ್ಯಪಾಲ ವಜೂಭಾಯಿ ವಾಲಾ ಅವರು 104 ಸಂಖ್ಯೆಯನ್ನು 111ಕ್ಕೆ ಹೆಚ್ಚಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ 15 ದಿನಗಳ ಅವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಕಿಡಿಕಾರಿದ್ದಾರೆ.

15 ದಿನಗಳಲ್ಲಿ ಬಹುಮತ ಸೃಷ್ಟಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎಂದು ಬಿಜೆಪಿಯು ರಾಜ್ಯಪಾಲರಿಂದ ಬಂದ ಆಹ್ವಾನ ಪತ್ರದ ಪ್ರತಿಯನ್ನು ಬಹಿರಂಗಪಡಿಸಿದ ಬಳಿಕ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಆಹ್ವಾನ ನೀಡದೆ ರಾಜ್ಯಪಾಲರು ವಾಮಮಾರ್ಗ ಹಿಡಿಯಬಾರದಿತ್ತು ಎಂದು ಚಿದಂಬರಂ ಹೇಳಿದ್ದಾರೆ.

Karnataka Results p chidambaram criticise governors decision for inviting bjp to form government

'ನಮ್ಮ ಬಹುಮತ ಸ್ಪಷ್ಟಪಡಿಸಲಾಗಿದೆ. ರಾಜ್ಯಪಾಲರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಸರ್ಕಾರ ರಚನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳನ್ನು ಆಹ್ವಾನಿಸಬೇಕಿತ್ತು ಎಂದು ಮತ್ತೊಬ್ಬ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.

English summary
Karnataka Election Results 2018: Senior congress leader P Chidambaram criticise Karnataka governor Vajubhai vala for inviting Bjp to form government even it has less number of MLAs than Congress-JDS coalination
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X